Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ಅಡುಗೆ ಹದಗೆಡದಿರಲು ಉಪಯುಕ್ತ ಸಲಹೆಗಳು

* ಭಾರತಿ ಎಚ್.ಎಸ್., ಬೆಂಗಳೂರು
1. ಇಡ್ಲಿ ಮೆತ್ತಗೆ ಹೂವಿನ ಹಾಗೆ ಆಗಲು;
* ಅಕ್ಕಿ ನೆನೆ ಹಾಕುವಾಗ ತಣ್ಣೀರಿನ ಬದಲಿಗೆ ಬಿಸಿನೀರನ್ನು ಹಾಕಿ.
* ಅಕ್ಕಿ ನೆನೆ ಹಾಕುವಾಗ ಎರಡು ಹಿಡಿ ಅವಲ್ಲಕ್ಕಿಯನ್ನು ಹಾಕಿ.
* ಇಡ್ಲಿ ಅಕ್ಕಿಯನ್ನೇ ಉಪಯೋಗಿಸಿದರೆ ಮೃದುವಾಗಿ ಬರುವುದು.
2. ದೋಸೆ ಗರಿ ಗರಿಯಾಗಿ ಬರಲು;
* ದೋಸೆ ಅಕ್ಕಿಯನ್ನೇ ತಂದು ನೆನೆಹಾಕಿ ಮಾಡಿದರೆ ದೋಸೆ ಚೆನ್ನಾಗಿ ಬರುವುದು.
* ಅಕ್ಕಿ, ಉದ್ದಿನ ಬೇಳೆ ನಾನೆ ಹಾಕುವಾಗ ಅದರ ಜೊತೆ 1 ಹಿಡಿ ಅವಲಕ್ಕಿ ಹಾಕಿದರೆ ಕಾವಲಿಯಿಂದ ಸುಲಭವಾಗಿ ಮೇಲೆ ಏಳುತ್ತದೆ.
* ಅಕ್ಕಿಯ ಜೊತೆ 2 ಚಮಚ ಮೆಂತ್ಯೆ ನೆನೆ ಹಾಕಿದರೆ ಚೆನ್ನಾಗಿ ಉದುಗು ಬರುವುದಲ್ಲದೆ ಒಳ್ಳೆಯ ವಾಸನೆ ಇರುತ್ತದೆ.
* ಅಕ್ಕಿಯ ಜೊತೆ 2 ಚಮಚ ಕಡಲೆ ಬೇಳೆ ಹಾಕ್ಕಿದಲ್ಲಿ ದೋಸೆಗೆ ಒಳ್ಳೆಯ ಹೊಂಬಣ್ಣ ಬರುವುದು.
* ರುಬ್ಬಿದ ಹಿಟ್ಟಿಗೆ 1 ಚಮಚ ಸಕ್ಕರೆ ಹಾಕಿದರೆ ಒಳ್ಳೆಯ ಬಣ್ಣ ಬರುತ್ತದೆ.
* ಕಾವಲಿಗೆ 1 ಚಮಚ ಎಣ್ಣೆ ಹಾಕಿ ಸ್ವಲ್ಪ ಉಪ್ಪು, ಸಾಸಿವೆ ಹಾಕಿ ಸಿಡಿಸಿ ಚೆನ್ನಾಗಿ ಒರೆಸಿ ದೋಸೆ ಹಾಕಿದಾಗ, ಕಚ್ಚದೆ ದೋಸೆ ಚೆನ್ನಾಗಿ ಬರುವುದು.
* ಮಿಕ್ಕಿದ ದೋಸೆ ಹಿಟ್ಟಿಗೆ ಈರುಳ್ಳಿ, ಕೊತ್ತಂಬರಿ ಸೊಪ್ಪು, ಹಸಿ ಮೆಣಸು, ಕಾಯಿತುರಿ ಎಲ್ಲ ಹಾಕಿ ಪಡ್ಡು ಕಾವಲಿಗೆ ಹಾಕಿದರೆ ಪಡ್ಡು ಅಥವಾ ಗುಂಡುಪಂಗಳ ರೆಡಿ.
3 ಚಪಾತಿ ಮೃದುವಾಗಿ ಬರಲು;
* ಚಪಾತಿ ಕಲೆಸುವಾಗ 3 ಬಟ್ಟಲು ಅಳತೆಗೆ ಸರಿಯಾಗಿ 1 ಬಟ್ಟಲು ನೀರನ್ನು ಹಾಕಿ ಕಲೆಸಬೇಕು.
* 2 ಚಮಚ ಎಣ್ಣೆ ಹಾಕಿ ಕಲೆಸಿ ಚೆನ್ನಾಗಿ ನಾದಿದಲ್ಲಿ ಮೃದುವಾಗುವುದು.
4. ಪಲಾವ್ ಅಥವಾ ಬಾತ್ ಗಳನ್ನು ಮಾಡುವಾಗ ನಿಂಬೆ ರಸ ಹಿಂಡಿದರೆ ಉದುರಾಗುತ್ತದೆ.
5. ಕರಿಬೇವು ಸೊಪ್ಪನ್ನು ಚೆನ್ನಾಗಿ ಹುರಿದು ಮಿಕ್ಸಿಯಲ್ಲಿ ಪುಡಿಮಾಡಿ ಇಟ್ಟುಕೊಂಡ್ಡಿದ್ದರೆ ಅಡುಗೆಗಳಿಗೆ ಬೇಕಾದಾಗ ಉಪಯೋಗಿಸಬಹುದು.
6. ಮೊಟ್ಟೆಯನ್ನು ಬೇಯಿಸುವಾಗ ಉಪ್ಪನ್ನು ಹಾಕಿದಲ್ಲಿ ಹೊರಬಾಗ ಒಡೆಯದೆ ಸಿಪ್ಪೆ ಸಲಿಸಾಗಿ ಬರುವುದು.
7. ಹುರುಳಿಕಾಯಿ, ಗೋರಿಕಾಯಿ ಪಲ್ಯಗಳನ್ನು ಬೇಯಿಸುವಾಗ 1/2 ಚಮಚ ಸಕ್ಕರೆ ಹಾಕಿದರೆ ರುಚಿ ಬರುವುದಲ್ಲದೆ, ಬೆಂದ ಮೇಲೆ ತರಕಾರಿಯ ಹಸಿರು ಬಣ್ಣ ಹಾಗೆ ಇರುವುದು.
8. ಏಲ್ಲಕ್ಕಿ ಡಬ್ಬಿಯಲ್ಲಿ ಮೆಣಸು ಕಾಳು ಹಾಕಿಟ್ಟರೆ ವಾಸನೆ ಹಾಗೆ ಇದ್ದು ಬೇಗ ಕೆಡುವುದಿಲ್ಲ.
9. ಸಾರಿಗೆ ಬೇಳೆ ಬೇಯಲು ಇಡುವಾಗ ಅರಿಸಿನ, 1/2 ಚಮಚ ಎಣ್ಣೆ ಹಾಕಿದರೆ ಬೇಗ ಬೆಂದು ಕಟ್ಟು ಚೆನ್ನಾಗಿ ಬಿಡುವುದು.
10. ಬಜ್ಜಿ, ಬೋಂಡ, ವಡೆಗಳನ್ನು ಮಾಡುವಾಗ 4 ಸ್ಪೂನ್ ಅಕ್ಕಿ ಹಿಟ್ಟನ್ನು ಹಾಕಿಕೊಂಡರೆ ಗರಿ ಗರಿಯಾಗಿ ಚೆನ್ನಾಗಿ ಬರುವುದು.



Click it and Unblock the Notifications