Latest Updates
-
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು!
ಗೃಹಸಚಿವರಿಗೆ ಕೆಲ ಕಿಚನ್ ಟಿಪ್ಸ್

* ನಿವೇದಿತಾ ಪ್ರಭಾಕರ್, ಬೆಂಗಳೂರು
* ಥರ್ಮಾಸ್ ಫ್ಲಾಸ್ಕ್ ಗಬ್ಬು ವಾಸನೆ ಹೊಡೆಯುತ್ತಿದ್ದರೆ ಬಿಸಿನೀರಲ್ಲಿ ತುಸು ತಿನ್ನುವ ಸೋಡಾ ಹಾಕಿ ಕೆಲಕಾಲ ಬಿಟ್ಟು ತೊಳೆಯಿರಿ. ಗಬ್ಬು ವಾಸನೆ ಮಂಗಮಾಯ.
* ಮಗು ಶಾಲೆಗೊಯ್ಯುವ ನೀರಿನ ಬಾಟಲಿ ದುರ್ವಾಸನೆ ಸೂಸುತ್ತಿದ್ದರೆ ಸ್ವಲ್ಪೇ ಸ್ವಲ್ಪ ಟೂತ್ ಪೇಸ್ಟ್ ಬಳಸಿ ಗಲಗಲ ಮಾಡಿ ತೊಳೆಯಿರಿ.
* ಹೆಚ್ಚಿಟ್ಟ ಸೇಬು ಫ್ರಿಜ್ಜಲ್ಲಿಟ್ಟರೂ ಕಂದು ಬಣ್ಣಕ್ಕೆ ತಿರುಗಬಾರದಿರಲು ಸೇಬಿಗೆ ನಿಂಬೆರಸ ಅಥವಾ ಉಪ್ಪು ಅಥವಾ ಸಕ್ಕರೆ ಬಳಿಯಿರಿ. ದಿನಕಳೆದರೂ ಬಣ್ಣ ಹಂಗೇ ಇರುತ್ತದೆ.
* ಅಡುಗೆ ಹೊತ್ತಿ ಕರಕಲಾಗಿದ್ದರೆ ಒಂದೆರಡು ಎಸಳು ಈರುಳ್ಳಿ ಮತ್ತು ಬಿಸಿನೀರು ಹಾಕಿ ಐದು ನಿಮಿಷ ಬಿಟ್ಟು ತೊಳೆಯಿರಿ. ಅಥವಾ ಬಿಸಿನೀರಲ್ಲಿ ಅಕ್ಕಿಹಿಟ್ಟು ಮಿಕ್ಸ್ ಮಾಡಿ ಹೊತ್ತಿದ ಪಾತ್ರೆಯಲ್ಲಿ ಸುರಿದು ಐದಾರು ನಿಮಿಷ ಬಿಟ್ಟು ತೊಳೆಯಿರಿ. ಪಾತ್ರೆ ಲಕಲಕ.
* ಜಿರಳೆಗಳು ಅಡುಗೆಮನೆಯಲ್ಲಿ ತರಲೆ ಮಾಡುತ್ತಿದ್ದರೆ ಹಿಟ್ ಸ್ಪ್ರೇ ಬಳಸುವ ಬದಲು ಬೋರಿಕ್ ಪೌಡರ್ ಅಲ್ಲಲ್ಲಿ ಉದುರಿಸಿ. ಮರುದಿನ ಜಿರಳೆಗಳು ಪಲಾಯನಗೈದಿರುತ್ತವೆ.
* ಬೆಳ್ಳುಳ್ಳಿ ಸಿಪ್ಪೆಸುಲಿಯಲು ತಡಕಾಡುತ್ತಿದ್ದರೆ ತುಸು ಬಿಸಿಮಾಡಿ ಸಿಪ್ಪೆ ಸುಲಿಯಿರಿ, ಸಿಪ್ಪೆ ಸಲೀಸಾಗಿ ಬರುತ್ತದೆ.
* ಗೋಬಿ ಮಂಚೂರಿ ಮಾಡುವ ಮುನ್ನ ಹೂಕೋಸನ್ನು ಉಪ್ಪಿ ನೀರಲ್ಲಿ ಮುಳುಗಿಸಿ ಅಥವಾ ನೀರಲ್ಲಿ ಅರಿಷಿಣ ಹಾಕಿ ಕೆಲಹೊತ್ತು ಬಿಟ್ಟು ತೆಗೆಯಿರಿ. ಹುಳುಗಳು ಸತ್ತಿರುತ್ತವೆ.
* ಯಾವುದೇ ಅಡುಗೆಗಾಗಿ ಟೊಮೇಟೊ ಸಿಪ್ಪೆ ಸುಲಿಯಬೇಕಿದ್ದರೆ ತುಸುಹೊತ್ತು ಬಿಸಿನೀರಲ್ಲಿ ಅವನ್ನು ಮುಳುಗಿಸಿಡಿ. ನಂತರ ಸಲಭವಾಗಿ ಸಿಪ್ಪೆ ಸುಲಿಯಬಹುದು.
* ತರಕಾರಿಯನ್ನು ಒಗ್ಗರಣೆಯಲ್ಲಿ ತಾಳಿಸುವಾಗ ತರಕಾರಿ ಎಣ್ಣೆಯಲ್ಲಿ ಹಾಕುವ ಮೊದಲೇ ಅರಿಷಿಣ ಹಾಕಿದರೆ ತರಕಾರಿಗಳು ನೈಜ ಬಣ್ಣ ಕಳೆದುಕೊಳ್ಳುವುದಿಲ್ಲ.
* ನಿಂಬೆಹಣ್ಣುಗಳು ಫ್ರಿಜ್ಜಲ್ಲಿಟ್ಟರೂ ತಾಜಾ ಆಗಿರಬೇಕೆಂದಿದ್ದರೆ ಒಂದು ಪಾತ್ರೆಯಲ್ಲಿ ನೀರುಹಾಕಿ ಅದರಲ್ಲಿಡಿ. ಬಹಳ ದಿನಗಳವರೆಗೆ ತಾಜಾ ಆಗಿರುತ್ತವೆ.
ಸೂಚನೆ : ಓದುಗರೆ, ಇಂಥ ಕಿಚನ್ ಟಿಪ್ಸ್ ನಿಮಗೆ ಗೊತ್ತಿದ್ದರೆ ಒಂದು ಕಡತದಲ್ಲಿ ಟೈಪಿಸಿ ಕಳಿಸಿರಿ. ಉಳಿದ ಅಡುಗೆಮನೆ ಸಾರಥಿಗಳಿಗೆ ಸಹಾಯವಾಗಲಿ.



Click it and Unblock the Notifications