Latest Updates
-
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು! -
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ! -
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ!
ಹೊಸ ಸರಕಾರದ ಬಾಯಿಗೆ ಬಾದಾಮಿ ಹಲ್ವಾ!
ಹೊಸ ಸರಕಾರಕ್ಕೂ ಬಾದಾಮಿ ಹಲ್ವಾಗೂ ಏನು ಸಂಬಂಧ ಅಂತ ಯೋಚಿಸುದ್ದೀರಾ? ಹಾಗೇನೂ ಇಲ್ಲ ಸೋಮವಾರ (ನ.12) ಅಧಿಕಾರ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪಕ್ಷದ ಕಾರ್ಯಕರ್ತರಿಗೆ ಬಾದಾಮಿ ಹಲ್ವಾ ತಿಂದಷ್ಟು ಸಂತೋಷವಾಗಿದೆ. ಹಾಗಾಗಿ ನೀವೂ ಅಷ್ಟೆ ಪಕ್ಷಭೇದ ಮರೆತು ಬಾದಾಮಿ ಹಲ್ವಾ ಮೆಲ್ಲಿ!
ಬೇಕಾಗುವ ಸಾಮಗ್ರಿಗಳು:
ಬಾದಾಮಿ 100 ಗ್ರಾಮ್
ಸಕ್ಕರೆ : ಒಂದುವರೆ ಲೋಟ
ಹಾಲು : ಅರ್ಧ ಲೋಟ
ತುಪ್ಪ : 2-3 ಚಮಚ
ಮಾಡುವ ವಿಧಾನ:
ಮೊದಲು ಬಾದಾಮಿಯನ್ನು ಬಿಸಿನೀರಿನಲ್ಲಿ ಒಂದು ಘಂಟೆ ಕಾಲ ನೆನೆ ಹಾಕಿ. ಆ ಬಳಿಕ ಬಾದಾಮಿ ಸಿಪ್ಪೆ ಸುಲಿಯಿರಿ. ಕೈಯಲ್ಲಿ ಒಂದಿಷ್ಟು ಬಾದಾಮಿ ತೆಗೆದುಕೊಂಡು ಜೋರಾಗಿ ಉಜ್ಜಿದರೆ ಸಿಪ್ಪೆ ಸುಲಭವಾಗಿ ಬೇರ್ಪಡುತ್ತದೆ. ಸಿಪ್ಪೆ ಸುಲಿದಾದ ಮೇಲೆ ಬಾದಾಮಿಯನ್ನು ಹಾಲಿನ ಜತೆ ನುಣ್ಣನೆ ರುಬ್ಬಿ.
ರುಬ್ಬಿದ ಬಾದಾಮಿ, ಸಕ್ಕರೆ ಇವುಗಳನ್ನು ಒಂದು ಕಡಾಯಿಯಲ್ಲಿ ಹಾಕಿ, ಒಲೆಯ ಮೇಲೆ ಇಟ್ಟು ಸುಮಾರು 30-40 ನಿಮಿಷ ಮಂದ ಉರಿಯಲ್ಲಿ ಕಲಕುತ್ತಾ ಇರಿ.
ಬಾದಾಮ್ ಸಕ್ಕರೆ ಮಿಶ್ರಣವು ಪಾತ್ರೆಯ ಬದಿಯನ್ನು ಬಿಡುತ್ತಿದ್ದಂತೆ 2-3 ಚಮಚ ತುಪ್ಪ ಹಾಕಿ. ಮಿಶ್ರಣವು ಗಟ್ಟಿಯಾಗುತ್ತಾ ಬಂದಂತೆ ಅದನ್ನು ಒಲೆಯಿಂದ ಕೆಳಗಿರಿಸಿ.
ಇದೀಗ ರುಚಿಯಾದ ಬಾದಾಮ್ ಹಲ್ವಾ ತಯಾರು!!



Click it and Unblock the Notifications