Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಇವು ಅಡುಗೆಮನೆ ಪಿಸುಮಾತಲ್ಲ.. ಕಿವಿ ಮಾತುಗಳು!

* ಲೀಲಾ ಚಂದ್ರಶೇಖರ. ಬೆಂಗಳೂರು.
ಅಡಿಗಡಿಗೆ ಉಪಯೋಗಕ್ಕೆ ಬರುವ ಸಲಹೆಗಳು :
1. ಬಾಳೆ ಹಣ್ಣಿನಚಿಪ್ಪನ್ನು ಒಂದು ದಾರದಲ್ಲಿ ಕಟ್ಟಿ ಗೋಡೆಯ ಮೊಳೆ, ಹುಕ್ಗೆ ನೇತಾಕಿದರೆ, ಹಣ್ಣಿನ ಕೆಳಭಾಗ ಕಪ್ಪಾಗದೆ ಕೆಡದೆ ಇರುತ್ತದೆ.
2. ಮೆಣಸಿನಕಾಯಿ ಹೆಚ್ಚಿದ ಅಥವಾ ತುಂಡರಿಸಿದ ನಂತರ ಕೈಗೆ ಯಾವುದೇ ಎಣ್ಣೆ ಹಚ್ಚಿಕೊಂಡು ಪೇಪರ್ನಿಂದ ಒರೆಸಿ ಸಾಬೂನಿನಿಂದ ತೊಳೆದರೆ ಕೈಲಿ ಖಾರ ಉಳಿಯುವುದಿಲ್ಲ.
3. ಈರುಳ್ಳಿ ಹೆಚ್ಚುವಾಗ ಕಣ್ಣಲ್ಲಿ ನೀರು ಸುರಿಯುತ್ತದೆಯಲ್ಲವೇ? ಕನ್ನಡಕ ಧರಿಸಿ ಹೆಚ್ಚಿ. ಕಣ್ಣಲ್ಲಿ ನೀರು ಬರುವುದಿಲ್ಲ.
4. ಟೀ ಮಾಡುವಾಗ ಕಿತ್ತಳೆ ಸಿಪ್ಪೆ, ಹಸಿ ಶುಂಠಿ, ತುಳಸಿ, ಹೀಗೆ ಒಂದೊಂದುಸಲ ಒಂದೊಂದನ್ನು ಹಾಕಿ ಟೀ ಮಾಡಿದರೆ ಬಹಳ ರುಚಿ ಕೊಡುತ್ತೆ. ಆರೋಗ್ಯಕ್ಕೂ ಒಳ್ಳೆಯದು.
5. ಅಡಿಗೆ ಮನೆಯ ಸಿಂಕ್ ಹತ್ತಿರ ಒಂದು ಹಳೆಯ ಟೂತ್ ಬ್ರಷ್ ಇಡಿ, ನಕಾಸೆ ಇರುವ ಪಾತ್ರೆ ತಿಕ್ಕಲು ಉಪಯೋಗವಾಗುತ್ತೆ.
6. ಮನೆ ಗುಡಿಸುವ ಪೊರಕೆ, ಬಾತ್ರೂಂ ತೊಳೆಯುವ ಪೊರೆಕೆಗೆ ದಾರದ ಕುಣಿಕೆ ಹಾಕಿ ಬಾಗಿಲ ಹಿಂದೆ/ಮೂಲೆಯಲ್ಲಿ ನೇತುಹಾಕಿ, ಪೊರಕೆ ಕಡ್ಡಿ ಹಾಳಾಗುವುದಿಲ್ಲ.
7. ಬಾಳೆ ಹಣ್ಣಿನ ರಸಾಯನ ಮಾಡುವಾಗ ಒಂದು ಅರ್ಧ ಚಮಚ ಒಳ್ಳೆ ತುಪ್ಪ ಹಾಕಿದರೆ ಬಾಳೆಹಣ್ಣು ಕಪ್ಪಾಗುವುದಿಲ್ಲ, ರುಚಿಯು ಹೆಚ್ಚುತ್ತದೆ.
8. ಒಂದುಪಾವು ಗೋಧಿ ಹಿಟ್ಟಿಗೆ ಸ್ವಲ್ಪ ಉಪ್ಪು ಮತ್ತು ಒಂದೆರಡು ಬ್ರೆಡ್ಡಿನ ಬಿಳಿಭಾಗದ ಪುಡಿ (ಮಿಕ್ಸಿಯಲ್ಲಿ ಮಾಡಿ) ಹಾಕಿ ಕಲೆಸಿದರೆ ಚಪಾತಿ ತುಂಬಾ ಮೃದುವಾಗಿ ಆಗುತ್ತದೆ.
9. ನಿಮ್ಮ ಮನೆಯಲ್ಲಿ ಮೂರು ನಾಲ್ಕು ಬೇಡವಾದ ಗ್ಯಾಸ್ ಲೈಟರ್ಗಳಿದ್ದರೆ ಅವುಗಳನ್ನು ಆಗಾಗ್ಗೆ ಬದಲಾಯಿಸುತ್ತಾ ಉಪಯೋಗಿಸಿದರೆ, ಎಲ್ಲಾ ಲೈಟರ್ಗಳೂ ಚೆನ್ನಾಗಿ ಕೆಲಸ ಮಾಡುತ್ತವೆ.
10. ಕಬ್ಬಿಣದ ಬಾಣಲೆ, ರೊಟ್ಟಿ ತವ ಉಪಯೋಗಿಸಿ ತೊಳೆದ ನಂತರ ಒರೆಸಿ ಸ್ವಲ್ಪ ಅಡಿಗೆ ಎಣ್ಣೆ ಹಚ್ಚಿಡಿ, ಮತ್ತೊಮ್ಮೆ ಉಪಯೋಗಿಸುವಾಗ ಮೇಲಿಂದ ತೊಳೆದು (ಉಜ್ಜದೆ) ಉಪಯೋಗಿಸಿ. ಚಿಟಿಕೆ ಉಪ್ಪು ಹಾಕಿ ತವ ಮೇಲೆ ಉಜ್ಜಿದರೆ ರೊಟ್ಟಿ ಅಥವಾ ದೋಸೆ ಸಲೀಸಾಗಿ ಎದ್ದು ಬರುತ್ತದೆ.
ನಿಮಗೂ ಇಂಥ ಟಿಪ್ಸ್ ಗಳು ಗೊತ್ತಿದ್ದರೆ ನಮಗೆ ತಿಳಿಸಿ



Click it and Unblock the Notifications