Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಕೃಷ್ಣ ಜನ್ಮಾಷ್ಟಮಿಗೆ ವಿಶೇಷ ಅಡುಗೆ

ತಿನ್ನಲು ತುಂಬಾ ರುಚಿಕರವಾಗಿರುವ ಈ ವಿಶೇಷ ಅಡುಗೆಯನ್ನು ಹತ್ತೇ ನಿಮಿಷದಲ್ಲಿ ತಯಾರಿಸಬಹುದಾಗಿದ್ದು ತಯಾರಿಸುವ ವಿಧಾನ ನೋಡಿ ಇಲ್ಲಿದೆ.
ಬೇಕಾಗುವ ಸಾಮಾಗ್ರಿಗಳು:
* ತೆಂಗಿನ ಕಾಯಿ ತುರಿ 2 ಕಪ್
* ಅವಲಕ್ಕಿ 1 ಕಪ್
* ಸಕ್ಕರೆ 3 ಚಮಚ
* ಮೊಸರು 1 ಕಪ್
* ಸೌತೆಕಾಯಿ 1
* 1 ಇಂಚಿನಷ್ಟು ದೊಡ್ಡದಿರುವ ಶುಂಠಿ
* ಹಸಿಮೆಣಸಿನ ಕಾಯಿ 4
* ಜೀರಿಗೆ 1 ಚಮಚ
* ತುಪ್ಪ 1 ಚಮಚ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಅವಲಕ್ಕಿಯನ್ನು 5 ನಿಮಿಷ ನೀರಿನಲ್ಲಿ ನೆನೆಹಾಕಬೇಕು.
2. ಅವಲಕ್ಕಿಯನ್ನು ನೀರಿನಿಂದ ತೆಗೆದು, ಅದರಲ್ಲಿರುವ ಉಳಿದ ನೀರು ಸೋಸಿ ಹೋಗುವಂತಹ ಪಾತ್ರೆಯಲ್ಲಿ ಹಾಕಬೇಕು.
3. ಅವಲಕ್ಕಿಯಿಂದ ಸಂಪೂರ್ಣ ನೀರು ಹೋದ ಮೇಲೆ ಅದನ್ನು ಒಂದು ಪಾತ್ರೆಯಲ್ಲಿ ಹಾಕಿ ಸಕ್ಕರೆ, ತೆಂಗಿನಕಾಯಿ ತುರಿ, ಮೊಸರು, ಕತ್ತರಿಸಿದ ಸೌತೆಕಾಯಿ ತುಂಡು, ಸ್ವಲ್ಪ ಉಪ್ಪು ಹಾಕಿ ಮಿಶ್ರಮಾಡಬೇಕು.
4. ನಂತರ ಮತ್ತೊಂದು ಪಾತ್ರೆಯಲ್ಲಿ ತುಪ್ಪವನ್ನು ಬಿಸಿಮಾಡಿ, ಜೀರಿಗೆ ಹಾಕಿ, ಜಜ್ಜಿದ ಶುಂಠಿ ಮತ್ತು ಕತ್ತರಿಸಿದ ಹಸಿಮೆಣಸಿನ ಕಾಯಿ ಹಾಕಿ 2 ನಿಮಿಷ ಹುರಿಯಬೇಕು. ನಂತರ ಇದನ್ನು ಅವಲಕ್ಕಿ ಮೇಲೆ ಸುರಿದು ಮಿಶ್ರ ಮಾಡಿದರೆ ತಿನ್ನಲು ರುಚಿಕರವಾದ ಗೋಪಾಲ್ಕಲಾ ರೆಡಿ.



Click it and Unblock the Notifications