Latest Updates
-
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ! -
ಕರಾವಳಿ ರೆಡ್ ಅಲರ್ಟ್: ಮನೆಯಲ್ಲೇ ಸುರಕ್ಷಿತವಾಗಿ ಫಿಟ್ ಆಗಿರಲು ಈ 12 ನಿಮಿಷಗಳ ವರ್ಕೌಟ್ ಟ್ರೈ ಮಾಡಿ!
ಅಡುಗೆಮನೆಯಲ್ಲಿ ಗಮನಿಸಬೇಕಾದ ಎಚ್ಚರಿಕೆಗಳು

ಚೊಕ್ಕ ಅಡುಗೆಮನೆಗೆ ಸಿಗುವ ಮೆಚ್ಚುಗೆ ಗೃಹಿಣಿಗೆ ಸಿಗುವ ಅತ್ಯುತ್ತಮ ಸರ್ಟಿಫಿಕೇಟುಗಳಲ್ಲೊಂದು. ಅಡುಗೆಮನೆಯನ್ನು ಒಪ್ಪಓರಣವಾಗಿ ಇಟ್ಟುಕೊಳ್ಳುವುದು ಮಾತ್ರವಲ್ಲ, ಯಾವುದೇ ಅವಘಡ ಸಂಭವಿಸದಂತೆ ಎಚ್ಚರಿಕೆ ವಹಿಸುವುದು ಕೂಡ ಗೃಹಿಣಿಯ ಅಥವಾ ಗಂಡನ ಪ್ರಾಥಮಿಕ ಕರ್ತವ್ಯಗಳಲ್ಲೊಂದು. ನಮಗೇ ಗೊತ್ತಿಲ್ಲದಂತೆ ಸಂಭವಿಸುವ ಅನೇಕ ಸಣ್ಣಪುಟ್ಟ ಅವಘಡಗಳನ್ನು ತಪ್ಪಿಸುವುದು ಈ ಎಚ್ಚರಿಕೆಯಿಂದ ಸಾಧ್ಯ.
ಆ ಎಚ್ಚರಿಕೆಗಳು ಯಾವುವು?
* ಹಸಿ ಕೈಯಿಂದಲೇ ಅನೇಕ ವಸ್ತುಗಳನ್ನು ಮುಟ್ಟುವ ಅಭ್ಯಾಸ ಕೆಲವರಿಗಿರುತ್ತದೆ. ಕೈ ನೀಟಾಗಿ ಒರೆಸಿಕೊಂಡು ಮುಂದಿನ ಕೆಲಸಕ್ಕೆ ಅಣಿಯಾದರೆ, ಉಪ್ಪಿನಕಾಯಿಯಂಥ ವಸ್ತು ಕೆಡುವುದು, ವಿದ್ಯುತ್ ಶಾಕ್ ಹೊಡೆಯದಿರುವುದನ್ನು ತಪ್ಪಿಸಬಹುದು. ಅದಕ್ಕೊಂದು ಒಣ ಬಟ್ಟೆ ಇಟ್ಟುಕೊಳ್ಳಿ. ಸೀರಿಗೆ ಕೈಯೊರೆಸುವುದು ಕೆಟ್ಟಚಾಳಿ.
* ಅಡುಗೆ ಮಾಡಿದ ನಂತರ ಪಾತ್ರೆ ಬಿಸಿಯಾಗಿರುವಾಗ ಮಕ್ಕಳ ಕೈಗೆ ಸಿಗದಂತೆ ಎತ್ತಿಡಿ. ತಿಳಿಯದೇ ಮುಟ್ಟಿದಾಗ ಪುಟ್ಟ ಕೈಗಳು ಸುಟ್ಟುಹೋದಾವು ಎಚ್ಚರ.
* ಹಾಗೆಯೇ, ಚಾಕು, ಫೋರ್ಕ್, ಕತ್ತರಿ ಮುಂತಾದ ಚೂಪಾದ ಸಾಮಗ್ರಿಗಳು ಮಕ್ಕಳ ಕೈಗೆ ಸಿಗದಂತೆ ಎಚ್ಚರವಹಿಸಿ. ಅದರಲ್ಲೂ ಪುಟಾಣಿಗಳ ಲಕ್ಷ್ಯ ಇಂಥ ವಸ್ತುಗಳೆಗೇ ಇರುತ್ತದೆ.
* ತರಕಾರಿ ಸಿಪ್ಪೆ ತೆಗೆಯುವ ಸಾಧನವನ್ನು ಆಗಾಗ ಬದಲಿಸುತ್ತಿರಿ. ಅತ್ಯುತ್ತಮ ಸ್ಟೀಲಿನದು ಆಗಿರದಿದ್ದರೆ ಜಂಗು ಹಿಡಿದಿರುತ್ತದೆ. ಇಂಥವುಗಳನ್ನು ಬಳಸಿದರೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು.
* ದೋಸೆ ಮಾಡುವ ನಾನ್ ಸ್ಟಿಕ್ ತವಾ, ಚಪಾತಿ ಮಾಡುವ ಹೆಂಚು ಬಹಳ ದಿನಗಳಿಂದ ಉಪಯೋಗಿಸುತ್ತಿದ್ದರೆ ಬದಲಿಸುವುದು ಒಳಿತು. ಅದರಲ್ಲೂ ಕಾದಾಗ ಅಂಚಿನಲ್ಲಿ ಗುಳ್ಳೆಗಳು ಬರುತ್ತಿದ್ದರೆ ಅದನ್ನು ಬದಲಿಸಿ ಹೊಸದನ್ನು ಕೊಳ್ಳುವುದು ನಿಮ್ಮ ಆದ್ಯ ಕರ್ತವ್ಯ.
* ನೆಲದ ಮೇಲೆ ಹಾಲು, ಎಣ್ಣೆಯಂಥ ಪದಾರ್ಥಗಳು ಚೆಲ್ಲಿದಾಗ ಎಲ್ಲ ಕೆಲಸ ಬಿಟ್ಟು ಜಿಡ್ಡು ಹೋಗುವ ಹಾಗೆ ನೆಲ ಒರೆಸಿರಿ. ಹಿರಿಜೀವಗಳು ಅಥವಾ ಪುಟ್ಟ ಮಕ್ಕಳು ಓಡಾಡುವಾಗ ಜಾರಿ ಬಿದ್ದಾರು. ಇಂಥ ಪದಾರ್ಥಗಳು ಚೆಲ್ಲಿದಾಗ ಮೊದಲೇ ಎಚ್ಚರಿಸುವುದು ಜಾಣತನ.
* ಅಡುಗೆ ಮಾಡುವಾಗ ಫೋನ್ ಕಾಲ್ ತೆಗೆದುಕೊಳ್ಳುವುದು ಅಥವಾ ಟಿವಿಯನ್ನು ನೋಡುವುದು ಜಾಣ ಗೃಹಿಣಿಯ ಲಕ್ಷಣವಲ್ಲ. ಮೈಮರೆತಾಗ ಏನಾದರೂ ಸಂಭವಿಸಿದರೆ ಅದಕ್ಕೆ ಕಾರಣ ನೀವೇ ಆಗುತ್ತೀರಿ.
* ಎಲ್ಲಕ್ಕಿಂತ ಮಹತ್ವದ್ದೆಂದರೆ, ರಾತ್ರಿ ಮಲಗುವಾಗ ಅಥವಾ ಮನೆಯಿಂದ ಹೊರಗೆ ಹೋಗುವಾಗ ಗ್ಯಾಸ್ ನಾಬ್ ಅನ್ನು ಆಫ್ ಮಾಡಿ ಹೋಗಿರಿ.



Click it and Unblock the Notifications