Just In
- 9 hrs ago ವೃಷಭ ರಾಶಿಗೆ ಗುರು ಸಂಚಾರ: ಗುರು ನಿಮ್ಮ ಲಗ್ನ ಮನೆಯಲ್ಲಿ ಇರುವುದರಿಂದ ಇದರ ಪ್ರಭಾವ ಹೇಗಿರಲಿದೆ?
- 10 hrs ago ವೃಷಭ ರಾಶಿಗೆ ದೇವಗುರುವಿನ ಸಂಚಾರ: ಮೇಷ ರಾಶಿಗಳಿಗೆ ಇದರ ಪ್ರಭಾವ ಹೇಗಿರಲಿದೆ?
- 10 hrs ago ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- 12 hrs ago ದಿನ ಭವಿಷ್ಯ ಏಪ್ರಿಲ್ 19: ಶುಕ್ರವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
Don't Miss
- News ಕರ್ನಾಟಕದ ಮೇಲೆ ವರುಣನ ಕೃಪೆ: ರಾಜ್ಯದ ಪ್ರಮುಖ ಡ್ಯಾಂಗಳ ಇಂದಿನ ನೀರಿನ ಮಟ್ಟ ಎಷ್ಟು? ಇಲ್ಲಿದೆ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ ಬಾರಿಯ ಸಂಕ್ರಾಂತಿ ಹಬ್ಬಕ್ಕೆ 'ಅವಲಕ್ಕಿ ಪೊಂಗಲ್' ಮಾಡಿ...
ಪೊಂಗಲ್ ನಲ್ಲಿ ತುಂಬಾ ವಿಧಗಳಿವೆ, ಖಾರ ಪೊಂಗಲ್, ಸಿಹಿ ಪೊಂಗಲ್, ಸಾಲ್ಟ್ ಪೊಂಗಲ್ ಹೀಗೆ ಅನೇಕ ಬಗೆಯ ಪೊಂಗಲ್ ಅಡುಗೆಯನ್ನು ಮಾಡಬಹುದು. ಇಲ್ಲಿ ನಾವು ಅವಲಕ್ಕಿ ಪೊಂಗಲ್ ರೆಸಿಪಿ ನೀಡಿದ್ದೇವೆ...ಮುಂದೆ ಓದಿ...
ಸಂಕ್ರಾಂತಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಎಳ್ಳು ಬೆಲ್ಲದ ಸಂಕ್ರಾಂತಿ ಹಬ್ಬವನ್ನು ನಾಡಿನಾದ್ಯಂತ ಹೆಚ್ಚು ಸಂಭ್ರಮದಿಂದ ಆಚರಿಸುತ್ತಾರೆ. ಕಬ್ಬು, ಎಳ್ಳು ಮತ್ತು ಬೆಲ್ಲದ ಮಿಶ್ರಣದಿಂದ ಖಾದ್ಯವನ್ನು ಮಾಡುವುದು ಸಂಕ್ರಾಂತಿಗೆ ಹೆಚ್ಚು ವಿಶೇಷವಾಗಿದ್ದು ಸಾಮರಸ್ಯವನ್ನು ಇದು ಪ್ರತಿನಿಧಿಸುತ್ತದೆ. ಇನ್ನು ಹಬ್ಬದ ಸಂಭ್ರಮವನ್ನು ಬರೆಯ ಎಳ್ಳು ಬೆಲ್ಲ ನೀಡಿ ಸವಿದರೆ ಸಾಲದು, ಕೆಲವು ಸಿಹಿತಿಂಡಿ, ಹಬ್ಬದೂಟವೂ ಸಂತೋಷವನ್ನು ಹೆಚ್ಚಿಸಲು ನೆರವಾಗುತ್ತವೆ. ಸಂಕ್ರಾಂತಿ ಹಬ್ಬಕ್ಕೆ ಸ್ಪೆಷೆಲ್ -ಸ್ವೀಟ್ ಪೊಂಗಲ್
ಸಂತೋಷವನ್ನು ಸಿಹಿಯ ರೂಪದಲ್ಲಿ ಹಂಚಿಕೊಳ್ಳುವುದು ವಾಡಿಕೆ. ಸಾಂಪ್ರಾದಾಯಿಕವಾಗಿ ಅನ್ನದಿಂದ ಮಾಡಿದ ಸಿಹಿ ಪೊಂಗಲ್ ಹೆಚ್ಚಿನ ರಾಜ್ಯಗಳಲ್ಲಿ ತಯಾರಾಗುತ್ತದೆ. ಅಂತೆಯೇ ಈ ಬಾರಿಯ ಸಂಕ್ರಾಂತಿಯ ಸಂಭ್ರಮವನ್ನು ಕೊಂಚ ಭಿನ್ನವಾಗಿ ಅಂದರೆ ಸಿಹಿಯಾದ ಅವಲಕ್ಕಿ ಪೊಂಗಲ್ ಸವಿಯುವ ಮೂಲಕ ಹೆಚ್ಚಿಸೋಣ. ಇದು ರುಚಿಕರವೂ, ಸುಲಭವಾಗಿ ತಯಾರಿಸಬಲ್ಲದ್ದೂ ಆಗಿದೆ. ಏಕೆಂದರೆ ಅನ್ನದ ಪೊಂಗಲ್ನಲ್ಲಿ ಅಕ್ಕಿ ಮತ್ತು ಬೇಳೆಯನ್ನು ಜೊತೆಯಾಗಿ ಬೇಯಿಸಬೇಕು.
ಅನ್ನ ಬೇಗನೇ ಬೆಂದರೆ ಬೇಳೆ ಕಡಿಮೆ ಬೇಯುತ್ತದೆ. ಈ ಬೇಳೆಯನ್ನು ಹೆಚ್ಚು ಬೇಯಿಸಲು ಹೋದರೆ ಅನ್ನ ಮುದ್ದೆಯಾಗುತ್ತದೆ. ಅಂತೆಯೇ ಹೆಚ್ಚಿನ ಮನೆಗಳ ಪೊಂಗಲ್ ಕೊಂಚ ಮುದ್ದೆಮುದ್ದೆಯಾಗಿರುತ್ತವೆ. ಆದರೆ ಅವಲಕ್ಕಿ ಪೊಂಗಲ್ನಲ್ಲಿ ಅವಲಕ್ಕಿಯನ್ನು ಕೊಂಚ ಕಾಲ ನೆನೆಸಿ ಬಳಸಿರುವ ಕಾರಣ ಮುದ್ದೆಯಾಗದೇ ಗರಿಗರಿಯಾಗಿರುತ್ತದೆ. ಬನ್ನಿ, ಈ ಸಿಹಿಯಾದ ಪೊಂಗಲ್ ಮಾಡುವುದು ಹೇಗೆ ಎಂದು ಈಗ ನೋಡೋಣ.... ಸಂಕ್ರಾಂತಿ ಹಬ್ಬದ ವಿಶೇಷ: ಹೊಸ ರುಚಿಯ 'ಸಿಹಿ ಪೊಂಗಲ್'
ಅಗತ್ಯವಿರುವ
ಸಾಮಾಗ್ರಿಗಳು
*ಅವಲಕ್ಕಿ:
ಎರಡು
ಕಪ್
(ಇದರಲ್ಲಿ
ಕಲ್ಲುಗಳಿಲ್ಲವೆಂದು
ಖಚಿತಪಡಿಸಿಕೊಳ್ಳಿ)-ದಪ್ಪ
ಅವಲಕ್ಕಿ
ಉತ್ತಮ.
ಈಗ
ದೊರಕುತ್ತಿರುವ
ಪೇಪರ್
ಅವಲಕ್ಕಿ
ಅಷ್ಟು
ಸೂಕ್ತವಲ್ಲ,
ಪೊಂಗಲ್
ಸರಿಯಾಗಿ
ಆಗುವುದೂ
ಇಲ್ಲ.
*ಹೆಸರು
ಬೇಳೆ:
ಒಂದು
ಕಪ್
(ತೊಳೆದು
ಒಣಗಿಸಿಟ್ಟಿದ್ದು)
*ಕಾಯಿತುರಿ:
ಒಂದು
ಕಪ್
*ಬೆಲ್ಲ:
ಒಂದು
ಕಪ್
(ಚಿಕ್ಕದಾಗಿ
ತುರಿದದ್ದು)
-
ಕೆಂಪು
ಅಥವಾ
ಕಪ್ಪುಬೆಲ್ಲ
ಉತ್ತಮ.
ಬಿಳಿಬೆಲ್ಲ
ಕೊಂಚ
ಹುಳಿಯಾಗಿರುತ್ತದೆ.
*ಏಲಕ್ಕಿ:
ಎರಡರಿಂದ
ಮೂರು
*ತುಪ್ಪ:
ಒಂದು
ಕಪ್
*ಒಣದ್ರಾಕ್ಷಿ:
ಅರ್ಧ
ಕಪ್
*ಗೋಡಂಬಿ:
ಅರ್ಧ
ಕಪ್
ಚಟ್ನಿ
ಜೊತೆ
ಸವಿಯಿರಿ
ಖಾರಾ
ಪೊಂಗಲ್
ವಿಧಾನ
1) ಒಂದು ಬಾಣಲೆ ಅಥವಾ ಚಿಕ್ಕ ಪಾತ್ರೆಯಲ್ಲಿ ಹೆಸರುಬೇಳೆ ಹಾಕಿ ಚಿಕ್ಕ ಉರಿಯಲ್ಲಿ ಕೊಂಚವೇ ಕೆಂಪಗಾಗುವವರೆಗೆ ಹುರಿಯಿರಿ. ಚಿಕ್ಕ ಕಾಳುಗಳಾದರೆ ಮೂರರಿಂದ ನಾಲ್ಕು ನಿಮಿಷ ಸಾಕು. ದೊಡ್ಡಕಾಳುಗಳಾದರೆ ಸುಮಾರು ಐದರಿಂದ ಹತ್ತು ನಿಮಿಷ ಬೇಕಾಗಬಹುದು.
2) ಪ್ರೆಶರ್ ಕುಕ್ಕರ್ ಒಳಗೆ ಹೆಸರು ಬೇಳೆ ಮುಳುಗುವಷ್ಟು ನೀರು ಹಾಕಿ ಬಿಸಿಮಾಡಿ. ಇದಕ್ಕೆ ಹುರಿದ ಹೆಸರು ಬೇಳೆ ಹಾಕಿ ಎರಡು ಸೀಟಿ ಬರುವವರೆಗೆ ಬಿಸಿಮಾಡಿ. ಬಳಿಕ ತಕ್ಷಣ ಮುಚ್ಚಳದ ಮೇಲೆ ತಣ್ಣೀರು ಸುರಿದು ಸೀಟಿ ತೆಗೆದು ಮುಚ್ಚಳ ತೆರೆಯಿರಿ. (ಇಲ್ಲದಿದ್ದರೆ ಹೆಸರು ಬೇಳೆ ಪೂರ್ಣವಾಗಿ ಕರಗಿ ನೀರಾಗುತ್ತದೆ)
3) ಈ ಸಮಯದಲ್ಲಿ ಅವಲಕ್ಕಿಯನ್ನು ನೀರಿನಲ್ಲಿ ಚೆನ್ನಾಗಿ ತೊಳೆದುಕೊಳ್ಳಿ.
4) ಬಳಿಕ ನೀರು ಬಸಿದು ಒಂದು ಅಗಲವಾದ ಪಾತ್ರೆಯ ಮೇಲೆ ಹರಡಿ ಸುಮಾರು ಹದಿನೈದು ನಿಮಿಷ ಒಣಗಲು ಬಿಡಿ.
5) ಕುಕ್ಕರ್ನ ಕೆಲಸವಾದ ಬಳಿಕ ಇನ್ನೊಂದು ಪಾತ್ರೆಯಲ್ಲಿ ಕೊಂಚ ನೀರು ಹಾಕಿ ಕುದಿಸಿ. ನೀರು ಕುದಿ ಬಂದ ಬಳಿಕ ಬೆಲ್ಲದ ತುಂಡುಗಳನ್ನು ಹಾಕಿ. ನೀರು ಈ ಬೆಲ್ಲ ಮುಳುಗುವಷ್ಟಿದ್ದರೆ ಸಾಕು. ಬೆಲ್ಲಾ ಪೂರ್ಣವಾಗಿ ಕರಗುವವರೆಗೆ ಅಲ್ಲಾಡಿಸುತ್ತಿರಿ.
6) ಇನ್ನೊಂದು ಚಿಕ್ಕ ಪಾತ್ರೆಯಲ್ಲಿ ಕೊಂಚವೇ (ಅಂದರೆ ಸುಮಾರು ಎರಡು ದೊಡ್ಡ ಚಮಚ) ತುಪ್ಪ ಬಿಸಿಮಾಡಿ. ತುಪ್ಪ ಕರಗಿ ಕೊಂಚ ಬಿಸಿಯಾಗುತ್ತಿದ್ದಂತೆಯೇ ಮೊದಲು ಗೋಡಂಬಿ ಹಾಕಿ ಕೊಂಚ ಕೆಂಪಗಾದ ಬಳಿಕವೇ ಒಣದ್ರಾಕ್ಷಿ ಹಾಕಿ. ಒಣದ್ರಾಕ್ಷಿ ಹುರಿದ ತಕ್ಷಣ ಒಲೆಯಿಂದ ಪಾತ್ರೆಯನ್ನು ಇಳಿಸಿಬಿಡಿ (ಒಣದ್ರಾಕ್ಷಿಯನ್ನು ಎಣ್ಣೆಗೆ ಹಾಕಿದ ತಕ್ಷಣವೇ ಹುರಿದು ಬಿಡುವುದರಿಂದ ಮೊದಲೇ ಹಾಕಿದರೆ ಸುಟ್ಟು ಕರಕಲಾಗುತ್ತದೆ)
7) ಅವಲಕ್ಕಿ ನೆನೆಸಿಟ್ಟು ಹದಿನೈದು ನಿಮಿಷಗಳಾಗಿದ್ದರೆ ಇದನ್ನು ಬೆಲ್ಲದ ನೀರು ಇರುವ ಪಾತ್ರೆಗೆ ಸುರಿಯಿರಿ. ಬಳಿಕ ಬೆಂದ ಹೆಸರು ಬೇಳೆಯನ್ನು ಹಾಕಿ ತಿರುವಿ.
8) ಇದಕ್ಕೆ ಉಳಿದ ತುಪ್ಪ ಮತ್ತು ಕಾಯಿತುರಿ ಸೇರಿಸಿ ಮಿಶ್ರಣ ಮಾಡಿ.
9) ಸುಮಾರು ಒಂದು ನಿಮಿಷದ ಬಳಿಕ ಬಳಿಕ ಹುರಿದ ಗೋಡಂಬಿ ದ್ರಾಕ್ಷಿ, ಏಲಕ್ಕಿ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ.
10) ಬಿಸಿಯಿದ್ದಂತೆಯೇ ಅತಿಥಿಗಳಿಗೆ ಬಡಿಸಿ ಸಂಕ್ರಾಂತಿಯ ಸಂಭ್ರಮವನ್ನು ಹೆಚ್ಚಿಸಲು ನೆರವಾಗಿ. ಈ ಹೊಸರುಚಿ ಹೇಗೆನಿಸಿತು ಎಂಬುದನ್ನು ಕೆಳಗಿನ ಕಮೆಂಟ್ಸ್ ಭಾಗದಲ್ಲಿ ನಮಗೆ ಬರೆದು ತಿಳಿಸಿ.