Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಅಡುಗೆ ಮನೆಯ ವಿಭಿನ್ನ ಕಲೆಗಾರಿಕೆ

* ಅಕ್ಕಿ ಅಥವಾ ಬೇಳೆಯ ಡಬ್ಬಿಗೆ ಕೈಹಾಕುವ ಮೊದಲು ಕೈ ಒಣಗಿರಲಿ. ಹಸಿಕೈಯಿಂದ ಹಿಡಿದರೆ ಹುಳ ಹಿಡಿಯುವುದು ಖಂಡಿತ.
* ಅಕ್ಕಿಯಲ್ಲಿ ನುಸಿಯಾಗದಿರಲು ಡಬ್ಬಿಯಲ್ಲಿ ಒಂದು ಈರುಳ್ಳಿಯನ್ನು ಹೂತಿಡಿ. ಹುಳ ಆಗುವುದಿಲ್ಲ.
* ಅನ್ನ ಮಾಡುವ ಮೊದಲು ಎರಡನೇ ಬಾರಿ ತೊಳೆದ ಅಕ್ಕಿಯ ನೀರನ್ನು ಹಾಗೇ ಚೆಲ್ಲದೆ, ಸಕ್ಕರೆ, ನಿಂಬೆರಸ ಸೇರಿಸಿ ಪಾನಕ ಮಾಡಿ ಕುಡಿಯಬಹುದು. ದೇಹಕ್ಕೆ ಅದು ತಂಪು ತಂಪು.
* ತುಂಡರಿಸಿ ತಿನ್ನದೇ ಪ್ರಿಜ್ಜಲ್ಲಿಟ್ಟ ಸೇಬು ಕಂದು ಬಣ್ಣಕ್ಕೆ ತಿರುಗದಿರಲು ಉಪ್ಪು ಲೇಪಿಸಿ.
* ಡಬ್ಬಿಯಲ್ಲಿ ಶೇಕರಿಸಿಟ್ಟ ಸಕ್ಕರೆಗೆ ಇರುವೆ ಬಾರದಿರಲು ಒಂದೆರಡು ಲವಂಗಗಳನ್ನು ಸೇರಿಸಿಡಿ.
* ಈರುಳ್ಳಿ ಹೆಚ್ಚುವಾಗ ಕಣ್ಣೀರು ಬರದಿರಲು ಅರ್ಧ ಹೆಚ್ಚಿ ನೀರಲ್ಲಿ ಕೆಲಹೊತ್ತು ನೆನೆ ಇಡಿ.
* ಹಾಲಿನ ಪಾತ್ರೆ ತಟಪಟ ಸದ್ದು ಮಾಡದಿರಲು ಪಾತ್ರೆಗೆ ಹಾಲು ಹಾಕುವ ಮೊದಲು ಸ್ವಲ್ಪ ನೀರು ಹಾಕಿ.
* ಹಾಲು ಕಾಯಿಸದೆ ಬಹಳ ಹೊತ್ತು ಇಟ್ಟಿದ್ದರೆ, ನಂತರ ಕಾಸುವಾಗ ಚಿಟಿಕೆ ತಿನ್ನುವ ಸೋಡಾ ಸೇರಿಸಿ ಕಾಯಿಸಿ, ಒಡೆಯುವುದಿಲ್ಲ.
* ಆಲೂಗಡ್ಡೆ ಬೇಗನೆ ಬೇಯಬೇಕಿದ್ದರೆ ಸ್ವಲ್ಪ ಹೊತ್ತು ಉಪ್ಪಿನ ನೀರಲ್ಲಿ ನೆನೆಸಿಟ್ಟು ನಂತರ ಬೇಯಿಸಿ.
* ಮೊಸರು ಹುಳಿಹುಳಿಯಾಗಿದ್ದರೆ ಅದಕ್ಕೆ ಸ್ವಲ್ಪ ನೀರು ಸೇರಿಸಿ ಎರಡು ತಾಸು ಬಿಡ್ಡು ನೀರನ್ನು ಬಸಿದರೆ ಮೊಸರು ಮತ್ತೆ ಸಿಹಿಯಾಗಿರುತ್ತದೆ.
* ಗೋಬಿ ಮಂಚೂರಿ ಮಾಡುವ ಮೊದಲು ನೀರಿನಲ್ಲಿ ಚಿಟಿಕೆ ಉಪ್ಪು ಮತ್ತು ಅರಿಷಿಣ ಸೇರಿಸಿ ಹೂಕೋಸು ತುಣುಕುಗಳನ್ನು ನೀರಲ್ಲಿ ಮುಳುಗಿಸಿ. ಹುಳಗಳು ಹೂಕೋಸಿಂದ ಹೊರಬರುತ್ತವೆ.
* ಉಪ್ಪಿಟ್ಟು, ಅವಲಕ್ಕಿಯಂಥ ತಿಂಡಿಗೆ ಉಪ್ಪು ಜಾಸ್ತಿಯಾದರೆ ಇನ್ನಷ್ಟು ನಿಂಬೆರಸ ಹಿಂಡಿದರೆ ಉಪ್ಪಿನಂಶ ಕಡಿಮೆಯಾಗುತ್ತದೆ.



Click it and Unblock the Notifications











