Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಆರೋಗ್ಯ ಕಾಯಲು ಕರಿಬೇವು ಅತ್ಯಗತ್ಯ

ಕಫ, ಪಿತ್ತ, ಜಠರದ ರೋಗ, ರಕ್ತದೊತ್ತಡ, ಮಧುಮೇಹ, ಉದರ ಸಂಬಂಧ ಸಮಸ್ಯೆ, ಆಮಶಂಕೆ, ಮಲಬದ್ಧತೆ, ಭೇದಿ ನಿವಾರಣೆಗೆ ಕರಿಬೇವು ಸಹಕಾರಿ. ಟಿಬಿ, ಜಾಂಡೀಸ್ ಹಾಗೂ ಸರ್ಜರಿ ನಂತರ ದೇಹದ ಆರೋಗ್ಯ ಸಮತೋಲನ ಕಾಪಾಡಲು ಕರಿಬೇವು ಸೇವನೆ ಒಳ್ಳೆಯದು.
ಉಪಯೋಗಗಳು:
* 1-2 ಟೀ ಚಮಚದಷ್ಟು ಎಲೆಯ ರಸವನ್ನು, 1 ಟೀ ಚಮಚ ನಿಂಬೆರಸವನ್ನು ಮತ್ತು ಸಕ್ಕರೆಯನ್ನು ಬೆರೆಸಿ ಸೇವಿಸುವುದರಿಂದ ಅಜೀರ್ಣ, ಅತಿಯಾಗಿ ಜಿಡ್ಡು ಪದಾರ್ಥ ಸೇವನೆಯಿಂದುಂಟಾದ ತೊಂದರೆಗಳನ್ನು ನಿವಾರಿಸಬಹುದು.
* ಭೇದಿ, ಆಮಶಂಕೆ ನಿವಾರಣೆಗೆ ಎಳೆಯದಾದ ಎಲೆಗಳನ್ನು ಜೇನಿನೊಂದಿಗೆ ನೀಡಬಹುದು. ಅಥವಾ ಚೆನ್ನಾಗಿ ಅರೆದ ಮಜ್ಜಿಗೆಯೊಂದಿಗೆ ಸ್ವಲ್ಪ ಶುಂಠಿ ಬೆರೆಸಿ ನೀಡಿದರೆ ಉಪಯುಕ್ತ.
* ಬೊಜ್ಜು ಕರಗಿಸಲು ಪ್ರತಿ ಮುಂಜಾನೆ 8-10 ತಾಜಾ ಎಲೆಗಳನ್ನು ಅಗಿದು ಸೇವಿಸಿದರೆ ಒಳ್ಳೆಯದು.ಇದರಿಂದ ಮಧುಮೇಹ ರೋಗವನ್ನು ತಡೆಗಟ್ಟಬಹುದು.
* ಕುರು, ಗಾಯವಾದಾಗ ಕರಿಬೇವಿನ ಎಲೆಗಳನ್ನು ಅರೆದು ಸ್ವಲ್ಪ ಅರಿಶಿನದೊಂದಿಗೆ ಬೆರೆಸಿ ಅರೆದು ಹಚ್ಚಬಹುದು.
* ಕಾಮಾಲೆ ರೋಗವಿದ್ದಾಗ 10-12 ಎಲೆಗಳನ್ನು ನೀರಿನಲ್ಲಿ ಚೆನ್ನಾಗಿ ತೊಳೆದು, ಅರೆದುಕೊಂಡು ಸುಮಾರು 60-100ಮಿ.ಲೀ ಎಳನೀರಿನೊಂದಿಗೆ ನೀಡಬಹುದು.
* ಸೊಳ್ಳೆ, ಇರುವೆ, ನೊಣ ಮುಂತಾದ ಕೀಟಗಳ ತೊಂದರೆ ತಪ್ಪಿಸಲು ಕರಿಬೇವಿನ ಸುವಾಸನೆ ಸಾಕು.
* ಕರಿಬೇವಿನ ಎಲೆಯಲ್ಲಿ ಕಬ್ಬಿಣದ ಅಂಶ ಹೇರಳವಾಗಿರುವ ಕಾರಣ, ಹಸಿ ಎಲೆಯನ್ನು ಅಗಿದು ತಿಂದರೆ ಒಳ್ಳೆಯದು.
ಆಯುರ್ವೇದ ಔಷಧಗಳಲ್ಲಿ ಕರಿಬೇವಿಗೆ ವಿಶೇಷ ಸ್ಥಾನವುಂಟು. ಕರಿಬೇವಿನ ಸೊಪ್ಪಿನ ಉಪಯೋಗಗಳು ಇನ್ನೂ ಅನೇಕ ಇದ್ದೇ ಇದೆ. ಓದುಗರು ತಮಗೆ ತಿಳಿದ ಸಲಹೆಗಳು ನಮಗೆ ತಿಳಿಸಬಹುದು.



Click it and Unblock the Notifications









