Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಇವು ಅಡುಗೆಮನೆ ಪಿಸುಮಾತಲ್ಲ.. ಕಿವಿ ಮಾತುಗಳು!

* ಲೀಲಾ ಚಂದ್ರಶೇಖರ. ಬೆಂಗಳೂರು.
ಅಡಿಗಡಿಗೆ ಉಪಯೋಗಕ್ಕೆ ಬರುವ ಸಲಹೆಗಳು :
1. ಬಾಳೆ ಹಣ್ಣಿನಚಿಪ್ಪನ್ನು ಒಂದು ದಾರದಲ್ಲಿ ಕಟ್ಟಿ ಗೋಡೆಯ ಮೊಳೆ, ಹುಕ್ಗೆ ನೇತಾಕಿದರೆ, ಹಣ್ಣಿನ ಕೆಳಭಾಗ ಕಪ್ಪಾಗದೆ ಕೆಡದೆ ಇರುತ್ತದೆ.
2. ಮೆಣಸಿನಕಾಯಿ ಹೆಚ್ಚಿದ ಅಥವಾ ತುಂಡರಿಸಿದ ನಂತರ ಕೈಗೆ ಯಾವುದೇ ಎಣ್ಣೆ ಹಚ್ಚಿಕೊಂಡು ಪೇಪರ್ನಿಂದ ಒರೆಸಿ ಸಾಬೂನಿನಿಂದ ತೊಳೆದರೆ ಕೈಲಿ ಖಾರ ಉಳಿಯುವುದಿಲ್ಲ.
3. ಈರುಳ್ಳಿ ಹೆಚ್ಚುವಾಗ ಕಣ್ಣಲ್ಲಿ ನೀರು ಸುರಿಯುತ್ತದೆಯಲ್ಲವೇ? ಕನ್ನಡಕ ಧರಿಸಿ ಹೆಚ್ಚಿ. ಕಣ್ಣಲ್ಲಿ ನೀರು ಬರುವುದಿಲ್ಲ.
4. ಟೀ ಮಾಡುವಾಗ ಕಿತ್ತಳೆ ಸಿಪ್ಪೆ, ಹಸಿ ಶುಂಠಿ, ತುಳಸಿ, ಹೀಗೆ ಒಂದೊಂದುಸಲ ಒಂದೊಂದನ್ನು ಹಾಕಿ ಟೀ ಮಾಡಿದರೆ ಬಹಳ ರುಚಿ ಕೊಡುತ್ತೆ. ಆರೋಗ್ಯಕ್ಕೂ ಒಳ್ಳೆಯದು.
5. ಅಡಿಗೆ ಮನೆಯ ಸಿಂಕ್ ಹತ್ತಿರ ಒಂದು ಹಳೆಯ ಟೂತ್ ಬ್ರಷ್ ಇಡಿ, ನಕಾಸೆ ಇರುವ ಪಾತ್ರೆ ತಿಕ್ಕಲು ಉಪಯೋಗವಾಗುತ್ತೆ.
6. ಮನೆ ಗುಡಿಸುವ ಪೊರಕೆ, ಬಾತ್ರೂಂ ತೊಳೆಯುವ ಪೊರೆಕೆಗೆ ದಾರದ ಕುಣಿಕೆ ಹಾಕಿ ಬಾಗಿಲ ಹಿಂದೆ/ಮೂಲೆಯಲ್ಲಿ ನೇತುಹಾಕಿ, ಪೊರಕೆ ಕಡ್ಡಿ ಹಾಳಾಗುವುದಿಲ್ಲ.
7. ಬಾಳೆ ಹಣ್ಣಿನ ರಸಾಯನ ಮಾಡುವಾಗ ಒಂದು ಅರ್ಧ ಚಮಚ ಒಳ್ಳೆ ತುಪ್ಪ ಹಾಕಿದರೆ ಬಾಳೆಹಣ್ಣು ಕಪ್ಪಾಗುವುದಿಲ್ಲ, ರುಚಿಯು ಹೆಚ್ಚುತ್ತದೆ.
8. ಒಂದುಪಾವು ಗೋಧಿ ಹಿಟ್ಟಿಗೆ ಸ್ವಲ್ಪ ಉಪ್ಪು ಮತ್ತು ಒಂದೆರಡು ಬ್ರೆಡ್ಡಿನ ಬಿಳಿಭಾಗದ ಪುಡಿ (ಮಿಕ್ಸಿಯಲ್ಲಿ ಮಾಡಿ) ಹಾಕಿ ಕಲೆಸಿದರೆ ಚಪಾತಿ ತುಂಬಾ ಮೃದುವಾಗಿ ಆಗುತ್ತದೆ.
9. ನಿಮ್ಮ ಮನೆಯಲ್ಲಿ ಮೂರು ನಾಲ್ಕು ಬೇಡವಾದ ಗ್ಯಾಸ್ ಲೈಟರ್ಗಳಿದ್ದರೆ ಅವುಗಳನ್ನು ಆಗಾಗ್ಗೆ ಬದಲಾಯಿಸುತ್ತಾ ಉಪಯೋಗಿಸಿದರೆ, ಎಲ್ಲಾ ಲೈಟರ್ಗಳೂ ಚೆನ್ನಾಗಿ ಕೆಲಸ ಮಾಡುತ್ತವೆ.
10. ಕಬ್ಬಿಣದ ಬಾಣಲೆ, ರೊಟ್ಟಿ ತವ ಉಪಯೋಗಿಸಿ ತೊಳೆದ ನಂತರ ಒರೆಸಿ ಸ್ವಲ್ಪ ಅಡಿಗೆ ಎಣ್ಣೆ ಹಚ್ಚಿಡಿ, ಮತ್ತೊಮ್ಮೆ ಉಪಯೋಗಿಸುವಾಗ ಮೇಲಿಂದ ತೊಳೆದು (ಉಜ್ಜದೆ) ಉಪಯೋಗಿಸಿ. ಚಿಟಿಕೆ ಉಪ್ಪು ಹಾಕಿ ತವ ಮೇಲೆ ಉಜ್ಜಿದರೆ ರೊಟ್ಟಿ ಅಥವಾ ದೋಸೆ ಸಲೀಸಾಗಿ ಎದ್ದು ಬರುತ್ತದೆ.
ನಿಮಗೂ ಇಂಥ ಟಿಪ್ಸ್ ಗಳು ಗೊತ್ತಿದ್ದರೆ ನಮಗೆ ತಿಳಿಸಿ



Click it and Unblock the Notifications
