Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ನರಕ ಚತುರ್ದಶಿಯಂದು ಮಾಡು ಬೇಸನ್ ಲಾಡು

ಬೇಕಾದ ಸಾಮಗ್ರಿಗಳು:
ಕಡಲೆ ಹಿಟ್ಟು (ಕಡಲೆ ಬೇಳೆ ಬೀಸಿಸಿ ಮಾಡಿದ್ದು) : ಒಂದು ಕಪ್
ಪುಡಿ ಮಾಡಿದ ಸಕ್ಕರೆ: ಮುಕ್ಕಾಲು ಕಪ್
ತುಪ್ಪ: ಅರ್ಧ ಕಪ್
ಏಲಕ್ಕಿ: ಒಂದೆರಡು
ಕೇಸರಿ : 8-10 ದಳ
ಗೋಡಂಬಿ, ಒಣ ದ್ರಾಕ್ಷಿ, ಬಾದಾಮಿ: ಒಂದು ಕಪ್
ಮಾಡುವ ವಿಧಾನ:
ದಪ್ಪ ತಳದ ಪಾತ್ರೆಯಲ್ಲಿ ಒಂದೆರಡು ಚಮಚ ತುಪ್ಪ ಹಾಕಿ ಒಣ ದ್ರಾಕ್ಷಿ, ಅರೆ ಬರೆ ಕುಟ್ಟಿದ ಗೋಡಂಬಿ, ಬಾದಾಮಿಯನ್ನು ಕರಿದು ಇಟ್ಟುಕೊಳ್ಳಬೇಕು. ಇದೇ ಬಾಣಲೆಗೆ ಒಂದೆರಡು ಚಮಚ ತುಪ್ಪ ಹಾಕಿ ಕಡಲೆ ಹಿಟ್ಟನ್ನು ಮಂದ ಉರಿಯಲ್ಲಿ ಹುರಿಯಬೇಕು. ಕಡಲೆ ಹಿಟ್ಟು ಸೀಯದ ಹಾಗೆ ಒಂದೇ ಸಮನೆ ಮಗುಚುವ ಕೈಯಿಂದ ಬಾಣಲೆಯಲ್ಲಿ ಕೈಯಾಡಿಸುತ್ತಿರಬೇಕು. ಹಿಟ್ಟು ತುಸು ಕಂದು ಬಣ್ಣಕ್ಕೆ, ಘಮ್ಮೆನ್ನುವ ಪರಿಮಳ ಬಂದಾಗ ಉಳಿದ ತುಪ್ಪವನ್ನು ಬೆರೆಸಿ ಒಲೆಯ ಮೇಲಿಂದ ಇಳಿಸಬೇಕು. ಏಲಕ್ಕಿ ಬೆರೆಸಿ ಪುಡಿ ಮಾಡಿದ ಸಕ್ಕರೆ, ಕೇಸರಿ ದಳ, ತುಪ್ಪದಲ್ಲಿ ಕರಿದ ಗೋಡಂಬಿ, ದ್ರಾಕ್ಷಿ, ಬಾದಾಮಿಯನ್ನು ಬೆರೆಸಿ ಮಿಶ್ರಣ ಮಾಡಬೇಕು. ಮಿಶ್ರಣ ಆರಿದ ನಂತರ ಉಂಡೆ ಕಟ್ಟಬೇಕು.
(ಗಮನಿಸಿ: ಕಡಲೆ ಹಿಟ್ಟನ್ನು ಜರಡಿ ಹಿಡಿದುಕೊಂಡರೆ ಗಂಟಾಗುವುದಿಲ್ಲ, ಹುರಿಯಲು ಸುಲಭ.)
ಎಲ್ಲ ದಟ್ಸ್ ಕನ್ನಡ ಓದುಗರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು.



Click it and Unblock the Notifications











