Just In
- 30 min ago ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- 39 min ago ಗಂಡು ಎಂದು ಸಾಕಿದ್ದ ನೀರು ಕುದುರೆ 7 ವರ್ಷದ ಬಳಿಕ ಹೆಣ್ಣಾಗಿತ್ತು..! ಝೂನಲ್ಲಿ ಅಚ್ಚರಿ..!
- 2 hrs ago ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- 6 hrs ago ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
Don't Miss
- Movies ಅಟ್ಟ ಏರಿದ ಸ್ಟಾರ್ಸ್, ದಿಕ್ಕು ತಪ್ಪಿಸುವ ನಿರ್ದೇಶಕರು, ನಿರ್ಮಾಪಕರ ಗೋಳು ಕೇಳೋದ್ಯಾರು?
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- News Chardham Yatra Guidelines 2024: ಚಾರ್ಧಾಮ್ ಯಾತ್ರೆಗೆ ಹೋಗುವಾಗ ಈ ವಸ್ತುಗಳನ್ನು ಬ್ಯಾಗ್ ಅಲ್ಲಿ ಇಟ್ಟುಕೊಳ್ಳಿ....
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತರಕಾರಿ ಬಳಸುವ ತರಹೇವಾರಿ ಉಪಾಯಗಳು
* ಸೀಮೆ ಬದನೆಕಾಯಿಯನ್ನು ಎರಡು ಭಾಗವಾಗಿ ಹೆಚ್ಚಿ, ಒಂದಕ್ಕೊಂದು ಉಜ್ಜಿ, ನೀರಿಗೆ ಹಾಕಿ ತೆಗೆದು ಉಪಯೋಗಿಸಿ. ಇದರಿಂದ ನಿಮ್ಮ ಕೈ ಅಂಟಾಗುವುದನ್ನು ತಡೆಯಬಹುದು.
* ಬೆಣ್ಣೆ ಕಾಯಿಸಿ ಇಳಿಸುವ ಮುನ್ನ ತೊಟ್ಟು ತೆಗೆದ ಒಂದೆರಡು ವೀಳ್ಯದೆಲೆಯನ್ನು ಅದರಲ್ಲಿ ಹಾಕಿ ತೆಗೆದರೆ ತುಪ್ಪ ಸುವಾಸನೆಯುಕ್ತವಾಗುವುದು.
* ದೊಣ್ಣೆ ಮೆಣಸಿನಕಾಯಿಯನ್ನು ಮಧ್ಯದಲ್ಲಿ ಕತ್ತರಿಸಿ, ಒಳಭಾಗವನ್ನು ಚಾಕುವಿನಿಂದ ಹೆರೆದು ಕೊಡವಿದರೆ ಬೀಜಗಳೆಲ್ಲ ಉದುರುತ್ತವೆ. ತಿನ್ನುವಾಗ ಹಲ್ಲಿನ ಮಧ್ಯೆ ಬೀಜ ಸಿಕ್ಕಿಕೊಂಡು ತೊಂದರೆಯಾಗದು.
* ಬದನೆಕಾಯಿ ಹೆಚ್ಚಿ ಕೂಡಲೇ ಉಪ್ಪು ನೀರಿಗೆ ಹಾಕಿದರೆ ಹೋಳುಗಳು ಕಪ್ಪಾಗುವುದಿಲ್ಲ.
* ಈರುಳ್ಳಿ ತುದಿಗಳನ್ನು ಕತ್ತರಿಸಿ, ಎರಡು ಭಾಗ ಮಾಡಿ ಒಂದು ಗಂಟೆ ನೀರಿನಲ್ಲಿ ಹಾಕಿಟ್ಟರೆ ಸಿಪ್ಪೆ ಸುಲಿಯುವುದು ಸುಲಭ. ಕಣ್ಣೂ ಉರಿಯುವುದಿಲ್ಲ.
* ಅನ್ನ ಮಾಡುವಾಗ ಅದಕ್ಕೆ ಒಂದು ಚಮಚ ಎಣ್ಣೆ ಅಥವಾ ಸ್ವಲ್ಪ ನಿಂಬೆರಸ ಹಾಕಿದರೆ, ಅನ್ನ ಉದುರುದುರಾಗುತ್ತದೆ.
* ಒಗ್ಗರಣೆ ಹಾಕುವ ಮೊದಲು ಕಡಲೆಕಾಯಿ ಬೀಜವನ್ನು ಮೊದಲು ಹುರಿದು ತೆಗೆದಿಡಿ. ನಂತರ ಸಾಸಿವೆ, ಕರಿಬೇವು ಇತ್ಯಾದಿಗಳನ್ನು ಹುರಿದು ಕಡಲೆಕಾಯಿ ಬೀಜ ಸೇರಿಸಿದರೆ ಹಸಿ ವಾಸನೆ ಇಲ್ಲದೆ ರುಚಿಯಾಗಿರುವುದು.
* ಹಾಗಲಕಾಯಿಯನ್ನು ಚಿಕ್ಕದಾಗಿ ಹೆಚ್ಚಿ ಅರಿಷಿಣ, ಉಪ್ಪು ಬೆರೆಸಿದ ನೀರಿನಲ್ಲಿ ಹಾಕಿ. ಸ್ವಲ್ಪ ಹೊತ್ತಿನ ನಂತರ ನೀರನ್ನು ಹಿಂಡಿ ತೆಗೆದರೆ ಕಹಿ ಅಂಶ ಇರುವುದಿಲ್ಲ.
* ಚಟ್ನಿ, ಗೊಜ್ಜಿಗೆ ಬಳಸುವ ಹುಣಸೆ ಹಣ್ಣನ್ನು ಮೊದಲು ಸ್ವಲ್ಪ ಹೊತ್ತು ನೀರಿನಲ್ಲಿ ನೆನೆಸಿಡಿ. ರುಬ್ಬಲು ಸುಲಭವಾಗುವುದು.
* ಕರಿಬೇವನ್ನು ಬೇಳೆಯ ಜತೆಯಲ್ಲೇ ಬೇಯಲು ಇಟ್ಟರೆ ಅದರ ಸಾರವೆಲ್ಲ ಸಾರಿಗೆ ಸೇರಿಕೊಳ್ಳುವುದಲ್ಲದೆ ಸುವಾಸನೆಯೂ ಹೆಚ್ಚುವುದು.