Latest Updates
-
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ! -
ಕರಾವಳಿ ರೆಡ್ ಅಲರ್ಟ್: ಮನೆಯಲ್ಲೇ ಸುರಕ್ಷಿತವಾಗಿ ಫಿಟ್ ಆಗಿರಲು ಈ 12 ನಿಮಿಷಗಳ ವರ್ಕೌಟ್ ಟ್ರೈ ಮಾಡಿ! -
ಪುಣೆಯಲ್ಲಿ ಮಳೆ ರಜೆ: ವರ್ಕ್ ಫ್ರಮ್ ಹೋಮ್ ಜೊತೆಗೆ ಮಕ್ಕಳನ್ನು ನಿಭಾಯಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್ -
ಮುಂಬೈ ರೆಡ್ ಅಲರ್ಟ್: ಮಳೆಯಿಂದ ನಿಮ್ಮ ಬಾಡಿಗೆ ಮನೆ ಮತ್ತು ವಸ್ತುಗಳನ್ನು ರಕ್ಷಿಸಿಕೊಳ್ಳುವುದು ಹೇಗೆ? -
ಮುಂಬೈ ರೆಡ್ ಅಲರ್ಟ್: ಮಳೆಗಾಲದ ಕಾಯಿಲೆಗಳಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಮುಂಬೈ ಮಳೆ ಅಬ್ಬರ: ವಿಮಾನ ನಿಲ್ದಾಣಕ್ಕೆ ಹೋಗುವ ಮುನ್ನ ಈ ಸ್ಮಾರ್ಟ್ ಟಿಪ್ಸ್ ಫಾಲೋ ಮಾಡಿ -
ಮುಂಬೈ ಮಳೆ ರಜೆ: ಮನೆಯಲ್ಲೇ ಕುಟುಂಬದೊಂದಿಗೆ ಫಿಟ್ ಆಗಿರಲು 12 ನಿಮಿಷದ ಸಿಂಪಲ್ ಯೋಗ!
ಕೃಷ್ಣ ಜನ್ಮಾಷ್ಟಮಿಗೆ ವಿಶೇಷ ಅಡುಗೆ

ತಿನ್ನಲು ತುಂಬಾ ರುಚಿಕರವಾಗಿರುವ ಈ ವಿಶೇಷ ಅಡುಗೆಯನ್ನು ಹತ್ತೇ ನಿಮಿಷದಲ್ಲಿ ತಯಾರಿಸಬಹುದಾಗಿದ್ದು ತಯಾರಿಸುವ ವಿಧಾನ ನೋಡಿ ಇಲ್ಲಿದೆ.
ಬೇಕಾಗುವ ಸಾಮಾಗ್ರಿಗಳು:
* ತೆಂಗಿನ ಕಾಯಿ ತುರಿ 2 ಕಪ್
* ಅವಲಕ್ಕಿ 1 ಕಪ್
* ಸಕ್ಕರೆ 3 ಚಮಚ
* ಮೊಸರು 1 ಕಪ್
* ಸೌತೆಕಾಯಿ 1
* 1 ಇಂಚಿನಷ್ಟು ದೊಡ್ಡದಿರುವ ಶುಂಠಿ
* ಹಸಿಮೆಣಸಿನ ಕಾಯಿ 4
* ಜೀರಿಗೆ 1 ಚಮಚ
* ತುಪ್ಪ 1 ಚಮಚ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಅವಲಕ್ಕಿಯನ್ನು 5 ನಿಮಿಷ ನೀರಿನಲ್ಲಿ ನೆನೆಹಾಕಬೇಕು.
2. ಅವಲಕ್ಕಿಯನ್ನು ನೀರಿನಿಂದ ತೆಗೆದು, ಅದರಲ್ಲಿರುವ ಉಳಿದ ನೀರು ಸೋಸಿ ಹೋಗುವಂತಹ ಪಾತ್ರೆಯಲ್ಲಿ ಹಾಕಬೇಕು.
3. ಅವಲಕ್ಕಿಯಿಂದ ಸಂಪೂರ್ಣ ನೀರು ಹೋದ ಮೇಲೆ ಅದನ್ನು ಒಂದು ಪಾತ್ರೆಯಲ್ಲಿ ಹಾಕಿ ಸಕ್ಕರೆ, ತೆಂಗಿನಕಾಯಿ ತುರಿ, ಮೊಸರು, ಕತ್ತರಿಸಿದ ಸೌತೆಕಾಯಿ ತುಂಡು, ಸ್ವಲ್ಪ ಉಪ್ಪು ಹಾಕಿ ಮಿಶ್ರಮಾಡಬೇಕು.
4. ನಂತರ ಮತ್ತೊಂದು ಪಾತ್ರೆಯಲ್ಲಿ ತುಪ್ಪವನ್ನು ಬಿಸಿಮಾಡಿ, ಜೀರಿಗೆ ಹಾಕಿ, ಜಜ್ಜಿದ ಶುಂಠಿ ಮತ್ತು ಕತ್ತರಿಸಿದ ಹಸಿಮೆಣಸಿನ ಕಾಯಿ ಹಾಕಿ 2 ನಿಮಿಷ ಹುರಿಯಬೇಕು. ನಂತರ ಇದನ್ನು ಅವಲಕ್ಕಿ ಮೇಲೆ ಸುರಿದು ಮಿಶ್ರ ಮಾಡಿದರೆ ತಿನ್ನಲು ರುಚಿಕರವಾದ ಗೋಪಾಲ್ಕಲಾ ರೆಡಿ.



Click it and Unblock the Notifications