Latest Updates
-
ಗಣೇಶೋತ್ಸವದ ಸಂಭ್ರಮದಲ್ಲಿ ದಂಪತಿಗಳ ಜಗಳ ಬೇಡ: ಸಮಯ ಮತ್ತು ಬಜೆಟ್ ನಿರ್ವಹಣೆಗೆ ಇಲ್ಲಿದೆ ಸಿಂಪಲ್ ಪ್ಲಾನ್! -
ಗಣೇಶೋತ್ಸವ 2026: ಮಳೆಯ ನಡುವೆಯೂ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಇಲ್ಲಿದೆ ಸರಳ ಟಿಪ್ಸ್! -
ಪ್ಯಾಕ್ ಮಾಡಿದ ಆಹಾರದಲ್ಲಿ ಸಕ್ಕರೆ, ಉಪ್ಪು ಹೆಚ್ಚಿದ್ದರೆ ಕೆಂಪು ಲೇಬಲ್: ಸುಪ್ರೀಂ ಕೋರ್ಟ್ ಪ್ರಶ್ನೆ, ಗ್ರಾಹಕರಿಗೆ ಸಿಗುತ್ತಾ ಪರಿಹಾರ? -
ಝೊಮ್ಯಾಟೋದಲ್ಲಿ 'ಪೇ ಆನ್ ಡೆಲಿವರಿ' ಶುಲ್ಕದ ಶಾಕ್: ನಿಮ್ಮ ಬಿಲ್ ಹೆಚ್ಚಾಗುತ್ತಿದೆಯೇ? ಬಚಾವ್ ಆಗೋದು ಹೇಗೆ? -
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್! -
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ
ಯುಗಾದಿ ವಿಶೇಷ: ಹಬ್ಬದ ಗಮ್ಮತ್ತಿಗೆ ಬಿಸಿ ಬಿಸಿ 'ಒಬ್ಬಟ್ಟು'
ಒಬ್ಬಟ್ಟನ್ನು ಸುಲಭವಾಗಿ ತಯಾರಿಸುವ ಕ್ರಮವನ್ನು ನಿಮಗೆ ಪ್ರಸ್ತುತಪಡಿಸುತ್ತಿದ್ದು ಇದರ ರುಚಿ ನಿಮ್ಮ ಅತಿಥಿಗಳನ್ನು ಖಂಡಿತಾ ಸಂತೃಪ್ತಿಪಡಿಸಲಿದೆ.ಒಬ್ಬಟ್ಟಿನಲ್ಲಿ ಬೆಲ್ಲವನ್ನುಉಪಯೋಗಿಸಲಾಗಿರುವುದರಿಂದ ಇದು ಸಕ್ಕರೆಯ ಯಾವುದೇ ಹಾನಿಕಾರಕ ಹೊಂದಿಲ್ಲ
ಯುಗಾದಿ ಹಬ್ಬದ ಸವಿಯನ್ನು ಹೆಚ್ಚಿಸಲು ಎಲ್ಲರ ಮನೆಯಲ್ಲಿ ಮಾಡುವ ಸಿಹಿತಿಂಡಿಯೇ ಒಬ್ಬಟ್ಟು. ಇದು ಸುಲಭವಾಗಿ ಮಾಡಲು ಸಾಧ್ಯವಿರುವ ತಿಂಡಿಯಾಗಿದ್ದು ದಕ್ಷಿಣ ಭಾರತದ ಎಲ್ಲಾ ಕಡೆ ಹಬ್ಬದ ಸಂಭ್ರಮವನ್ನು ಹೆಚ್ಚಿಸಲು ನೆರವಾಗುತ್ತದೆ. ಈ ಯುಗಾದಿಯಲ್ಲಿ ನಿಮ್ಮ ಮನೆಯಲ್ಲಿ ಒಬ್ಬಟ್ಟಿಲ್ಲದಿದ್ದರೆ ಹೇಗೆ? ಆದರೆ ತಯಾರಿಸುವ ವಿಧಾನ ಗೊತ್ತಿಲ್ಲವೇ? ಈಗ ಚಿಂತೆ ಬೇಡ.
ಒಬ್ಬಟ್ಟನ್ನು ಸುಲಭವಾಗಿ ತಯಾರಿಸುವ ಕ್ರಮವನ್ನು ಇಂದು ನಿಮಗೆ ಪ್ರಸ್ತುತಪಡಿಸುತ್ತಿದ್ದು ಇದರ ರುಚಿ ನಿಮ್ಮ ಅತಿಥಿಗಳನ್ನು ಖಂಡಿತಾ ಸಂತೃಪ್ತಿಪಡಿಸಲಿದೆ. ಒಬ್ಬಟ್ಟಿನಲ್ಲಿ ಬೆಲ್ಲವನ್ನು ಉಪಯೋಗಿಸಲಾಗಿರುವುದರಿಂದ ಇದು ಸಕ್ಕರೆಯ ಯಾವುದೇ ಹಾನಿಕಾರಕ ಪರಿಣಾಮವನ್ನು ಹೊಂದಿಲ್ಲ. ಅಲ್ಲದೇ ಇದರಲ್ಲಿ ಹೆಚ್ಚು ಕ್ಯಾಲೋರಿಗಳೂ ಇಲ್ಲ. ಆದ್ದರಿಂದ ಸ್ಥೂಲಕಾಯ ಆವರಿಸುತ್ತದೆ ಎಂಬ ಭಯವಿಲ್ಲದೇ ಎಲ್ಲರೂ ಸವಿಯಬಹುದಾದ ಸಿಹಿತಿಂಡಿಯಾಗಿದೆ. ಇದನ್ನು ಕೊಂಚವೇ ಹುರಿದಿರುವ ಕಾರಣ ಇದರ ರುಚಿ ಇನ್ನಷ್ಟು ಹೆಚ್ಚುತ್ತದೆ. ಬೋಲ್ಡ್ ಸ್ಕೈ ಅಡುಗೆ ಮನೆಯಲ್ಲಿ 8 ಯುಗಾದಿ ಖಾದ್ಯಗಳು

ಅಗತ್ಯವಿರುವ ಸಾಮಾಗ್ರಿಗಳು
*1-1/2 ಕಪ್ ಮೈದಾ
*1 ಕಪ್ ಕಡ್ಲೆಬೇಳೆ
*1 ಕಪ್ ಬೆಲ್ಲ (ಕಪ್ಪು ಅಥವಾ ಕಂದು ಬೆಲ್ಲವೇ ಉತ್ತಮ)
*1 ಚಿಕ್ಕ ಚಮಚ ರವೆ
*1 ಚಿಕ್ಕ ಚಮಚ ಏಲಕ್ಕಿ
*1 ಚಿಕ್ಕ ಚಮಚ ಎಣ್ಣೆ
*ಅರಿಶಿನ ಪುಡಿ-ಚಿಟಿಕೆಯಷ್ಟು
*ಉಪ್ಪು-ರುಚಿಗನುಸಾರ ಯುಗಾದಿ ಗಮ್ಮತ್ತಿಗೆ ಬಿಸಿ ಬಿಸಿ ಹೂರಣದ ಹೋಳಿಗೆ
ತಯಾರಿಕಾ ವಿಧಾನ:
* ಕಡ್ಲೆಬೇಳೆಯನ್ನು ಕುಕ್ಕರಿನಲ್ಲಿ ಬೇಯಿಸಿಟ್ಟುಕೊಳ್ಳಿ.
* ಬೇಳೆ ಬೆಂದ ಬಳಿಕ ನೀರನ್ನು ಬಸಿಯಿರಿ.
* ಈಗ ಈ ಬೇಳೆಗೆ ಬೆಲ್ಲವನ್ನು ಕುಟ್ಟಿ ಪುಡಿ ಮಾಡಿ ಮಿಶ್ರಣ ಮಾಡಿ ಸುಮಾರು ಹತ್ತು ನಿಮಿಷಗಳ ಕಾಲ ಬೇಯಿಸಿ.
* ಬಳಿಕ ಇದನ್ನು ಹೊರತೆಗೆದು ಮಿಕ್ಸಿಯಲ್ಲಿ ನೀರಿಲ್ಲದೇ ಕಡೆಯಿರಿ. ಇದಕ್ಕೆ ಏಲಕ್ಕಿ ಪುಡಿ ಹಾಕಿ ಮಿಶ್ರಣ ಮಾಡಿ.
* ಮೈದಾಹಿಟ್ಟನ್ನು ರವೆ, ಅರಿಶಿನ ಉಪ್ಪಿನೊಂದಿಗೆ ಕಲಸಿ ಚಪಾತಿಹಿಟ್ಟಿನ ಹದಕ್ಕೆ ತನ್ನಿ. ಕೊಂಚವೇ ಎಣ್ಣೆ ಮಿಶ್ರಣ ಮಾಡಿ ನಾದಿ ಹತ್ತು ನಿಮಿಷ ಹಾಗೇ ಬಿಡಿ.
* ಈಗ ನಾದಿದ ಹಿಟ್ಟಿನಿಂದ ಪುಟ್ಟ ಉಂಡೆಯೊಂದನ್ನು ಮಾಡಿಕೊಂಡು ಕೈಗಳಿಂದಲೇ ಚಪಾತಿಯಂತೆ ಲಟ್ಟಿಸಿ ಇದರ ನಡುವೆ ಬೆಲ್ಲ, ಕಡ್ಲೆಬೇಳೆಯ ಚಿಕ್ಕ ಮುದ್ದೆಯೊಂದನ್ನು ಇರಿಸಿ. ಬಳಿಕ ಚಪಾತಿಯ ಅಂಚುಗಳನ್ನು ಈ ಮುದ್ದೆಯನ್ನು ಆವರಿಸುವಂತೆ ಮುಚ್ಚಿ ಎಲ್ಲಾ ತುದಿಗಳನ್ನು ಒಂದೆಡೆ ಸೇರಿಸಿ ಭದ್ರಪಡಿಸಿ.
* ಈಗ ಪ್ಲಾಸ್ಟಿಕ್ ಹಾಳೆಯೊಂದಕ್ಕೆ ಕೊಂಚ ಎಣ್ಣೆ ಸವರಿ ಈ ಉಂಡೆಯನ್ನು ನಯವಾಗಿ, ಒಡೆಯದಂತೆ ಚಪಾತಿಯಂತೆ ಲಟ್ಟಿಸಿ. ಬಳಿಕ ಬಿಸಿಯಾದ ಕಾವಲಿಯ ಮೇಲೆ ಆಗಾಗ ಪಲ್ಲಟಿಸುತ್ತಾ ಸುಮಾರು ಕಂದುಬಣ್ಣ ಬರುವಷ್ಟು ಬಿಸಿಮಾಡಿ. ಬಿಸಿಬಿಸಿ ಒಬ್ಬಟ್ಟನ್ನು ಮನೆಯವರಿಗೆ ಮತ್ತು ಅತಿಥಿಗಳಿಗೆ ಬಡಿಸಿ, ಮೆಚ್ಚುಗೆ ಪಡೆಯಿರಿ.



Click it and Unblock the Notifications
