Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಅಡುಗೆ ಹದಗೆಡದಿರಲು ಉಪಯುಕ್ತ ಸಲಹೆಗಳು

* ಭಾರತಿ ಎಚ್.ಎಸ್., ಬೆಂಗಳೂರು
1. ಇಡ್ಲಿ ಮೆತ್ತಗೆ ಹೂವಿನ ಹಾಗೆ ಆಗಲು;
* ಅಕ್ಕಿ ನೆನೆ ಹಾಕುವಾಗ ತಣ್ಣೀರಿನ ಬದಲಿಗೆ ಬಿಸಿನೀರನ್ನು ಹಾಕಿ.
* ಅಕ್ಕಿ ನೆನೆ ಹಾಕುವಾಗ ಎರಡು ಹಿಡಿ ಅವಲ್ಲಕ್ಕಿಯನ್ನು ಹಾಕಿ.
* ಇಡ್ಲಿ ಅಕ್ಕಿಯನ್ನೇ ಉಪಯೋಗಿಸಿದರೆ ಮೃದುವಾಗಿ ಬರುವುದು.
2. ದೋಸೆ ಗರಿ ಗರಿಯಾಗಿ ಬರಲು;
* ದೋಸೆ ಅಕ್ಕಿಯನ್ನೇ ತಂದು ನೆನೆಹಾಕಿ ಮಾಡಿದರೆ ದೋಸೆ ಚೆನ್ನಾಗಿ ಬರುವುದು.
* ಅಕ್ಕಿ, ಉದ್ದಿನ ಬೇಳೆ ನಾನೆ ಹಾಕುವಾಗ ಅದರ ಜೊತೆ 1 ಹಿಡಿ ಅವಲಕ್ಕಿ ಹಾಕಿದರೆ ಕಾವಲಿಯಿಂದ ಸುಲಭವಾಗಿ ಮೇಲೆ ಏಳುತ್ತದೆ.
* ಅಕ್ಕಿಯ ಜೊತೆ 2 ಚಮಚ ಮೆಂತ್ಯೆ ನೆನೆ ಹಾಕಿದರೆ ಚೆನ್ನಾಗಿ ಉದುಗು ಬರುವುದಲ್ಲದೆ ಒಳ್ಳೆಯ ವಾಸನೆ ಇರುತ್ತದೆ.
* ಅಕ್ಕಿಯ ಜೊತೆ 2 ಚಮಚ ಕಡಲೆ ಬೇಳೆ ಹಾಕ್ಕಿದಲ್ಲಿ ದೋಸೆಗೆ ಒಳ್ಳೆಯ ಹೊಂಬಣ್ಣ ಬರುವುದು.
* ರುಬ್ಬಿದ ಹಿಟ್ಟಿಗೆ 1 ಚಮಚ ಸಕ್ಕರೆ ಹಾಕಿದರೆ ಒಳ್ಳೆಯ ಬಣ್ಣ ಬರುತ್ತದೆ.
* ಕಾವಲಿಗೆ 1 ಚಮಚ ಎಣ್ಣೆ ಹಾಕಿ ಸ್ವಲ್ಪ ಉಪ್ಪು, ಸಾಸಿವೆ ಹಾಕಿ ಸಿಡಿಸಿ ಚೆನ್ನಾಗಿ ಒರೆಸಿ ದೋಸೆ ಹಾಕಿದಾಗ, ಕಚ್ಚದೆ ದೋಸೆ ಚೆನ್ನಾಗಿ ಬರುವುದು.
* ಮಿಕ್ಕಿದ ದೋಸೆ ಹಿಟ್ಟಿಗೆ ಈರುಳ್ಳಿ, ಕೊತ್ತಂಬರಿ ಸೊಪ್ಪು, ಹಸಿ ಮೆಣಸು, ಕಾಯಿತುರಿ ಎಲ್ಲ ಹಾಕಿ ಪಡ್ಡು ಕಾವಲಿಗೆ ಹಾಕಿದರೆ ಪಡ್ಡು ಅಥವಾ ಗುಂಡುಪಂಗಳ ರೆಡಿ.
3 ಚಪಾತಿ ಮೃದುವಾಗಿ ಬರಲು;
* ಚಪಾತಿ ಕಲೆಸುವಾಗ 3 ಬಟ್ಟಲು ಅಳತೆಗೆ ಸರಿಯಾಗಿ 1 ಬಟ್ಟಲು ನೀರನ್ನು ಹಾಕಿ ಕಲೆಸಬೇಕು.
* 2 ಚಮಚ ಎಣ್ಣೆ ಹಾಕಿ ಕಲೆಸಿ ಚೆನ್ನಾಗಿ ನಾದಿದಲ್ಲಿ ಮೃದುವಾಗುವುದು.
4. ಪಲಾವ್ ಅಥವಾ ಬಾತ್ ಗಳನ್ನು ಮಾಡುವಾಗ ನಿಂಬೆ ರಸ ಹಿಂಡಿದರೆ ಉದುರಾಗುತ್ತದೆ.
5. ಕರಿಬೇವು ಸೊಪ್ಪನ್ನು ಚೆನ್ನಾಗಿ ಹುರಿದು ಮಿಕ್ಸಿಯಲ್ಲಿ ಪುಡಿಮಾಡಿ ಇಟ್ಟುಕೊಂಡ್ಡಿದ್ದರೆ ಅಡುಗೆಗಳಿಗೆ ಬೇಕಾದಾಗ ಉಪಯೋಗಿಸಬಹುದು.
6. ಮೊಟ್ಟೆಯನ್ನು ಬೇಯಿಸುವಾಗ ಉಪ್ಪನ್ನು ಹಾಕಿದಲ್ಲಿ ಹೊರಬಾಗ ಒಡೆಯದೆ ಸಿಪ್ಪೆ ಸಲಿಸಾಗಿ ಬರುವುದು.
7. ಹುರುಳಿಕಾಯಿ, ಗೋರಿಕಾಯಿ ಪಲ್ಯಗಳನ್ನು ಬೇಯಿಸುವಾಗ 1/2 ಚಮಚ ಸಕ್ಕರೆ ಹಾಕಿದರೆ ರುಚಿ ಬರುವುದಲ್ಲದೆ, ಬೆಂದ ಮೇಲೆ ತರಕಾರಿಯ ಹಸಿರು ಬಣ್ಣ ಹಾಗೆ ಇರುವುದು.
8. ಏಲ್ಲಕ್ಕಿ ಡಬ್ಬಿಯಲ್ಲಿ ಮೆಣಸು ಕಾಳು ಹಾಕಿಟ್ಟರೆ ವಾಸನೆ ಹಾಗೆ ಇದ್ದು ಬೇಗ ಕೆಡುವುದಿಲ್ಲ.
9. ಸಾರಿಗೆ ಬೇಳೆ ಬೇಯಲು ಇಡುವಾಗ ಅರಿಸಿನ, 1/2 ಚಮಚ ಎಣ್ಣೆ ಹಾಕಿದರೆ ಬೇಗ ಬೆಂದು ಕಟ್ಟು ಚೆನ್ನಾಗಿ ಬಿಡುವುದು.
10. ಬಜ್ಜಿ, ಬೋಂಡ, ವಡೆಗಳನ್ನು ಮಾಡುವಾಗ 4 ಸ್ಪೂನ್ ಅಕ್ಕಿ ಹಿಟ್ಟನ್ನು ಹಾಕಿಕೊಂಡರೆ ಗರಿ ಗರಿಯಾಗಿ ಚೆನ್ನಾಗಿ ಬರುವುದು.



Click it and Unblock the Notifications