Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ನರಕ ಚತುರ್ದಶಿಯಂದು ಮಾಡು ಬೇಸನ್ ಲಾಡು

ಬೇಕಾದ ಸಾಮಗ್ರಿಗಳು:
ಕಡಲೆ ಹಿಟ್ಟು (ಕಡಲೆ ಬೇಳೆ ಬೀಸಿಸಿ ಮಾಡಿದ್ದು) : ಒಂದು ಕಪ್
ಪುಡಿ ಮಾಡಿದ ಸಕ್ಕರೆ: ಮುಕ್ಕಾಲು ಕಪ್
ತುಪ್ಪ: ಅರ್ಧ ಕಪ್
ಏಲಕ್ಕಿ: ಒಂದೆರಡು
ಕೇಸರಿ : 8-10 ದಳ
ಗೋಡಂಬಿ, ಒಣ ದ್ರಾಕ್ಷಿ, ಬಾದಾಮಿ: ಒಂದು ಕಪ್
ಮಾಡುವ ವಿಧಾನ:
ದಪ್ಪ ತಳದ ಪಾತ್ರೆಯಲ್ಲಿ ಒಂದೆರಡು ಚಮಚ ತುಪ್ಪ ಹಾಕಿ ಒಣ ದ್ರಾಕ್ಷಿ, ಅರೆ ಬರೆ ಕುಟ್ಟಿದ ಗೋಡಂಬಿ, ಬಾದಾಮಿಯನ್ನು ಕರಿದು ಇಟ್ಟುಕೊಳ್ಳಬೇಕು. ಇದೇ ಬಾಣಲೆಗೆ ಒಂದೆರಡು ಚಮಚ ತುಪ್ಪ ಹಾಕಿ ಕಡಲೆ ಹಿಟ್ಟನ್ನು ಮಂದ ಉರಿಯಲ್ಲಿ ಹುರಿಯಬೇಕು. ಕಡಲೆ ಹಿಟ್ಟು ಸೀಯದ ಹಾಗೆ ಒಂದೇ ಸಮನೆ ಮಗುಚುವ ಕೈಯಿಂದ ಬಾಣಲೆಯಲ್ಲಿ ಕೈಯಾಡಿಸುತ್ತಿರಬೇಕು. ಹಿಟ್ಟು ತುಸು ಕಂದು ಬಣ್ಣಕ್ಕೆ, ಘಮ್ಮೆನ್ನುವ ಪರಿಮಳ ಬಂದಾಗ ಉಳಿದ ತುಪ್ಪವನ್ನು ಬೆರೆಸಿ ಒಲೆಯ ಮೇಲಿಂದ ಇಳಿಸಬೇಕು. ಏಲಕ್ಕಿ ಬೆರೆಸಿ ಪುಡಿ ಮಾಡಿದ ಸಕ್ಕರೆ, ಕೇಸರಿ ದಳ, ತುಪ್ಪದಲ್ಲಿ ಕರಿದ ಗೋಡಂಬಿ, ದ್ರಾಕ್ಷಿ, ಬಾದಾಮಿಯನ್ನು ಬೆರೆಸಿ ಮಿಶ್ರಣ ಮಾಡಬೇಕು. ಮಿಶ್ರಣ ಆರಿದ ನಂತರ ಉಂಡೆ ಕಟ್ಟಬೇಕು.
(ಗಮನಿಸಿ: ಕಡಲೆ ಹಿಟ್ಟನ್ನು ಜರಡಿ ಹಿಡಿದುಕೊಂಡರೆ ಗಂಟಾಗುವುದಿಲ್ಲ, ಹುರಿಯಲು ಸುಲಭ.)
ಎಲ್ಲ ದಟ್ಸ್ ಕನ್ನಡ ಓದುಗರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು.



Click it and Unblock the Notifications