Just In
Don't Miss
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತರಕಾರಿ ಬಳಸುವ ತರಹೇವಾರಿ ಉಪಾಯಗಳು
* ಸೀಮೆ ಬದನೆಕಾಯಿಯನ್ನು ಎರಡು ಭಾಗವಾಗಿ ಹೆಚ್ಚಿ, ಒಂದಕ್ಕೊಂದು ಉಜ್ಜಿ, ನೀರಿಗೆ ಹಾಕಿ ತೆಗೆದು ಉಪಯೋಗಿಸಿ. ಇದರಿಂದ ನಿಮ್ಮ ಕೈ ಅಂಟಾಗುವುದನ್ನು ತಡೆಯಬಹುದು.
* ಬೆಣ್ಣೆ ಕಾಯಿಸಿ ಇಳಿಸುವ ಮುನ್ನ ತೊಟ್ಟು ತೆಗೆದ ಒಂದೆರಡು ವೀಳ್ಯದೆಲೆಯನ್ನು ಅದರಲ್ಲಿ ಹಾಕಿ ತೆಗೆದರೆ ತುಪ್ಪ ಸುವಾಸನೆಯುಕ್ತವಾಗುವುದು.
* ದೊಣ್ಣೆ ಮೆಣಸಿನಕಾಯಿಯನ್ನು ಮಧ್ಯದಲ್ಲಿ ಕತ್ತರಿಸಿ, ಒಳಭಾಗವನ್ನು ಚಾಕುವಿನಿಂದ ಹೆರೆದು ಕೊಡವಿದರೆ ಬೀಜಗಳೆಲ್ಲ ಉದುರುತ್ತವೆ. ತಿನ್ನುವಾಗ ಹಲ್ಲಿನ ಮಧ್ಯೆ ಬೀಜ ಸಿಕ್ಕಿಕೊಂಡು ತೊಂದರೆಯಾಗದು.
* ಬದನೆಕಾಯಿ ಹೆಚ್ಚಿ ಕೂಡಲೇ ಉಪ್ಪು ನೀರಿಗೆ ಹಾಕಿದರೆ ಹೋಳುಗಳು ಕಪ್ಪಾಗುವುದಿಲ್ಲ.
* ಈರುಳ್ಳಿ ತುದಿಗಳನ್ನು ಕತ್ತರಿಸಿ, ಎರಡು ಭಾಗ ಮಾಡಿ ಒಂದು ಗಂಟೆ ನೀರಿನಲ್ಲಿ ಹಾಕಿಟ್ಟರೆ ಸಿಪ್ಪೆ ಸುಲಿಯುವುದು ಸುಲಭ. ಕಣ್ಣೂ ಉರಿಯುವುದಿಲ್ಲ.
* ಅನ್ನ ಮಾಡುವಾಗ ಅದಕ್ಕೆ ಒಂದು ಚಮಚ ಎಣ್ಣೆ ಅಥವಾ ಸ್ವಲ್ಪ ನಿಂಬೆರಸ ಹಾಕಿದರೆ, ಅನ್ನ ಉದುರುದುರಾಗುತ್ತದೆ.
* ಒಗ್ಗರಣೆ ಹಾಕುವ ಮೊದಲು ಕಡಲೆಕಾಯಿ ಬೀಜವನ್ನು ಮೊದಲು ಹುರಿದು ತೆಗೆದಿಡಿ. ನಂತರ ಸಾಸಿವೆ, ಕರಿಬೇವು ಇತ್ಯಾದಿಗಳನ್ನು ಹುರಿದು ಕಡಲೆಕಾಯಿ ಬೀಜ ಸೇರಿಸಿದರೆ ಹಸಿ ವಾಸನೆ ಇಲ್ಲದೆ ರುಚಿಯಾಗಿರುವುದು.
* ಹಾಗಲಕಾಯಿಯನ್ನು ಚಿಕ್ಕದಾಗಿ ಹೆಚ್ಚಿ ಅರಿಷಿಣ, ಉಪ್ಪು ಬೆರೆಸಿದ ನೀರಿನಲ್ಲಿ ಹಾಕಿ. ಸ್ವಲ್ಪ ಹೊತ್ತಿನ ನಂತರ ನೀರನ್ನು ಹಿಂಡಿ ತೆಗೆದರೆ ಕಹಿ ಅಂಶ ಇರುವುದಿಲ್ಲ.
* ಚಟ್ನಿ, ಗೊಜ್ಜಿಗೆ ಬಳಸುವ ಹುಣಸೆ ಹಣ್ಣನ್ನು ಮೊದಲು ಸ್ವಲ್ಪ ಹೊತ್ತು ನೀರಿನಲ್ಲಿ ನೆನೆಸಿಡಿ. ರುಬ್ಬಲು ಸುಲಭವಾಗುವುದು.
* ಕರಿಬೇವನ್ನು ಬೇಳೆಯ ಜತೆಯಲ್ಲೇ ಬೇಯಲು ಇಟ್ಟರೆ ಅದರ ಸಾರವೆಲ್ಲ ಸಾರಿಗೆ ಸೇರಿಕೊಳ್ಳುವುದಲ್ಲದೆ ಸುವಾಸನೆಯೂ ಹೆಚ್ಚುವುದು.