Latest Updates
-
ಬಿಸಿಲ ಝಳದಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಸಣ್ಣ ಬದಲಾವಣೆ ಸಾಕು! -
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ!
ಸಂತೋಷಪಡುವವರಿಗೆ ಸಿಹಿ ತಿನಿಸು ಚಂಪಾಕಲಿ

ಇವತ್ತು ಕರ್ನಾಟಕ ರಾಜ್ಯವನ್ನು ಆಳುತ್ತಿರುವ ಬಿಜೆಪಿ ಸರಕಾರ ನೆನೆನೆನೆಗುದಿಗೆ ಬಿದ್ದಿದೆ. ಸರಕಾರ ಇರತ್ತೋ ಬೀಳತ್ತೋ ಎನ್ನುವಂತಹ ಸಂದಿಗ್ಧ ಪರಿಸ್ಥಿತಿ ಉಂಟಾಗಿದೆ. ಈ ಸನ್ನಿವೇಶವು ದೈನಂದಿನ ರಾಜಕೀಯ ಬೆಳವಣಿಗೆಯಲ್ಲಿ ಆಸಕ್ತಿಯಿರುವ ನಾನಾ ನಮೂನೆಯ ಜನಕ್ಕೆ ನಾನಾ ಬಗೆಯ ಪುಳಕ, ಛಳಕವನ್ನು ಹುಟ್ಟುಹಾಕಿದೆ. ಭಾಜಪ ಸರಕಾರ ಬೀಳದಿದ್ದರೆ ಸಾಕು, ಬಿದ್ದರೆ ಸಾಕು, ಎದ್ದರೆಷ್ಟು ಬಿದ್ದರೆಷ್ಟು, ಎನ್ನುವ ಮೂರು ಬಗೆಯ ಓಗುಗರಿಗಾಗಿ ಇವತ್ತು ಎಸ್ ಕೆ ಸಿ ಉಪಾಹಾರ ಮಾಡಲಾಗಿದೆ.
ಸಂತೋಷಪಡುವವರಿಗೆ ಚಂಪಾಕಲಿಯನ್ನೂ, ದುಃಖಪಡುವವರಿಗೆ ಖಾರದ ತಿಂಡಿಯನ್ನೂ ಎರಡೂ ಆಗದೆ ತಟಸ್ಥರಾಗಿರುವವರಿಗೆ ಜಸ್ಟ್ ಫಿಲ್ಟರ್ ಕಾಫಿಯನ್ನು ಸರ್ವ್ ಮಾಡಲಾಗುತ್ತಿದೆ.
ಚಂಪಾಕಲಿ
ಏನೇನು ಬೇಕು : ಅರ್ಧ ಕೆಜಿ ಮೈದಾಹಿಟ್ಟು. ಅರ್ಧ ಕೆಜಿ ಸಕ್ಕರೆ. ಅರ್ಧ ಬಟ್ಟಲು ಅಡುಗೆ ಎಣ್ಣೆ. ಚೂರು ಉಪ್ಪು. ಅಡಿಗೆಗೆ ಬಳಸುವ ಬಣ್ಣ ಚಿಟಿಕೆ. ಒಂದು ಬಟ್ಟಲು ತುಪ್ಪ.
ಮಾಡುವ ರೀತಿ : ಮೈದಾಹಿಟ್ಟಿಗೆ ಚೂರುಎಣ್ಣೆ , ಉಪ್ಪು ಹಾಕಿ ನೀರಿನಲ್ಲಿ ಕಲಸಿ ಇಡಬೇಕು. ಹಿಟ್ಟು ಮೆತ್ತಗಾಗುವಷ್ಟು, ಎಷ್ಟು ಬೇಕೋ ಅಷ್ಟು ನೀರು ಹಾಕಬೇಕು. ಒಟ್ಟಿನಲ್ಲಿ ಹಿಟ್ಟು ಗಟ್ಟಿಯಾಗಿ ಲಟ್ಟಣಿಗೆಯಲ್ಲಿ ಲಟ್ಟಿಸುವುದಕ್ಕೆ ಲಗತ್ತಾಗಿರಬೇಕು. ಇನ್ನೊಂದು ಪಾತ್ರೆಯಲ್ಲಿ ಸಕ್ಕರೆ ಮುಳುಗುವಷ್ಟು ನೀರು ಹಾಕಿ ಒಲೆ ಮೇಲೆ ಇಟ್ಟು ಪಾಕಮಾಡಿಕೊಂಡಿರಿ.
ಉರುಳೆ ಮಾಡಿಕೊಂಡ ಹಿಟ್ಟನ್ನು ಚೆನ್ನಾಗಿ ಅಡುಗೆ ಕಟ್ಟೆಯ ಗ್ರಾನೈಟ್ ಕಲ್ಲಿನ ಮೇಲೆ ನಾದಿಕೊಳ್ಳಿರಿ. ಉರುಳೆ ಮಾಡುವಾಗ ಚಂಪಾಕಲಿಯ ಒಟ್ಟು ಆಕಾರ ಮನಸ್ಸಿನಲ್ಲಿರಲಿ. ಸಿದ್ದವಾದ ಉರುಳೆಗಳನ್ನು ಬೆರಳಿನಿಂದ ಎರಡು ಬಾರಿ ಹಿಂದಕ್ಕೆ ಮುಂದಕ್ಕೆ ಮಡಿಚಿ ನಂತರ ಮಧ್ಯೆ ಚಾಕುವುನಿಂದ ಹೊಟ್ಟೆ ಸೀಳುವ ಹಾಗೆ ಕೊಯ್ದುಕೊಳ್ಳಿ. ಮತ್ತೆ ಅದನ್ನು ಕೈ ಬೆರಳಲ್ಲಿ ಆಡಿಸುತ್ತಾ ಶಂಖಾಕಾರಕ್ಕೆ ಹೊರಳಿಸಿ, ಅರಳಿಸಿ.
ಹೂವಿನಾಕಾರಕ್ಕೆ ಬಂದ ಹಿಟ್ಟನ್ನು ಹಿಂದಕ್ಕೆ ಅರ್ಧ ಮಡಿಚಿ ಚೆನ್ನಾಗಿ ಬಿಸಿಯಾದ ತುಪ್ಪದ ಬಾಣಲೆಯಲ್ಲಿ ಹಾಕಿ. ಕರಿಯುವ ಅಗತ್ಯವಿಲ್ಲ. ಸ್ವಲ್ಪಹೊತ್ತು ಚಂಪಾ ಬೆಂದನಂತರ ಹೊರತೆಗೆದು ಸಿದ್ದವಾಗಿಟ್ಟುಕೊಂಡ ಸಕ್ಕರೆಪಾಕಕ್ಕೆ ಹಾಕಿ. ಸ್ವಲ್ಪಹೊತ್ತು ಸಕ್ಕರೆ ಪಾಕದಲ್ಲಿ ಮುಳುಗಿಸಿಟ್ಟ ಚಂಪಾಕಲಿಯನ್ನು ತೆಳುವಾದ ಇಕ್ಕಳದಿಂದ (ಬೈಸೆಪ್ಸ್) ತೆಗೆದು ತಟ್ಟೆಯ ಮೇಲಿಡಿ. ಚಂಪಾಕಲಿಯ ಕೆಳಗೆ ಸಣ್ಣ ಆಕೃತಿಗೆ ಕಟ್ ಮಾಡಿಟ್ಟುಕೊಂಡ ಪ್ಲಾಸ್ಟಿಕ್ ಹಾಳೆಗಳಿದ್ದರೆ ತೆಗೆದಿಡುವುದಕ್ಕೆ ಈಜಿ.
ಭಾಜಪ ಸಂಕಷ್ಟಕ್ಕೆ ಸಿಲುಕಿರುವುದರಿಂದ ಬೇಜಾರಾಗಿರುವವರು ಖಾರಾ ತಿಂಡಿಗೆ ಬನ್ನಿ. ಖಾರ ಅಂದ್ರೆ ಧಾರವಾಡ ಮಿರ್ಚಿ ಬಜಿಗಿಂತ ಖಾರವಾದ ತಿನಿಸು ಬೇರೇನಿದೆ. ಬನ್ನಿ ಧಾರವಾಡ ಮಿರ್ಚಿ ಬಜಿ ಹೇಗೆ ಮಾಡುವುದೆಂದು ತಿಳಿಯೋಣ.



Click it and Unblock the Notifications