Latest Updates
-
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ! -
ಕರಾವಳಿ ರೆಡ್ ಅಲರ್ಟ್: ಮನೆಯಲ್ಲೇ ಸುರಕ್ಷಿತವಾಗಿ ಫಿಟ್ ಆಗಿರಲು ಈ 12 ನಿಮಿಷಗಳ ವರ್ಕೌಟ್ ಟ್ರೈ ಮಾಡಿ!
ಹಬ್ಬದ ಮಾರನೆದಿನ ಮಾಡುವ ನಿರುಮ್ಮಳ ತಿಳಿಸಾರು
ತಿಳಿಸಾರು ರೆಸಿಪಿಗಳಲ್ಲಿ ಛಪ್ಪನ್ನಾರು ವೈವಿಧ್ಯವಿದೆ. ಈ ವಿಧಾನ ನಿಮಗೆ ಗೊತ್ತಿತ್ತಾ?
ಬೇವು ಬೆಲ್ಲ ತಿಂದು ಸರ್ವಜಿತ್ ಸಂವತ್ಸರವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾಯಿತು. 28 ತರಹ ಹಬ್ಬದ ಅಡುಗೆ ಮಾಡಿ ಬಡಿಸಿ ತಿಂದು ಉಂಡು ಸುಸ್ತಾಯಿತು! ಅಬ್ಬ ಸೊಂಟ ನೋವು...ಅದು ಸುಸ್ತಲ್ಲರೀ. ಒಂದು ಬಗೆಯ ಆಲಸ್ಯ. . ನಾನು ಹೇಳ್ತಾಯಿರೋದು ಕರೆಕ್ಟಾ? ಇವತ್ತು ಸ್ವಲ್ಪ ಆರಾಮ ತೊಗೊಳ್ಳಿ.
ಇವತ್ತು ಬಿಸಿ ಅನ್ನ ಮತ್ತು ಸಾರು ಮಾಡಿ ಊಟ ಮಾಡಿ ಸಿಂಪಲ್ಲಾಗಿ. ತಿಳಿ ಸಾರು ತಯಾರಿಸುವ ಒಂದು ವಿಧಾನವನ್ನು ಬರೆಯುತ್ತೇನೆ. ಗುರುತು ಮಾಡಿಕೊಳ್ಳಿ.
ನಿಮ್ಮ ಮನೆಯಲ್ಲಿ 4 ಜನ ಇದ್ದೀರಾ ಅಂದುಕೊಂಡರೆ ಒಂದು ಹಿಡಿ ತೊಗರಿ ಬೇಳೆ, 6 ಒಣಮೆಣಸಿನಕಾಯಿ ಮತ್ತು ಒಂದು ಚಮಚ ಜೀರಿಗೆಯನ್ನು ಎಣ್ಣೆ ಹಾಕದೆ ಹುರಿದುಕೊಳ್ಳಬೇಕು. ಚೆನ್ನಾಗಿ ಕೆಂಪಾಗುವತನಕ ಹುರಿದು ಆರಲು ಬಿಡಬೇಕು.
ಹುರಿದದ್ದನ್ನ ಮಿಕ್ಸಿಗೆ ಹಾಕಿ ನುಣ್ಣಗೆ ರುಬ್ಬಿಕೊಳ್ಳಬೇಕು. ನೀರು ಹಾಕಬಾರದು. ಪೌಡರ್ ಆಗಬೇಕು. ಆನಂತರ ಸಾರು ಮಾಡುವ ಪಾತ್ರೆಗೆ ಸ್ವಲ್ಪ ಎಣ್ಣೆ ಸಾಸಿವೆ ಕರಿಬೇವು ಹಾಕಿ ಒಗ್ಗರಣೆ ಮಾಡಬೇಕು. ಒಗ್ಗರಣೆ ಆಗುವಾಗ ಹುಣಿಸೆ ಹಣ್ಣಿನ ನೀರು ಮತ್ತು ಸ್ವಲ್ಪ ಬೆಲ್ಲ ಕೊನೆಗೆ ಉಪ್ಪು ಇಂಗು ಹಾಕಿ ಕುದಿಸಬೇಕು.
ಈಗಾಗಲೇ ನೀವು ಮಾಡಿಟ್ಟುಕೊಂಡಿರುವ ಪೊಡರ್ ಅನ್ನು ಸಾರಿನ ಪಾತ್ರೆಗೆ ಹಾಕಿ ಮತ್ತೆ ಕುದಿಸಬೇಕು. ಅಷ್ಟೆ. ಸ್ಟೌವ್ ಆಫ್ ಮಾಡಿದ ಮೇಲೆ ಮೂರು ನಾಕು ಐದು ಬಾರಿ ತೊಳೆದ ಕೊತ್ತಂಬರಿ ಸೊಪ್ಪನ್ನು ಸಣ್ಣಗೆ ಹೆಚ್ಚಿ ಸಾರಿನ ಮೇಲೆ ಚೆಲ್ಲಬೇಕು. ಈಗ ಸಿಂಪಲ್ ಆದ ತಿಳಿಸಾರು ಸೇವಿಸಲು ರೆಡಿ.



Click it and Unblock the Notifications