Latest Updates
-
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ!
ಮಳೆಗಾಲದಲ್ಲಿ ಜೀರ್ಣಶಕ್ತಿ ವರ್ಧಿಸುವ ಆಹಾರ

ವೈರಲ್ ಜ್ವರ, ಮಲೇರಿಯಾ, ಕಾಲರಾ, ಡೆಂಗ್ಯೂ, ಚಿಕೂನ್ ಗುನ್ಯಾದಂಥ ರೋಗಗಳು ರೋಗ ನಿರೋಧಕ ಶಕ್ತಿ ಕಡಿಮೆ ಇರುವವರನ್ನು ಹಣ್ಣುಗಾಯಿ ನೀರುಗಾಯಿ ಮಾಡಿಬಿಡುತ್ತವೆ. ಇದೆಲ್ಲದಕ್ಕೂ ನೀರೇ ಮೂಲ ಕಾರಣ ಎಂಬುದನ್ನು ಗಮನದಲ್ಲಿಡಬೇಕು.
ಮನೆ ಸುತ್ತಮುತ್ತ ಎಲ್ಲೂ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಿದರೆ ಅರ್ಧಕ್ಕರ್ಧ ರೋಗಗಳು ನಮ್ಮ ಮುಂದೆ ಸುಳಿಯುವುದಿಲ್ಲ. ಕುಡಿಯುವ ನೀರಿನ ಬಗ್ಗೆಯೂ ಹೆಚ್ಚಿನ ನಿಗಾ ವಹಿಸಬೇಕು. ಶುದ್ಧ ನೀರು ಎಲ್ಲ ರೋಗಗಳಿಗೂ ರಾಮಬಾಣ. ನಿರ್ಮಲ ನೀರು ದೇಹದಲ್ಲಿನ ವಿಷಕಾರಕಗಳನ್ನು ಹೊರಹಾಕುತ್ತವೆ.
ಬೇಸಿಗೆಯಲ್ಲಿ ಡಿಹೈಡ್ರೈಶನ್ ನಿಂದಾಗಿ ಜೀರ್ಣಕ್ರಿಯೆ ಕುಂಠಿತವಾಗಿರುತ್ತದೆ. ಮಳೆಗಾಲದ ವಾತಾವರಣ ಮತ್ತು ರೋಗಗಳು ಈ ಜೀರ್ಣಶಕ್ತಿಯನ್ನು ಮತ್ತಷ್ಟು ಕುಂಠಿತವಾಗಿಸುತ್ತವೆ. ಆದ್ದರಿಂದ ಜೀರ್ಣಶಕ್ತಿಯನ್ನು ವರ್ಧಿಸುವ ಆಹಾರ, ಪಾನೀಯಗಳತ್ತ ಗಮನ ಹರಿಸೋಣ.
ಆರೋಗ್ಯಕರ ಆಹಾರ
* ಕಾಯ್ದಾರಿನ ನೀರಿನಲ್ಲಿ ಒಂದು ಚಮಚ ಜೇನು ಸೇರಿಸಿ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ.
* ತಣ್ಣಗಿನ ಆಹಾರ ತಿನ್ನುವುದನ್ನು ಕಡಿಮೆಮಾಡಿ.
* ತಿಂಡಿ ತಿನಿಸಿನಲ್ಲಿ ಹಸಿ ಶುಂಠಿ ಹೆಚ್ಚು ಇರಲಿ.
* ಅಕ್ಕಿ, ಗೋಧಿಯಿಂದ ತಯಾರಿಸಿದ ಆಹಾರ ಹೆಚ್ಚಿರಲಿ.
* ತರಕಾರಿ ಸೂಪ್ ಅಥವಾ ಕ್ಯಾರಟ್ ಜ್ಯೂಸ್ ಕುಡಿಯುತ್ತಿರಿ.
* ಹೊರಗಿನ ತಿಂಡಿಯನ್ನು ತಿನ್ನಲೇಬೇಡಿ.
* ಕರಿದ ತಿಂಡಿ ತಿನ್ನಬೇಕೆನ್ನಿಸಿದರೆ ಮನೇಲೇ ತಯಾರಿಸಿ.
* ಪಲ್ಯ ತಯಾರಿಸುವ ಮುನ್ನ ತರಕಾರಿಯನ್ನು ಚೆನ್ನಾಗಿ ತೊಳೆಯಿರಿ.
* ಶುದ್ಧ ನೀರನ್ನು ಚೆನ್ನಾಗಿ ಕುಡಿಯಿರಿ. ಇದು ಡಿಹೈಡ್ರೇಶನ್ ಆಗದಂತೆ ನೋಡಿಕೊಳ್ಳುತ್ತದೆ.
ಮತ್ತಷ್ಟು ಆರೋಗ್ಯ ಸಲಹೆ
* ಯಾರನ್ನೇ ಭೇಟಿಯಾದ ನಂತರ ಸೋಪಿನಲ್ಲಿ ಕೈ ತೊಳೆಯಿರಿ.
* ದೇಹವನ್ನು ಬೆಚ್ಚಗಿಟ್ಟುಕೊಳ್ಳಿ.
* ತಲೆಗೂದಲು ಒದ್ದೆಯಾದಾಗ ಎಸಿ ಕೋಣೆ ಪ್ರವೇಶಿಸಬೇಡಿ.
* ಪಾದ ಒಡೆದಿದ್ದರೆ ನಿಯಮಿತವಾಗಿ ಅರಿಷಿಣ ಮತ್ತು ಬೇವಿನ ಪುಡಿಯ ಪೇಸ್ಟ್ ಹಚ್ಚಿರಿ.
* ಎಲ್ಲಕ್ಕಿಂತ ಹೆಚ್ಚಾಗಿ ಪ್ರತಿದಿನ ವ್ಯಾಯಾಮ ಮಾಡುವುದನ್ನು ಮರೆಯಬೇಡಿ.



Click it and Unblock the Notifications