Latest Updates
-
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್ -
ಐಟಿಆರ್ ಸಲ್ಲಿಕೆಗೆ ಇನ್ನು 4 ದಿನ ಬಾಕಿ: ಭಾರಿ ದಂಡದಿಂದ ಪಾರಾಗಲು ಈ ಕೆಲಸಗಳನ್ನು ಇಂದೇ ಮಾಡಿ! -
IMD ಮಳೆ ಎಚ್ಚರಿಕೆ: ಹೊರಗೆ ಹೋಗಬೇಡಿ, ಮನೆಯಲ್ಲೇ ಈ 12 ನಿಮಿಷದ ವರ್ಕೌಟ್ ಮಾಡಿ ಫಿಟ್ ಆಗಿರಿ! -
ಭಾರತ-ಜಿಂಬಾಬ್ವೆ ಟಿ20 ಪಂದ್ಯದ ಮಜಾ ಸವಿಯುತ್ತಲೇ ಮನೆಯ ಜವಾಬ್ದಾರಿ ನಿಭಾಯಿಸುವುದು ಹೇಗೆ? ಸ್ಮಾರ್ಟ್ ಟಿಪ್ಸ್ ಇಲ್ಲಿದೆ! -
IMD ರೆಡ್ ಅಲರ್ಟ್: ಭಾರಿ ಮಳೆಯಿಂದ ಮನೆಯನ್ನು ರಕ್ಷಿಸಲು ಈ 5 ಮುನ್ನೆಚ್ಚರಿಕೆಗಳು ಕಡ್ಡಾಯ! -
ಗುರು ಪೂರ್ಣಿಮಾ ಉಪವಾಸ: ಮಧುಮೇಹಿಗಳು ಆರೋಗ್ಯವಾಗಿರಲು ಈ ಸಾತ್ವಿಕ ಆಹಾರ ಕ್ರಮ ಪಾಲಿಸಿ -
ಪೇಪರ್ ಸೋರಿಕೆ ಮಾಡಿದ್ರೆ 10 ವರ್ಷ ಜೈಲು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಿಗಲಿದೆ ಹೊಸ ಭದ್ರತೆ! -
ಕಾರ್ಗಿಲ್ ವಿಜಯ್ ದಿವಸ್: ದೇಶಭಕ್ತಿಯ ನಡಿಗೆಯಲ್ಲಿ ಪಾಲ್ಗೊಳ್ಳುವ ಮುನ್ನ ಈ ಆರೋಗ್ಯ ಟಿಪ್ಸ್ ಮರೆಯದಿರಿ
ಕೃಷ್ಣ ಜನ್ಮಾಷ್ಟಮಿಗೆ ವಿಶೇಷ ಅಡುಗೆ

ತಿನ್ನಲು ತುಂಬಾ ರುಚಿಕರವಾಗಿರುವ ಈ ವಿಶೇಷ ಅಡುಗೆಯನ್ನು ಹತ್ತೇ ನಿಮಿಷದಲ್ಲಿ ತಯಾರಿಸಬಹುದಾಗಿದ್ದು ತಯಾರಿಸುವ ವಿಧಾನ ನೋಡಿ ಇಲ್ಲಿದೆ.
ಬೇಕಾಗುವ ಸಾಮಾಗ್ರಿಗಳು:
* ತೆಂಗಿನ ಕಾಯಿ ತುರಿ 2 ಕಪ್
* ಅವಲಕ್ಕಿ 1 ಕಪ್
* ಸಕ್ಕರೆ 3 ಚಮಚ
* ಮೊಸರು 1 ಕಪ್
* ಸೌತೆಕಾಯಿ 1
* 1 ಇಂಚಿನಷ್ಟು ದೊಡ್ಡದಿರುವ ಶುಂಠಿ
* ಹಸಿಮೆಣಸಿನ ಕಾಯಿ 4
* ಜೀರಿಗೆ 1 ಚಮಚ
* ತುಪ್ಪ 1 ಚಮಚ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಅವಲಕ್ಕಿಯನ್ನು 5 ನಿಮಿಷ ನೀರಿನಲ್ಲಿ ನೆನೆಹಾಕಬೇಕು.
2. ಅವಲಕ್ಕಿಯನ್ನು ನೀರಿನಿಂದ ತೆಗೆದು, ಅದರಲ್ಲಿರುವ ಉಳಿದ ನೀರು ಸೋಸಿ ಹೋಗುವಂತಹ ಪಾತ್ರೆಯಲ್ಲಿ ಹಾಕಬೇಕು.
3. ಅವಲಕ್ಕಿಯಿಂದ ಸಂಪೂರ್ಣ ನೀರು ಹೋದ ಮೇಲೆ ಅದನ್ನು ಒಂದು ಪಾತ್ರೆಯಲ್ಲಿ ಹಾಕಿ ಸಕ್ಕರೆ, ತೆಂಗಿನಕಾಯಿ ತುರಿ, ಮೊಸರು, ಕತ್ತರಿಸಿದ ಸೌತೆಕಾಯಿ ತುಂಡು, ಸ್ವಲ್ಪ ಉಪ್ಪು ಹಾಕಿ ಮಿಶ್ರಮಾಡಬೇಕು.
4. ನಂತರ ಮತ್ತೊಂದು ಪಾತ್ರೆಯಲ್ಲಿ ತುಪ್ಪವನ್ನು ಬಿಸಿಮಾಡಿ, ಜೀರಿಗೆ ಹಾಕಿ, ಜಜ್ಜಿದ ಶುಂಠಿ ಮತ್ತು ಕತ್ತರಿಸಿದ ಹಸಿಮೆಣಸಿನ ಕಾಯಿ ಹಾಕಿ 2 ನಿಮಿಷ ಹುರಿಯಬೇಕು. ನಂತರ ಇದನ್ನು ಅವಲಕ್ಕಿ ಮೇಲೆ ಸುರಿದು ಮಿಶ್ರ ಮಾಡಿದರೆ ತಿನ್ನಲು ರುಚಿಕರವಾದ ಗೋಪಾಲ್ಕಲಾ ರೆಡಿ.



Click it and Unblock the Notifications