Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಅಡುಗೆ ಹದಗೆಡದಿರಲು ಉಪಯುಕ್ತ ಸಲಹೆಗಳು

* ಭಾರತಿ ಎಚ್.ಎಸ್., ಬೆಂಗಳೂರು
1. ಇಡ್ಲಿ ಮೆತ್ತಗೆ ಹೂವಿನ ಹಾಗೆ ಆಗಲು;
* ಅಕ್ಕಿ ನೆನೆ ಹಾಕುವಾಗ ತಣ್ಣೀರಿನ ಬದಲಿಗೆ ಬಿಸಿನೀರನ್ನು ಹಾಕಿ.
* ಅಕ್ಕಿ ನೆನೆ ಹಾಕುವಾಗ ಎರಡು ಹಿಡಿ ಅವಲ್ಲಕ್ಕಿಯನ್ನು ಹಾಕಿ.
* ಇಡ್ಲಿ ಅಕ್ಕಿಯನ್ನೇ ಉಪಯೋಗಿಸಿದರೆ ಮೃದುವಾಗಿ ಬರುವುದು.
2. ದೋಸೆ ಗರಿ ಗರಿಯಾಗಿ ಬರಲು;
* ದೋಸೆ ಅಕ್ಕಿಯನ್ನೇ ತಂದು ನೆನೆಹಾಕಿ ಮಾಡಿದರೆ ದೋಸೆ ಚೆನ್ನಾಗಿ ಬರುವುದು.
* ಅಕ್ಕಿ, ಉದ್ದಿನ ಬೇಳೆ ನಾನೆ ಹಾಕುವಾಗ ಅದರ ಜೊತೆ 1 ಹಿಡಿ ಅವಲಕ್ಕಿ ಹಾಕಿದರೆ ಕಾವಲಿಯಿಂದ ಸುಲಭವಾಗಿ ಮೇಲೆ ಏಳುತ್ತದೆ.
* ಅಕ್ಕಿಯ ಜೊತೆ 2 ಚಮಚ ಮೆಂತ್ಯೆ ನೆನೆ ಹಾಕಿದರೆ ಚೆನ್ನಾಗಿ ಉದುಗು ಬರುವುದಲ್ಲದೆ ಒಳ್ಳೆಯ ವಾಸನೆ ಇರುತ್ತದೆ.
* ಅಕ್ಕಿಯ ಜೊತೆ 2 ಚಮಚ ಕಡಲೆ ಬೇಳೆ ಹಾಕ್ಕಿದಲ್ಲಿ ದೋಸೆಗೆ ಒಳ್ಳೆಯ ಹೊಂಬಣ್ಣ ಬರುವುದು.
* ರುಬ್ಬಿದ ಹಿಟ್ಟಿಗೆ 1 ಚಮಚ ಸಕ್ಕರೆ ಹಾಕಿದರೆ ಒಳ್ಳೆಯ ಬಣ್ಣ ಬರುತ್ತದೆ.
* ಕಾವಲಿಗೆ 1 ಚಮಚ ಎಣ್ಣೆ ಹಾಕಿ ಸ್ವಲ್ಪ ಉಪ್ಪು, ಸಾಸಿವೆ ಹಾಕಿ ಸಿಡಿಸಿ ಚೆನ್ನಾಗಿ ಒರೆಸಿ ದೋಸೆ ಹಾಕಿದಾಗ, ಕಚ್ಚದೆ ದೋಸೆ ಚೆನ್ನಾಗಿ ಬರುವುದು.
* ಮಿಕ್ಕಿದ ದೋಸೆ ಹಿಟ್ಟಿಗೆ ಈರುಳ್ಳಿ, ಕೊತ್ತಂಬರಿ ಸೊಪ್ಪು, ಹಸಿ ಮೆಣಸು, ಕಾಯಿತುರಿ ಎಲ್ಲ ಹಾಕಿ ಪಡ್ಡು ಕಾವಲಿಗೆ ಹಾಕಿದರೆ ಪಡ್ಡು ಅಥವಾ ಗುಂಡುಪಂಗಳ ರೆಡಿ.
3 ಚಪಾತಿ ಮೃದುವಾಗಿ ಬರಲು;
* ಚಪಾತಿ ಕಲೆಸುವಾಗ 3 ಬಟ್ಟಲು ಅಳತೆಗೆ ಸರಿಯಾಗಿ 1 ಬಟ್ಟಲು ನೀರನ್ನು ಹಾಕಿ ಕಲೆಸಬೇಕು.
* 2 ಚಮಚ ಎಣ್ಣೆ ಹಾಕಿ ಕಲೆಸಿ ಚೆನ್ನಾಗಿ ನಾದಿದಲ್ಲಿ ಮೃದುವಾಗುವುದು.
4. ಪಲಾವ್ ಅಥವಾ ಬಾತ್ ಗಳನ್ನು ಮಾಡುವಾಗ ನಿಂಬೆ ರಸ ಹಿಂಡಿದರೆ ಉದುರಾಗುತ್ತದೆ.
5. ಕರಿಬೇವು ಸೊಪ್ಪನ್ನು ಚೆನ್ನಾಗಿ ಹುರಿದು ಮಿಕ್ಸಿಯಲ್ಲಿ ಪುಡಿಮಾಡಿ ಇಟ್ಟುಕೊಂಡ್ಡಿದ್ದರೆ ಅಡುಗೆಗಳಿಗೆ ಬೇಕಾದಾಗ ಉಪಯೋಗಿಸಬಹುದು.
6. ಮೊಟ್ಟೆಯನ್ನು ಬೇಯಿಸುವಾಗ ಉಪ್ಪನ್ನು ಹಾಕಿದಲ್ಲಿ ಹೊರಬಾಗ ಒಡೆಯದೆ ಸಿಪ್ಪೆ ಸಲಿಸಾಗಿ ಬರುವುದು.
7. ಹುರುಳಿಕಾಯಿ, ಗೋರಿಕಾಯಿ ಪಲ್ಯಗಳನ್ನು ಬೇಯಿಸುವಾಗ 1/2 ಚಮಚ ಸಕ್ಕರೆ ಹಾಕಿದರೆ ರುಚಿ ಬರುವುದಲ್ಲದೆ, ಬೆಂದ ಮೇಲೆ ತರಕಾರಿಯ ಹಸಿರು ಬಣ್ಣ ಹಾಗೆ ಇರುವುದು.
8. ಏಲ್ಲಕ್ಕಿ ಡಬ್ಬಿಯಲ್ಲಿ ಮೆಣಸು ಕಾಳು ಹಾಕಿಟ್ಟರೆ ವಾಸನೆ ಹಾಗೆ ಇದ್ದು ಬೇಗ ಕೆಡುವುದಿಲ್ಲ.
9. ಸಾರಿಗೆ ಬೇಳೆ ಬೇಯಲು ಇಡುವಾಗ ಅರಿಸಿನ, 1/2 ಚಮಚ ಎಣ್ಣೆ ಹಾಕಿದರೆ ಬೇಗ ಬೆಂದು ಕಟ್ಟು ಚೆನ್ನಾಗಿ ಬಿಡುವುದು.
10. ಬಜ್ಜಿ, ಬೋಂಡ, ವಡೆಗಳನ್ನು ಮಾಡುವಾಗ 4 ಸ್ಪೂನ್ ಅಕ್ಕಿ ಹಿಟ್ಟನ್ನು ಹಾಕಿಕೊಂಡರೆ ಗರಿ ಗರಿಯಾಗಿ ಚೆನ್ನಾಗಿ ಬರುವುದು.



Click it and Unblock the Notifications