Latest Updates
-
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ!
ಇವು ಅಡುಗೆಮನೆ ಪಿಸುಮಾತಲ್ಲ.. ಕಿವಿ ಮಾತುಗಳು!

* ಲೀಲಾ ಚಂದ್ರಶೇಖರ. ಬೆಂಗಳೂರು.
ಅಡಿಗಡಿಗೆ ಉಪಯೋಗಕ್ಕೆ ಬರುವ ಸಲಹೆಗಳು :
1. ಬಾಳೆ ಹಣ್ಣಿನಚಿಪ್ಪನ್ನು ಒಂದು ದಾರದಲ್ಲಿ ಕಟ್ಟಿ ಗೋಡೆಯ ಮೊಳೆ, ಹುಕ್ಗೆ ನೇತಾಕಿದರೆ, ಹಣ್ಣಿನ ಕೆಳಭಾಗ ಕಪ್ಪಾಗದೆ ಕೆಡದೆ ಇರುತ್ತದೆ.
2. ಮೆಣಸಿನಕಾಯಿ ಹೆಚ್ಚಿದ ಅಥವಾ ತುಂಡರಿಸಿದ ನಂತರ ಕೈಗೆ ಯಾವುದೇ ಎಣ್ಣೆ ಹಚ್ಚಿಕೊಂಡು ಪೇಪರ್ನಿಂದ ಒರೆಸಿ ಸಾಬೂನಿನಿಂದ ತೊಳೆದರೆ ಕೈಲಿ ಖಾರ ಉಳಿಯುವುದಿಲ್ಲ.
3. ಈರುಳ್ಳಿ ಹೆಚ್ಚುವಾಗ ಕಣ್ಣಲ್ಲಿ ನೀರು ಸುರಿಯುತ್ತದೆಯಲ್ಲವೇ? ಕನ್ನಡಕ ಧರಿಸಿ ಹೆಚ್ಚಿ. ಕಣ್ಣಲ್ಲಿ ನೀರು ಬರುವುದಿಲ್ಲ.
4. ಟೀ ಮಾಡುವಾಗ ಕಿತ್ತಳೆ ಸಿಪ್ಪೆ, ಹಸಿ ಶುಂಠಿ, ತುಳಸಿ, ಹೀಗೆ ಒಂದೊಂದುಸಲ ಒಂದೊಂದನ್ನು ಹಾಕಿ ಟೀ ಮಾಡಿದರೆ ಬಹಳ ರುಚಿ ಕೊಡುತ್ತೆ. ಆರೋಗ್ಯಕ್ಕೂ ಒಳ್ಳೆಯದು.
5. ಅಡಿಗೆ ಮನೆಯ ಸಿಂಕ್ ಹತ್ತಿರ ಒಂದು ಹಳೆಯ ಟೂತ್ ಬ್ರಷ್ ಇಡಿ, ನಕಾಸೆ ಇರುವ ಪಾತ್ರೆ ತಿಕ್ಕಲು ಉಪಯೋಗವಾಗುತ್ತೆ.
6. ಮನೆ ಗುಡಿಸುವ ಪೊರಕೆ, ಬಾತ್ರೂಂ ತೊಳೆಯುವ ಪೊರೆಕೆಗೆ ದಾರದ ಕುಣಿಕೆ ಹಾಕಿ ಬಾಗಿಲ ಹಿಂದೆ/ಮೂಲೆಯಲ್ಲಿ ನೇತುಹಾಕಿ, ಪೊರಕೆ ಕಡ್ಡಿ ಹಾಳಾಗುವುದಿಲ್ಲ.
7. ಬಾಳೆ ಹಣ್ಣಿನ ರಸಾಯನ ಮಾಡುವಾಗ ಒಂದು ಅರ್ಧ ಚಮಚ ಒಳ್ಳೆ ತುಪ್ಪ ಹಾಕಿದರೆ ಬಾಳೆಹಣ್ಣು ಕಪ್ಪಾಗುವುದಿಲ್ಲ, ರುಚಿಯು ಹೆಚ್ಚುತ್ತದೆ.
8. ಒಂದುಪಾವು ಗೋಧಿ ಹಿಟ್ಟಿಗೆ ಸ್ವಲ್ಪ ಉಪ್ಪು ಮತ್ತು ಒಂದೆರಡು ಬ್ರೆಡ್ಡಿನ ಬಿಳಿಭಾಗದ ಪುಡಿ (ಮಿಕ್ಸಿಯಲ್ಲಿ ಮಾಡಿ) ಹಾಕಿ ಕಲೆಸಿದರೆ ಚಪಾತಿ ತುಂಬಾ ಮೃದುವಾಗಿ ಆಗುತ್ತದೆ.
9. ನಿಮ್ಮ ಮನೆಯಲ್ಲಿ ಮೂರು ನಾಲ್ಕು ಬೇಡವಾದ ಗ್ಯಾಸ್ ಲೈಟರ್ಗಳಿದ್ದರೆ ಅವುಗಳನ್ನು ಆಗಾಗ್ಗೆ ಬದಲಾಯಿಸುತ್ತಾ ಉಪಯೋಗಿಸಿದರೆ, ಎಲ್ಲಾ ಲೈಟರ್ಗಳೂ ಚೆನ್ನಾಗಿ ಕೆಲಸ ಮಾಡುತ್ತವೆ.
10. ಕಬ್ಬಿಣದ ಬಾಣಲೆ, ರೊಟ್ಟಿ ತವ ಉಪಯೋಗಿಸಿ ತೊಳೆದ ನಂತರ ಒರೆಸಿ ಸ್ವಲ್ಪ ಅಡಿಗೆ ಎಣ್ಣೆ ಹಚ್ಚಿಡಿ, ಮತ್ತೊಮ್ಮೆ ಉಪಯೋಗಿಸುವಾಗ ಮೇಲಿಂದ ತೊಳೆದು (ಉಜ್ಜದೆ) ಉಪಯೋಗಿಸಿ. ಚಿಟಿಕೆ ಉಪ್ಪು ಹಾಕಿ ತವ ಮೇಲೆ ಉಜ್ಜಿದರೆ ರೊಟ್ಟಿ ಅಥವಾ ದೋಸೆ ಸಲೀಸಾಗಿ ಎದ್ದು ಬರುತ್ತದೆ.
ನಿಮಗೂ ಇಂಥ ಟಿಪ್ಸ್ ಗಳು ಗೊತ್ತಿದ್ದರೆ ನಮಗೆ ತಿಳಿಸಿ



Click it and Unblock the Notifications