Latest Updates
-
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ -
ಬಿಸಿಲ ಬೇಗೆಯಿಂದ ಪಾರಾಗಲು ಮನೆಯನ್ನು ತಂಪಾಗಿರಿಸುವ ಅದ್ಭುತ ಟಿಪ್ಸ್
ಕೃಷ್ಣ ಜನ್ಮಾಷ್ಟಮಿಗೆ ವಿಶೇಷ ಅಡುಗೆ

ತಿನ್ನಲು ತುಂಬಾ ರುಚಿಕರವಾಗಿರುವ ಈ ವಿಶೇಷ ಅಡುಗೆಯನ್ನು ಹತ್ತೇ ನಿಮಿಷದಲ್ಲಿ ತಯಾರಿಸಬಹುದಾಗಿದ್ದು ತಯಾರಿಸುವ ವಿಧಾನ ನೋಡಿ ಇಲ್ಲಿದೆ.
ಬೇಕಾಗುವ ಸಾಮಾಗ್ರಿಗಳು:
* ತೆಂಗಿನ ಕಾಯಿ ತುರಿ 2 ಕಪ್
* ಅವಲಕ್ಕಿ 1 ಕಪ್
* ಸಕ್ಕರೆ 3 ಚಮಚ
* ಮೊಸರು 1 ಕಪ್
* ಸೌತೆಕಾಯಿ 1
* 1 ಇಂಚಿನಷ್ಟು ದೊಡ್ಡದಿರುವ ಶುಂಠಿ
* ಹಸಿಮೆಣಸಿನ ಕಾಯಿ 4
* ಜೀರಿಗೆ 1 ಚಮಚ
* ತುಪ್ಪ 1 ಚಮಚ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಅವಲಕ್ಕಿಯನ್ನು 5 ನಿಮಿಷ ನೀರಿನಲ್ಲಿ ನೆನೆಹಾಕಬೇಕು.
2. ಅವಲಕ್ಕಿಯನ್ನು ನೀರಿನಿಂದ ತೆಗೆದು, ಅದರಲ್ಲಿರುವ ಉಳಿದ ನೀರು ಸೋಸಿ ಹೋಗುವಂತಹ ಪಾತ್ರೆಯಲ್ಲಿ ಹಾಕಬೇಕು.
3. ಅವಲಕ್ಕಿಯಿಂದ ಸಂಪೂರ್ಣ ನೀರು ಹೋದ ಮೇಲೆ ಅದನ್ನು ಒಂದು ಪಾತ್ರೆಯಲ್ಲಿ ಹಾಕಿ ಸಕ್ಕರೆ, ತೆಂಗಿನಕಾಯಿ ತುರಿ, ಮೊಸರು, ಕತ್ತರಿಸಿದ ಸೌತೆಕಾಯಿ ತುಂಡು, ಸ್ವಲ್ಪ ಉಪ್ಪು ಹಾಕಿ ಮಿಶ್ರಮಾಡಬೇಕು.
4. ನಂತರ ಮತ್ತೊಂದು ಪಾತ್ರೆಯಲ್ಲಿ ತುಪ್ಪವನ್ನು ಬಿಸಿಮಾಡಿ, ಜೀರಿಗೆ ಹಾಕಿ, ಜಜ್ಜಿದ ಶುಂಠಿ ಮತ್ತು ಕತ್ತರಿಸಿದ ಹಸಿಮೆಣಸಿನ ಕಾಯಿ ಹಾಕಿ 2 ನಿಮಿಷ ಹುರಿಯಬೇಕು. ನಂತರ ಇದನ್ನು ಅವಲಕ್ಕಿ ಮೇಲೆ ಸುರಿದು ಮಿಶ್ರ ಮಾಡಿದರೆ ತಿನ್ನಲು ರುಚಿಕರವಾದ ಗೋಪಾಲ್ಕಲಾ ರೆಡಿ.



Click it and Unblock the Notifications











