Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಗಣೇಶ ಹಬ್ಬಕ್ಕೆ ಕೇಸರಿ ಮೋದಕದ ರೆಸಿಪಿ
ಅನೇಕ ಬಗೆಯ ತಿಂಡಿಗಳನ್ನು ಮಾಡಿ ಗಣೇಶನಿಗೆ ಅರ್ಪಿಸಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುವುದು. ಮೋದಕ, ಚಕ್ಕೂಲಿ, ವಡೆ ಹೀಗೆ ಬಗೆ ಬಗೆಯ ತಿಂಡಿಗಳನ್ನು ತಯಾರಿಸಲಾಗುವುದು.
ಈ ಮೋದಕ ಸಿಹಿ ತಿಂಡಿಯನ್ನು ಸುಲಭವಾಗಿ ಮಾಡಬಹುದಾಗಿದ್ದು ಈ ಬಾರಿಯ ಗಣೇಶ ಹಬಕ್ಕೆ ಕೇಸರಿ ಮೋದಕದ ರೆಸಿಪಿ ನೋಡಿ ಇಲ್ಲಿದೆ.

ಬೇಕಾಗುವ ಸಾಮಾಗ್ರಿಗಳು:
* ಸ್ವಲ್ಪ ಕೇಸರಿ
* ಮೈದಾ 3 ಕಪ್
* ರವಾ 3 ಚಮಚ
* ಸಕ್ಕರೆ ಅರ್ಧ ಕಪ್ (ಇದನ್ನು ಪಾಕ ರೀತಿ ಮಾಡಿಡಬೇಕು)
* ತೆಂಗಿನ ತುರಿ ಒಂದೂವರೆ ಕಪ್
* ಏಲಕ್ಕಿ 1-2 ಚಮಚ
* ರುಚಿಗೆ ತಕ್ಕ ಉಪ್ಪು
* ಎಣ್ಣೆ
ತಯಾರಿಸುವ ವಿಧಾನ:
1. ಕೇಸರಿಯನ್ನು 2-3 ಚಮಚ ಬಿಸಿ ನೀರಿನಲ್ಲಿ ಹಾಕಿ 10-15 ನಿಮಿಷ ಇಡಬೇಕು.
2. ಒಂದು ಬಟ್ಟಲಿನಲ್ಲಿ ರವೆ ಮತ್ತು ಮೈದಾ ಹಾಕಿ ಅದಕ್ಕೆ ಕೇಸರಿ ಮತ್ತು ಸ್ವಲ್ಪ ನೀರು ಹಾಕಿ ಚೆನ್ನಾಗಿ ಕಲೆಸಬೇಕು.
3. ಈಗ ರುಚಿಗೆ ತಕ್ಕ ಉಪ್ಪು ಸೇರಿಸಿ ಮತ್ತೊಮ್ಮೆ ಚೆನ್ನಾಗಿ ಕಲೆಸಬೇಕು.
4. ಈಗ ಬಾಣಲೆಯನ್ನು ಬಿಸಿ ಮಾಡಿ, ಗ್ಯಾಸ್ ಅನ್ನು ಕಡಿಮೆ ಉರಿಯಲ್ಲಿಟ್ಟು ಅದರಲ್ಲಿ ಸಕ್ಕರೆ ಪಾಕವನ್ನು ಹಾಕಿ ತೆಂಗಿನ ತುರಿ ಮತ್ತು ಏಲಕ್ಕಿ ಹಾಕಿ 1-2 ನಿಮಿಷದವರೆಗೆ ಹುರಿಯಬೇಕು. ನಂತರ ಉರಿಯಿಂದ ತೆಗೆದು ತಣ್ಣಗಾಗಲು ಬದಿಯಲ್ಲಿಡಬೇಕು.
5. ಈಗ ಕಲೆಸಿಟ್ಟ ಹಿಟ್ಟಿನಿಂದ ಚಿಕ್ಕ-ಚಿಕ್ಕ ಉಂಡೆಗಳನ್ನು ಮಾಡಿ ಬೆರಳಿನಿಂದ ಗುಂಡಿ ರೀತಿ ಮಾಡಿ ಅದರಲ್ಲಿ ತಣ್ಣಗಾದ ತೆಂಗಿನ ತುರಿಯ ಮಿಶ್ರಣವನ್ನು ಒಂದೊಂದು ಚಮಚ ಹಾಕಿ ಕೈಯಿಂದಲೇ ಉಂಡೆಯನ್ನು ಮೆಲ್ಲನೆ ಅದುಮಿದಾಗ ಚಿತ್ರದಲ್ಲಿ ಕಾಣುವ ಶೇಪ್ ನಲ್ಲಿ ಮಾಡಬಹುದು.
6. ನಂತರ ಬಾಣಲೆಗೆ ಅರ್ಧದಷ್ಟು ಎಣ್ಣೆ ಹಾಕಿ ಕಾಯಿಸಬೇಕು, ಎಣ್ಣೆ ಕಾದ ನಂತರ ಮೋದಕ ಅನ್ನು ಎಣ್ಣೆಯಲ್ಲಿ ಹಾಕಿ ಕಂದು ಬಣ್ಣ ಬರುವವರೆಗೆ ಕರೆದರೆ ಗಣೇಶ ಹಬ್ಬಕ್ಕೆ ರುಚಿಯಾದ ಮೋದಕ ರೆಡಿ.



Click it and Unblock the Notifications