Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ನರಕ ಚತುರ್ದಶಿಯಂದು ಮಾಡು ಬೇಸನ್ ಲಾಡು

ಬೇಕಾದ ಸಾಮಗ್ರಿಗಳು:
ಕಡಲೆ ಹಿಟ್ಟು (ಕಡಲೆ ಬೇಳೆ ಬೀಸಿಸಿ ಮಾಡಿದ್ದು) : ಒಂದು ಕಪ್
ಪುಡಿ ಮಾಡಿದ ಸಕ್ಕರೆ: ಮುಕ್ಕಾಲು ಕಪ್
ತುಪ್ಪ: ಅರ್ಧ ಕಪ್
ಏಲಕ್ಕಿ: ಒಂದೆರಡು
ಕೇಸರಿ : 8-10 ದಳ
ಗೋಡಂಬಿ, ಒಣ ದ್ರಾಕ್ಷಿ, ಬಾದಾಮಿ: ಒಂದು ಕಪ್
ಮಾಡುವ ವಿಧಾನ:
ದಪ್ಪ ತಳದ ಪಾತ್ರೆಯಲ್ಲಿ ಒಂದೆರಡು ಚಮಚ ತುಪ್ಪ ಹಾಕಿ ಒಣ ದ್ರಾಕ್ಷಿ, ಅರೆ ಬರೆ ಕುಟ್ಟಿದ ಗೋಡಂಬಿ, ಬಾದಾಮಿಯನ್ನು ಕರಿದು ಇಟ್ಟುಕೊಳ್ಳಬೇಕು. ಇದೇ ಬಾಣಲೆಗೆ ಒಂದೆರಡು ಚಮಚ ತುಪ್ಪ ಹಾಕಿ ಕಡಲೆ ಹಿಟ್ಟನ್ನು ಮಂದ ಉರಿಯಲ್ಲಿ ಹುರಿಯಬೇಕು. ಕಡಲೆ ಹಿಟ್ಟು ಸೀಯದ ಹಾಗೆ ಒಂದೇ ಸಮನೆ ಮಗುಚುವ ಕೈಯಿಂದ ಬಾಣಲೆಯಲ್ಲಿ ಕೈಯಾಡಿಸುತ್ತಿರಬೇಕು. ಹಿಟ್ಟು ತುಸು ಕಂದು ಬಣ್ಣಕ್ಕೆ, ಘಮ್ಮೆನ್ನುವ ಪರಿಮಳ ಬಂದಾಗ ಉಳಿದ ತುಪ್ಪವನ್ನು ಬೆರೆಸಿ ಒಲೆಯ ಮೇಲಿಂದ ಇಳಿಸಬೇಕು. ಏಲಕ್ಕಿ ಬೆರೆಸಿ ಪುಡಿ ಮಾಡಿದ ಸಕ್ಕರೆ, ಕೇಸರಿ ದಳ, ತುಪ್ಪದಲ್ಲಿ ಕರಿದ ಗೋಡಂಬಿ, ದ್ರಾಕ್ಷಿ, ಬಾದಾಮಿಯನ್ನು ಬೆರೆಸಿ ಮಿಶ್ರಣ ಮಾಡಬೇಕು. ಮಿಶ್ರಣ ಆರಿದ ನಂತರ ಉಂಡೆ ಕಟ್ಟಬೇಕು.
(ಗಮನಿಸಿ: ಕಡಲೆ ಹಿಟ್ಟನ್ನು ಜರಡಿ ಹಿಡಿದುಕೊಂಡರೆ ಗಂಟಾಗುವುದಿಲ್ಲ, ಹುರಿಯಲು ಸುಲಭ.)
ಎಲ್ಲ ದಟ್ಸ್ ಕನ್ನಡ ಓದುಗರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು.



Click it and Unblock the Notifications


