Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ಹೊಸ ಸರಕಾರದ ಬಾಯಿಗೆ ಬಾದಾಮಿ ಹಲ್ವಾ!
ಹೊಸ ಸರಕಾರಕ್ಕೂ ಬಾದಾಮಿ ಹಲ್ವಾಗೂ ಏನು ಸಂಬಂಧ ಅಂತ ಯೋಚಿಸುದ್ದೀರಾ? ಹಾಗೇನೂ ಇಲ್ಲ ಸೋಮವಾರ (ನ.12) ಅಧಿಕಾರ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪಕ್ಷದ ಕಾರ್ಯಕರ್ತರಿಗೆ ಬಾದಾಮಿ ಹಲ್ವಾ ತಿಂದಷ್ಟು ಸಂತೋಷವಾಗಿದೆ. ಹಾಗಾಗಿ ನೀವೂ ಅಷ್ಟೆ ಪಕ್ಷಭೇದ ಮರೆತು ಬಾದಾಮಿ ಹಲ್ವಾ ಮೆಲ್ಲಿ!
ಬೇಕಾಗುವ ಸಾಮಗ್ರಿಗಳು:
ಬಾದಾಮಿ 100 ಗ್ರಾಮ್
ಸಕ್ಕರೆ : ಒಂದುವರೆ ಲೋಟ
ಹಾಲು : ಅರ್ಧ ಲೋಟ
ತುಪ್ಪ : 2-3 ಚಮಚ
ಮಾಡುವ ವಿಧಾನ:
ಮೊದಲು ಬಾದಾಮಿಯನ್ನು ಬಿಸಿನೀರಿನಲ್ಲಿ ಒಂದು ಘಂಟೆ ಕಾಲ ನೆನೆ ಹಾಕಿ. ಆ ಬಳಿಕ ಬಾದಾಮಿ ಸಿಪ್ಪೆ ಸುಲಿಯಿರಿ. ಕೈಯಲ್ಲಿ ಒಂದಿಷ್ಟು ಬಾದಾಮಿ ತೆಗೆದುಕೊಂಡು ಜೋರಾಗಿ ಉಜ್ಜಿದರೆ ಸಿಪ್ಪೆ ಸುಲಭವಾಗಿ ಬೇರ್ಪಡುತ್ತದೆ. ಸಿಪ್ಪೆ ಸುಲಿದಾದ ಮೇಲೆ ಬಾದಾಮಿಯನ್ನು ಹಾಲಿನ ಜತೆ ನುಣ್ಣನೆ ರುಬ್ಬಿ.
ರುಬ್ಬಿದ ಬಾದಾಮಿ, ಸಕ್ಕರೆ ಇವುಗಳನ್ನು ಒಂದು ಕಡಾಯಿಯಲ್ಲಿ ಹಾಕಿ, ಒಲೆಯ ಮೇಲೆ ಇಟ್ಟು ಸುಮಾರು 30-40 ನಿಮಿಷ ಮಂದ ಉರಿಯಲ್ಲಿ ಕಲಕುತ್ತಾ ಇರಿ.
ಬಾದಾಮ್ ಸಕ್ಕರೆ ಮಿಶ್ರಣವು ಪಾತ್ರೆಯ ಬದಿಯನ್ನು ಬಿಡುತ್ತಿದ್ದಂತೆ 2-3 ಚಮಚ ತುಪ್ಪ ಹಾಕಿ. ಮಿಶ್ರಣವು ಗಟ್ಟಿಯಾಗುತ್ತಾ ಬಂದಂತೆ ಅದನ್ನು ಒಲೆಯಿಂದ ಕೆಳಗಿರಿಸಿ.
ಇದೀಗ ರುಚಿಯಾದ ಬಾದಾಮ್ ಹಲ್ವಾ ತಯಾರು!!



Click it and Unblock the Notifications











