Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ನರಕ ಚತುರ್ದಶಿಯಂದು ಮಾಡು ಬೇಸನ್ ಲಾಡು

ಬೇಕಾದ ಸಾಮಗ್ರಿಗಳು:
ಕಡಲೆ ಹಿಟ್ಟು (ಕಡಲೆ ಬೇಳೆ ಬೀಸಿಸಿ ಮಾಡಿದ್ದು) : ಒಂದು ಕಪ್
ಪುಡಿ ಮಾಡಿದ ಸಕ್ಕರೆ: ಮುಕ್ಕಾಲು ಕಪ್
ತುಪ್ಪ: ಅರ್ಧ ಕಪ್
ಏಲಕ್ಕಿ: ಒಂದೆರಡು
ಕೇಸರಿ : 8-10 ದಳ
ಗೋಡಂಬಿ, ಒಣ ದ್ರಾಕ್ಷಿ, ಬಾದಾಮಿ: ಒಂದು ಕಪ್
ಮಾಡುವ ವಿಧಾನ:
ದಪ್ಪ ತಳದ ಪಾತ್ರೆಯಲ್ಲಿ ಒಂದೆರಡು ಚಮಚ ತುಪ್ಪ ಹಾಕಿ ಒಣ ದ್ರಾಕ್ಷಿ, ಅರೆ ಬರೆ ಕುಟ್ಟಿದ ಗೋಡಂಬಿ, ಬಾದಾಮಿಯನ್ನು ಕರಿದು ಇಟ್ಟುಕೊಳ್ಳಬೇಕು. ಇದೇ ಬಾಣಲೆಗೆ ಒಂದೆರಡು ಚಮಚ ತುಪ್ಪ ಹಾಕಿ ಕಡಲೆ ಹಿಟ್ಟನ್ನು ಮಂದ ಉರಿಯಲ್ಲಿ ಹುರಿಯಬೇಕು. ಕಡಲೆ ಹಿಟ್ಟು ಸೀಯದ ಹಾಗೆ ಒಂದೇ ಸಮನೆ ಮಗುಚುವ ಕೈಯಿಂದ ಬಾಣಲೆಯಲ್ಲಿ ಕೈಯಾಡಿಸುತ್ತಿರಬೇಕು. ಹಿಟ್ಟು ತುಸು ಕಂದು ಬಣ್ಣಕ್ಕೆ, ಘಮ್ಮೆನ್ನುವ ಪರಿಮಳ ಬಂದಾಗ ಉಳಿದ ತುಪ್ಪವನ್ನು ಬೆರೆಸಿ ಒಲೆಯ ಮೇಲಿಂದ ಇಳಿಸಬೇಕು. ಏಲಕ್ಕಿ ಬೆರೆಸಿ ಪುಡಿ ಮಾಡಿದ ಸಕ್ಕರೆ, ಕೇಸರಿ ದಳ, ತುಪ್ಪದಲ್ಲಿ ಕರಿದ ಗೋಡಂಬಿ, ದ್ರಾಕ್ಷಿ, ಬಾದಾಮಿಯನ್ನು ಬೆರೆಸಿ ಮಿಶ್ರಣ ಮಾಡಬೇಕು. ಮಿಶ್ರಣ ಆರಿದ ನಂತರ ಉಂಡೆ ಕಟ್ಟಬೇಕು.
(ಗಮನಿಸಿ: ಕಡಲೆ ಹಿಟ್ಟನ್ನು ಜರಡಿ ಹಿಡಿದುಕೊಂಡರೆ ಗಂಟಾಗುವುದಿಲ್ಲ, ಹುರಿಯಲು ಸುಲಭ.)
ಎಲ್ಲ ದಟ್ಸ್ ಕನ್ನಡ ಓದುಗರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು.



Click it and Unblock the Notifications
