Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ನರಕ ಚತುರ್ದಶಿಯಂದು ಮಾಡು ಬೇಸನ್ ಲಾಡು

ಬೇಕಾದ ಸಾಮಗ್ರಿಗಳು:
ಕಡಲೆ ಹಿಟ್ಟು (ಕಡಲೆ ಬೇಳೆ ಬೀಸಿಸಿ ಮಾಡಿದ್ದು) : ಒಂದು ಕಪ್
ಪುಡಿ ಮಾಡಿದ ಸಕ್ಕರೆ: ಮುಕ್ಕಾಲು ಕಪ್
ತುಪ್ಪ: ಅರ್ಧ ಕಪ್
ಏಲಕ್ಕಿ: ಒಂದೆರಡು
ಕೇಸರಿ : 8-10 ದಳ
ಗೋಡಂಬಿ, ಒಣ ದ್ರಾಕ್ಷಿ, ಬಾದಾಮಿ: ಒಂದು ಕಪ್
ಮಾಡುವ ವಿಧಾನ:
ದಪ್ಪ ತಳದ ಪಾತ್ರೆಯಲ್ಲಿ ಒಂದೆರಡು ಚಮಚ ತುಪ್ಪ ಹಾಕಿ ಒಣ ದ್ರಾಕ್ಷಿ, ಅರೆ ಬರೆ ಕುಟ್ಟಿದ ಗೋಡಂಬಿ, ಬಾದಾಮಿಯನ್ನು ಕರಿದು ಇಟ್ಟುಕೊಳ್ಳಬೇಕು. ಇದೇ ಬಾಣಲೆಗೆ ಒಂದೆರಡು ಚಮಚ ತುಪ್ಪ ಹಾಕಿ ಕಡಲೆ ಹಿಟ್ಟನ್ನು ಮಂದ ಉರಿಯಲ್ಲಿ ಹುರಿಯಬೇಕು. ಕಡಲೆ ಹಿಟ್ಟು ಸೀಯದ ಹಾಗೆ ಒಂದೇ ಸಮನೆ ಮಗುಚುವ ಕೈಯಿಂದ ಬಾಣಲೆಯಲ್ಲಿ ಕೈಯಾಡಿಸುತ್ತಿರಬೇಕು. ಹಿಟ್ಟು ತುಸು ಕಂದು ಬಣ್ಣಕ್ಕೆ, ಘಮ್ಮೆನ್ನುವ ಪರಿಮಳ ಬಂದಾಗ ಉಳಿದ ತುಪ್ಪವನ್ನು ಬೆರೆಸಿ ಒಲೆಯ ಮೇಲಿಂದ ಇಳಿಸಬೇಕು. ಏಲಕ್ಕಿ ಬೆರೆಸಿ ಪುಡಿ ಮಾಡಿದ ಸಕ್ಕರೆ, ಕೇಸರಿ ದಳ, ತುಪ್ಪದಲ್ಲಿ ಕರಿದ ಗೋಡಂಬಿ, ದ್ರಾಕ್ಷಿ, ಬಾದಾಮಿಯನ್ನು ಬೆರೆಸಿ ಮಿಶ್ರಣ ಮಾಡಬೇಕು. ಮಿಶ್ರಣ ಆರಿದ ನಂತರ ಉಂಡೆ ಕಟ್ಟಬೇಕು.
(ಗಮನಿಸಿ: ಕಡಲೆ ಹಿಟ್ಟನ್ನು ಜರಡಿ ಹಿಡಿದುಕೊಂಡರೆ ಗಂಟಾಗುವುದಿಲ್ಲ, ಹುರಿಯಲು ಸುಲಭ.)
ಎಲ್ಲ ದಟ್ಸ್ ಕನ್ನಡ ಓದುಗರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು.



Click it and Unblock the Notifications