Latest Updates
-
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್!
ನರಕ ಚತುರ್ದಶಿಯಂದು ಮಾಡು ಬೇಸನ್ ಲಾಡು

ಬೇಕಾದ ಸಾಮಗ್ರಿಗಳು:
ಕಡಲೆ ಹಿಟ್ಟು (ಕಡಲೆ ಬೇಳೆ ಬೀಸಿಸಿ ಮಾಡಿದ್ದು) : ಒಂದು ಕಪ್
ಪುಡಿ ಮಾಡಿದ ಸಕ್ಕರೆ: ಮುಕ್ಕಾಲು ಕಪ್
ತುಪ್ಪ: ಅರ್ಧ ಕಪ್
ಏಲಕ್ಕಿ: ಒಂದೆರಡು
ಕೇಸರಿ : 8-10 ದಳ
ಗೋಡಂಬಿ, ಒಣ ದ್ರಾಕ್ಷಿ, ಬಾದಾಮಿ: ಒಂದು ಕಪ್
ಮಾಡುವ ವಿಧಾನ:
ದಪ್ಪ ತಳದ ಪಾತ್ರೆಯಲ್ಲಿ ಒಂದೆರಡು ಚಮಚ ತುಪ್ಪ ಹಾಕಿ ಒಣ ದ್ರಾಕ್ಷಿ, ಅರೆ ಬರೆ ಕುಟ್ಟಿದ ಗೋಡಂಬಿ, ಬಾದಾಮಿಯನ್ನು ಕರಿದು ಇಟ್ಟುಕೊಳ್ಳಬೇಕು. ಇದೇ ಬಾಣಲೆಗೆ ಒಂದೆರಡು ಚಮಚ ತುಪ್ಪ ಹಾಕಿ ಕಡಲೆ ಹಿಟ್ಟನ್ನು ಮಂದ ಉರಿಯಲ್ಲಿ ಹುರಿಯಬೇಕು. ಕಡಲೆ ಹಿಟ್ಟು ಸೀಯದ ಹಾಗೆ ಒಂದೇ ಸಮನೆ ಮಗುಚುವ ಕೈಯಿಂದ ಬಾಣಲೆಯಲ್ಲಿ ಕೈಯಾಡಿಸುತ್ತಿರಬೇಕು. ಹಿಟ್ಟು ತುಸು ಕಂದು ಬಣ್ಣಕ್ಕೆ, ಘಮ್ಮೆನ್ನುವ ಪರಿಮಳ ಬಂದಾಗ ಉಳಿದ ತುಪ್ಪವನ್ನು ಬೆರೆಸಿ ಒಲೆಯ ಮೇಲಿಂದ ಇಳಿಸಬೇಕು. ಏಲಕ್ಕಿ ಬೆರೆಸಿ ಪುಡಿ ಮಾಡಿದ ಸಕ್ಕರೆ, ಕೇಸರಿ ದಳ, ತುಪ್ಪದಲ್ಲಿ ಕರಿದ ಗೋಡಂಬಿ, ದ್ರಾಕ್ಷಿ, ಬಾದಾಮಿಯನ್ನು ಬೆರೆಸಿ ಮಿಶ್ರಣ ಮಾಡಬೇಕು. ಮಿಶ್ರಣ ಆರಿದ ನಂತರ ಉಂಡೆ ಕಟ್ಟಬೇಕು.
(ಗಮನಿಸಿ: ಕಡಲೆ ಹಿಟ್ಟನ್ನು ಜರಡಿ ಹಿಡಿದುಕೊಂಡರೆ ಗಂಟಾಗುವುದಿಲ್ಲ, ಹುರಿಯಲು ಸುಲಭ.)
ಎಲ್ಲ ದಟ್ಸ್ ಕನ್ನಡ ಓದುಗರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು.



Click it and Unblock the Notifications