Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಇವು ಅಡುಗೆಮನೆ ಪಿಸುಮಾತಲ್ಲ.. ಕಿವಿ ಮಾತುಗಳು!

* ಲೀಲಾ ಚಂದ್ರಶೇಖರ. ಬೆಂಗಳೂರು.
ಅಡಿಗಡಿಗೆ ಉಪಯೋಗಕ್ಕೆ ಬರುವ ಸಲಹೆಗಳು :
1. ಬಾಳೆ ಹಣ್ಣಿನಚಿಪ್ಪನ್ನು ಒಂದು ದಾರದಲ್ಲಿ ಕಟ್ಟಿ ಗೋಡೆಯ ಮೊಳೆ, ಹುಕ್ಗೆ ನೇತಾಕಿದರೆ, ಹಣ್ಣಿನ ಕೆಳಭಾಗ ಕಪ್ಪಾಗದೆ ಕೆಡದೆ ಇರುತ್ತದೆ.
2. ಮೆಣಸಿನಕಾಯಿ ಹೆಚ್ಚಿದ ಅಥವಾ ತುಂಡರಿಸಿದ ನಂತರ ಕೈಗೆ ಯಾವುದೇ ಎಣ್ಣೆ ಹಚ್ಚಿಕೊಂಡು ಪೇಪರ್ನಿಂದ ಒರೆಸಿ ಸಾಬೂನಿನಿಂದ ತೊಳೆದರೆ ಕೈಲಿ ಖಾರ ಉಳಿಯುವುದಿಲ್ಲ.
3. ಈರುಳ್ಳಿ ಹೆಚ್ಚುವಾಗ ಕಣ್ಣಲ್ಲಿ ನೀರು ಸುರಿಯುತ್ತದೆಯಲ್ಲವೇ? ಕನ್ನಡಕ ಧರಿಸಿ ಹೆಚ್ಚಿ. ಕಣ್ಣಲ್ಲಿ ನೀರು ಬರುವುದಿಲ್ಲ.
4. ಟೀ ಮಾಡುವಾಗ ಕಿತ್ತಳೆ ಸಿಪ್ಪೆ, ಹಸಿ ಶುಂಠಿ, ತುಳಸಿ, ಹೀಗೆ ಒಂದೊಂದುಸಲ ಒಂದೊಂದನ್ನು ಹಾಕಿ ಟೀ ಮಾಡಿದರೆ ಬಹಳ ರುಚಿ ಕೊಡುತ್ತೆ. ಆರೋಗ್ಯಕ್ಕೂ ಒಳ್ಳೆಯದು.
5. ಅಡಿಗೆ ಮನೆಯ ಸಿಂಕ್ ಹತ್ತಿರ ಒಂದು ಹಳೆಯ ಟೂತ್ ಬ್ರಷ್ ಇಡಿ, ನಕಾಸೆ ಇರುವ ಪಾತ್ರೆ ತಿಕ್ಕಲು ಉಪಯೋಗವಾಗುತ್ತೆ.
6. ಮನೆ ಗುಡಿಸುವ ಪೊರಕೆ, ಬಾತ್ರೂಂ ತೊಳೆಯುವ ಪೊರೆಕೆಗೆ ದಾರದ ಕುಣಿಕೆ ಹಾಕಿ ಬಾಗಿಲ ಹಿಂದೆ/ಮೂಲೆಯಲ್ಲಿ ನೇತುಹಾಕಿ, ಪೊರಕೆ ಕಡ್ಡಿ ಹಾಳಾಗುವುದಿಲ್ಲ.
7. ಬಾಳೆ ಹಣ್ಣಿನ ರಸಾಯನ ಮಾಡುವಾಗ ಒಂದು ಅರ್ಧ ಚಮಚ ಒಳ್ಳೆ ತುಪ್ಪ ಹಾಕಿದರೆ ಬಾಳೆಹಣ್ಣು ಕಪ್ಪಾಗುವುದಿಲ್ಲ, ರುಚಿಯು ಹೆಚ್ಚುತ್ತದೆ.
8. ಒಂದುಪಾವು ಗೋಧಿ ಹಿಟ್ಟಿಗೆ ಸ್ವಲ್ಪ ಉಪ್ಪು ಮತ್ತು ಒಂದೆರಡು ಬ್ರೆಡ್ಡಿನ ಬಿಳಿಭಾಗದ ಪುಡಿ (ಮಿಕ್ಸಿಯಲ್ಲಿ ಮಾಡಿ) ಹಾಕಿ ಕಲೆಸಿದರೆ ಚಪಾತಿ ತುಂಬಾ ಮೃದುವಾಗಿ ಆಗುತ್ತದೆ.
9. ನಿಮ್ಮ ಮನೆಯಲ್ಲಿ ಮೂರು ನಾಲ್ಕು ಬೇಡವಾದ ಗ್ಯಾಸ್ ಲೈಟರ್ಗಳಿದ್ದರೆ ಅವುಗಳನ್ನು ಆಗಾಗ್ಗೆ ಬದಲಾಯಿಸುತ್ತಾ ಉಪಯೋಗಿಸಿದರೆ, ಎಲ್ಲಾ ಲೈಟರ್ಗಳೂ ಚೆನ್ನಾಗಿ ಕೆಲಸ ಮಾಡುತ್ತವೆ.
10. ಕಬ್ಬಿಣದ ಬಾಣಲೆ, ರೊಟ್ಟಿ ತವ ಉಪಯೋಗಿಸಿ ತೊಳೆದ ನಂತರ ಒರೆಸಿ ಸ್ವಲ್ಪ ಅಡಿಗೆ ಎಣ್ಣೆ ಹಚ್ಚಿಡಿ, ಮತ್ತೊಮ್ಮೆ ಉಪಯೋಗಿಸುವಾಗ ಮೇಲಿಂದ ತೊಳೆದು (ಉಜ್ಜದೆ) ಉಪಯೋಗಿಸಿ. ಚಿಟಿಕೆ ಉಪ್ಪು ಹಾಕಿ ತವ ಮೇಲೆ ಉಜ್ಜಿದರೆ ರೊಟ್ಟಿ ಅಥವಾ ದೋಸೆ ಸಲೀಸಾಗಿ ಎದ್ದು ಬರುತ್ತದೆ.
ನಿಮಗೂ ಇಂಥ ಟಿಪ್ಸ್ ಗಳು ಗೊತ್ತಿದ್ದರೆ ನಮಗೆ ತಿಳಿಸಿ



Click it and Unblock the Notifications