Latest Updates
-
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ -
ಬಿಸಿಲ ಬೇಗೆಯಿಂದ ಪಾರಾಗಲು ಮನೆಯನ್ನು ತಂಪಾಗಿರಿಸುವ ಅದ್ಭುತ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಪಾನೀಯಗಳೇ ಮದ್ದು! -
ಬಿಸಿಲ ಬೇಗೆಯಿಂದ ಪಾರಾಗಲು ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ
ತರಕಾರಿ ಬಳಸುವ ತರಹೇವಾರಿ ಉಪಾಯಗಳು

* ಸೀಮೆ ಬದನೆಕಾಯಿಯನ್ನು ಎರಡು ಭಾಗವಾಗಿ ಹೆಚ್ಚಿ, ಒಂದಕ್ಕೊಂದು ಉಜ್ಜಿ, ನೀರಿಗೆ ಹಾಕಿ ತೆಗೆದು ಉಪಯೋಗಿಸಿ. ಇದರಿಂದ ನಿಮ್ಮ ಕೈ ಅಂಟಾಗುವುದನ್ನು ತಡೆಯಬಹುದು.
* ಬೆಣ್ಣೆ ಕಾಯಿಸಿ ಇಳಿಸುವ ಮುನ್ನ ತೊಟ್ಟು ತೆಗೆದ ಒಂದೆರಡು ವೀಳ್ಯದೆಲೆಯನ್ನು ಅದರಲ್ಲಿ ಹಾಕಿ ತೆಗೆದರೆ ತುಪ್ಪ ಸುವಾಸನೆಯುಕ್ತವಾಗುವುದು.
* ದೊಣ್ಣೆ ಮೆಣಸಿನಕಾಯಿಯನ್ನು ಮಧ್ಯದಲ್ಲಿ ಕತ್ತರಿಸಿ, ಒಳಭಾಗವನ್ನು ಚಾಕುವಿನಿಂದ ಹೆರೆದು ಕೊಡವಿದರೆ ಬೀಜಗಳೆಲ್ಲ ಉದುರುತ್ತವೆ. ತಿನ್ನುವಾಗ ಹಲ್ಲಿನ ಮಧ್ಯೆ ಬೀಜ ಸಿಕ್ಕಿಕೊಂಡು ತೊಂದರೆಯಾಗದು.
* ಬದನೆಕಾಯಿ ಹೆಚ್ಚಿ ಕೂಡಲೇ ಉಪ್ಪು ನೀರಿಗೆ ಹಾಕಿದರೆ ಹೋಳುಗಳು ಕಪ್ಪಾಗುವುದಿಲ್ಲ.
* ಈರುಳ್ಳಿ ತುದಿಗಳನ್ನು ಕತ್ತರಿಸಿ, ಎರಡು ಭಾಗ ಮಾಡಿ ಒಂದು ಗಂಟೆ ನೀರಿನಲ್ಲಿ ಹಾಕಿಟ್ಟರೆ ಸಿಪ್ಪೆ ಸುಲಿಯುವುದು ಸುಲಭ. ಕಣ್ಣೂ ಉರಿಯುವುದಿಲ್ಲ.
* ಅನ್ನ ಮಾಡುವಾಗ ಅದಕ್ಕೆ ಒಂದು ಚಮಚ ಎಣ್ಣೆ ಅಥವಾ ಸ್ವಲ್ಪ ನಿಂಬೆರಸ ಹಾಕಿದರೆ, ಅನ್ನ ಉದುರುದುರಾಗುತ್ತದೆ.
* ಒಗ್ಗರಣೆ ಹಾಕುವ ಮೊದಲು ಕಡಲೆಕಾಯಿ ಬೀಜವನ್ನು ಮೊದಲು ಹುರಿದು ತೆಗೆದಿಡಿ. ನಂತರ ಸಾಸಿವೆ, ಕರಿಬೇವು ಇತ್ಯಾದಿಗಳನ್ನು ಹುರಿದು ಕಡಲೆಕಾಯಿ ಬೀಜ ಸೇರಿಸಿದರೆ ಹಸಿ ವಾಸನೆ ಇಲ್ಲದೆ ರುಚಿಯಾಗಿರುವುದು.
* ಹಾಗಲಕಾಯಿಯನ್ನು ಚಿಕ್ಕದಾಗಿ ಹೆಚ್ಚಿ ಅರಿಷಿಣ, ಉಪ್ಪು ಬೆರೆಸಿದ ನೀರಿನಲ್ಲಿ ಹಾಕಿ. ಸ್ವಲ್ಪ ಹೊತ್ತಿನ ನಂತರ ನೀರನ್ನು ಹಿಂಡಿ ತೆಗೆದರೆ ಕಹಿ ಅಂಶ ಇರುವುದಿಲ್ಲ.
* ಚಟ್ನಿ, ಗೊಜ್ಜಿಗೆ ಬಳಸುವ ಹುಣಸೆ ಹಣ್ಣನ್ನು ಮೊದಲು ಸ್ವಲ್ಪ ಹೊತ್ತು ನೀರಿನಲ್ಲಿ ನೆನೆಸಿಡಿ. ರುಬ್ಬಲು ಸುಲಭವಾಗುವುದು.
* ಕರಿಬೇವನ್ನು ಬೇಳೆಯ ಜತೆಯಲ್ಲೇ ಬೇಯಲು ಇಟ್ಟರೆ ಅದರ ಸಾರವೆಲ್ಲ ಸಾರಿಗೆ ಸೇರಿಕೊಳ್ಳುವುದಲ್ಲದೆ ಸುವಾಸನೆಯೂ ಹೆಚ್ಚುವುದು.



Click it and Unblock the Notifications











