Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ಅಡುಗೆ ಮನೆಯ ವಿಭಿನ್ನ ಕಲೆಗಾರಿಕೆ

* ಅಕ್ಕಿ ಅಥವಾ ಬೇಳೆಯ ಡಬ್ಬಿಗೆ ಕೈಹಾಕುವ ಮೊದಲು ಕೈ ಒಣಗಿರಲಿ. ಹಸಿಕೈಯಿಂದ ಹಿಡಿದರೆ ಹುಳ ಹಿಡಿಯುವುದು ಖಂಡಿತ.
* ಅಕ್ಕಿಯಲ್ಲಿ ನುಸಿಯಾಗದಿರಲು ಡಬ್ಬಿಯಲ್ಲಿ ಒಂದು ಈರುಳ್ಳಿಯನ್ನು ಹೂತಿಡಿ. ಹುಳ ಆಗುವುದಿಲ್ಲ.
* ಅನ್ನ ಮಾಡುವ ಮೊದಲು ಎರಡನೇ ಬಾರಿ ತೊಳೆದ ಅಕ್ಕಿಯ ನೀರನ್ನು ಹಾಗೇ ಚೆಲ್ಲದೆ, ಸಕ್ಕರೆ, ನಿಂಬೆರಸ ಸೇರಿಸಿ ಪಾನಕ ಮಾಡಿ ಕುಡಿಯಬಹುದು. ದೇಹಕ್ಕೆ ಅದು ತಂಪು ತಂಪು.
* ತುಂಡರಿಸಿ ತಿನ್ನದೇ ಪ್ರಿಜ್ಜಲ್ಲಿಟ್ಟ ಸೇಬು ಕಂದು ಬಣ್ಣಕ್ಕೆ ತಿರುಗದಿರಲು ಉಪ್ಪು ಲೇಪಿಸಿ.
* ಡಬ್ಬಿಯಲ್ಲಿ ಶೇಕರಿಸಿಟ್ಟ ಸಕ್ಕರೆಗೆ ಇರುವೆ ಬಾರದಿರಲು ಒಂದೆರಡು ಲವಂಗಗಳನ್ನು ಸೇರಿಸಿಡಿ.
* ಈರುಳ್ಳಿ ಹೆಚ್ಚುವಾಗ ಕಣ್ಣೀರು ಬರದಿರಲು ಅರ್ಧ ಹೆಚ್ಚಿ ನೀರಲ್ಲಿ ಕೆಲಹೊತ್ತು ನೆನೆ ಇಡಿ.
* ಹಾಲಿನ ಪಾತ್ರೆ ತಟಪಟ ಸದ್ದು ಮಾಡದಿರಲು ಪಾತ್ರೆಗೆ ಹಾಲು ಹಾಕುವ ಮೊದಲು ಸ್ವಲ್ಪ ನೀರು ಹಾಕಿ.
* ಹಾಲು ಕಾಯಿಸದೆ ಬಹಳ ಹೊತ್ತು ಇಟ್ಟಿದ್ದರೆ, ನಂತರ ಕಾಸುವಾಗ ಚಿಟಿಕೆ ತಿನ್ನುವ ಸೋಡಾ ಸೇರಿಸಿ ಕಾಯಿಸಿ, ಒಡೆಯುವುದಿಲ್ಲ.
* ಆಲೂಗಡ್ಡೆ ಬೇಗನೆ ಬೇಯಬೇಕಿದ್ದರೆ ಸ್ವಲ್ಪ ಹೊತ್ತು ಉಪ್ಪಿನ ನೀರಲ್ಲಿ ನೆನೆಸಿಟ್ಟು ನಂತರ ಬೇಯಿಸಿ.
* ಮೊಸರು ಹುಳಿಹುಳಿಯಾಗಿದ್ದರೆ ಅದಕ್ಕೆ ಸ್ವಲ್ಪ ನೀರು ಸೇರಿಸಿ ಎರಡು ತಾಸು ಬಿಡ್ಡು ನೀರನ್ನು ಬಸಿದರೆ ಮೊಸರು ಮತ್ತೆ ಸಿಹಿಯಾಗಿರುತ್ತದೆ.
* ಗೋಬಿ ಮಂಚೂರಿ ಮಾಡುವ ಮೊದಲು ನೀರಿನಲ್ಲಿ ಚಿಟಿಕೆ ಉಪ್ಪು ಮತ್ತು ಅರಿಷಿಣ ಸೇರಿಸಿ ಹೂಕೋಸು ತುಣುಕುಗಳನ್ನು ನೀರಲ್ಲಿ ಮುಳುಗಿಸಿ. ಹುಳಗಳು ಹೂಕೋಸಿಂದ ಹೊರಬರುತ್ತವೆ.
* ಉಪ್ಪಿಟ್ಟು, ಅವಲಕ್ಕಿಯಂಥ ತಿಂಡಿಗೆ ಉಪ್ಪು ಜಾಸ್ತಿಯಾದರೆ ಇನ್ನಷ್ಟು ನಿಂಬೆರಸ ಹಿಂಡಿದರೆ ಉಪ್ಪಿನಂಶ ಕಡಿಮೆಯಾಗುತ್ತದೆ.



Click it and Unblock the Notifications
