Latest Updates
-
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು!
ಆರೋಗ್ಯ ಕಾಯಲು ಕರಿಬೇವು ಅತ್ಯಗತ್ಯ

ಕಫ, ಪಿತ್ತ, ಜಠರದ ರೋಗ, ರಕ್ತದೊತ್ತಡ, ಮಧುಮೇಹ, ಉದರ ಸಂಬಂಧ ಸಮಸ್ಯೆ, ಆಮಶಂಕೆ, ಮಲಬದ್ಧತೆ, ಭೇದಿ ನಿವಾರಣೆಗೆ ಕರಿಬೇವು ಸಹಕಾರಿ. ಟಿಬಿ, ಜಾಂಡೀಸ್ ಹಾಗೂ ಸರ್ಜರಿ ನಂತರ ದೇಹದ ಆರೋಗ್ಯ ಸಮತೋಲನ ಕಾಪಾಡಲು ಕರಿಬೇವು ಸೇವನೆ ಒಳ್ಳೆಯದು.
ಉಪಯೋಗಗಳು:
* 1-2 ಟೀ ಚಮಚದಷ್ಟು ಎಲೆಯ ರಸವನ್ನು, 1 ಟೀ ಚಮಚ ನಿಂಬೆರಸವನ್ನು ಮತ್ತು ಸಕ್ಕರೆಯನ್ನು ಬೆರೆಸಿ ಸೇವಿಸುವುದರಿಂದ ಅಜೀರ್ಣ, ಅತಿಯಾಗಿ ಜಿಡ್ಡು ಪದಾರ್ಥ ಸೇವನೆಯಿಂದುಂಟಾದ ತೊಂದರೆಗಳನ್ನು ನಿವಾರಿಸಬಹುದು.
* ಭೇದಿ, ಆಮಶಂಕೆ ನಿವಾರಣೆಗೆ ಎಳೆಯದಾದ ಎಲೆಗಳನ್ನು ಜೇನಿನೊಂದಿಗೆ ನೀಡಬಹುದು. ಅಥವಾ ಚೆನ್ನಾಗಿ ಅರೆದ ಮಜ್ಜಿಗೆಯೊಂದಿಗೆ ಸ್ವಲ್ಪ ಶುಂಠಿ ಬೆರೆಸಿ ನೀಡಿದರೆ ಉಪಯುಕ್ತ.
* ಬೊಜ್ಜು ಕರಗಿಸಲು ಪ್ರತಿ ಮುಂಜಾನೆ 8-10 ತಾಜಾ ಎಲೆಗಳನ್ನು ಅಗಿದು ಸೇವಿಸಿದರೆ ಒಳ್ಳೆಯದು.ಇದರಿಂದ ಮಧುಮೇಹ ರೋಗವನ್ನು ತಡೆಗಟ್ಟಬಹುದು.
* ಕುರು, ಗಾಯವಾದಾಗ ಕರಿಬೇವಿನ ಎಲೆಗಳನ್ನು ಅರೆದು ಸ್ವಲ್ಪ ಅರಿಶಿನದೊಂದಿಗೆ ಬೆರೆಸಿ ಅರೆದು ಹಚ್ಚಬಹುದು.
* ಕಾಮಾಲೆ ರೋಗವಿದ್ದಾಗ 10-12 ಎಲೆಗಳನ್ನು ನೀರಿನಲ್ಲಿ ಚೆನ್ನಾಗಿ ತೊಳೆದು, ಅರೆದುಕೊಂಡು ಸುಮಾರು 60-100ಮಿ.ಲೀ ಎಳನೀರಿನೊಂದಿಗೆ ನೀಡಬಹುದು.
* ಸೊಳ್ಳೆ, ಇರುವೆ, ನೊಣ ಮುಂತಾದ ಕೀಟಗಳ ತೊಂದರೆ ತಪ್ಪಿಸಲು ಕರಿಬೇವಿನ ಸುವಾಸನೆ ಸಾಕು.
* ಕರಿಬೇವಿನ ಎಲೆಯಲ್ಲಿ ಕಬ್ಬಿಣದ ಅಂಶ ಹೇರಳವಾಗಿರುವ ಕಾರಣ, ಹಸಿ ಎಲೆಯನ್ನು ಅಗಿದು ತಿಂದರೆ ಒಳ್ಳೆಯದು.
ಆಯುರ್ವೇದ ಔಷಧಗಳಲ್ಲಿ ಕರಿಬೇವಿಗೆ ವಿಶೇಷ ಸ್ಥಾನವುಂಟು. ಕರಿಬೇವಿನ ಸೊಪ್ಪಿನ ಉಪಯೋಗಗಳು ಇನ್ನೂ ಅನೇಕ ಇದ್ದೇ ಇದೆ. ಓದುಗರು ತಮಗೆ ತಿಳಿದ ಸಲಹೆಗಳು ನಮಗೆ ತಿಳಿಸಬಹುದು.



Click it and Unblock the Notifications