Latest Updates
-
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ!
ಮಳೆಗಾಲದಲ್ಲಿ ಜೀರ್ಣಶಕ್ತಿ ವರ್ಧಿಸುವ ಆಹಾರ

ವೈರಲ್ ಜ್ವರ, ಮಲೇರಿಯಾ, ಕಾಲರಾ, ಡೆಂಗ್ಯೂ, ಚಿಕೂನ್ ಗುನ್ಯಾದಂಥ ರೋಗಗಳು ರೋಗ ನಿರೋಧಕ ಶಕ್ತಿ ಕಡಿಮೆ ಇರುವವರನ್ನು ಹಣ್ಣುಗಾಯಿ ನೀರುಗಾಯಿ ಮಾಡಿಬಿಡುತ್ತವೆ. ಇದೆಲ್ಲದಕ್ಕೂ ನೀರೇ ಮೂಲ ಕಾರಣ ಎಂಬುದನ್ನು ಗಮನದಲ್ಲಿಡಬೇಕು.
ಮನೆ ಸುತ್ತಮುತ್ತ ಎಲ್ಲೂ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಿದರೆ ಅರ್ಧಕ್ಕರ್ಧ ರೋಗಗಳು ನಮ್ಮ ಮುಂದೆ ಸುಳಿಯುವುದಿಲ್ಲ. ಕುಡಿಯುವ ನೀರಿನ ಬಗ್ಗೆಯೂ ಹೆಚ್ಚಿನ ನಿಗಾ ವಹಿಸಬೇಕು. ಶುದ್ಧ ನೀರು ಎಲ್ಲ ರೋಗಗಳಿಗೂ ರಾಮಬಾಣ. ನಿರ್ಮಲ ನೀರು ದೇಹದಲ್ಲಿನ ವಿಷಕಾರಕಗಳನ್ನು ಹೊರಹಾಕುತ್ತವೆ.
ಬೇಸಿಗೆಯಲ್ಲಿ ಡಿಹೈಡ್ರೈಶನ್ ನಿಂದಾಗಿ ಜೀರ್ಣಕ್ರಿಯೆ ಕುಂಠಿತವಾಗಿರುತ್ತದೆ. ಮಳೆಗಾಲದ ವಾತಾವರಣ ಮತ್ತು ರೋಗಗಳು ಈ ಜೀರ್ಣಶಕ್ತಿಯನ್ನು ಮತ್ತಷ್ಟು ಕುಂಠಿತವಾಗಿಸುತ್ತವೆ. ಆದ್ದರಿಂದ ಜೀರ್ಣಶಕ್ತಿಯನ್ನು ವರ್ಧಿಸುವ ಆಹಾರ, ಪಾನೀಯಗಳತ್ತ ಗಮನ ಹರಿಸೋಣ.
ಆರೋಗ್ಯಕರ ಆಹಾರ
* ಕಾಯ್ದಾರಿನ ನೀರಿನಲ್ಲಿ ಒಂದು ಚಮಚ ಜೇನು ಸೇರಿಸಿ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ.
* ತಣ್ಣಗಿನ ಆಹಾರ ತಿನ್ನುವುದನ್ನು ಕಡಿಮೆಮಾಡಿ.
* ತಿಂಡಿ ತಿನಿಸಿನಲ್ಲಿ ಹಸಿ ಶುಂಠಿ ಹೆಚ್ಚು ಇರಲಿ.
* ಅಕ್ಕಿ, ಗೋಧಿಯಿಂದ ತಯಾರಿಸಿದ ಆಹಾರ ಹೆಚ್ಚಿರಲಿ.
* ತರಕಾರಿ ಸೂಪ್ ಅಥವಾ ಕ್ಯಾರಟ್ ಜ್ಯೂಸ್ ಕುಡಿಯುತ್ತಿರಿ.
* ಹೊರಗಿನ ತಿಂಡಿಯನ್ನು ತಿನ್ನಲೇಬೇಡಿ.
* ಕರಿದ ತಿಂಡಿ ತಿನ್ನಬೇಕೆನ್ನಿಸಿದರೆ ಮನೇಲೇ ತಯಾರಿಸಿ.
* ಪಲ್ಯ ತಯಾರಿಸುವ ಮುನ್ನ ತರಕಾರಿಯನ್ನು ಚೆನ್ನಾಗಿ ತೊಳೆಯಿರಿ.
* ಶುದ್ಧ ನೀರನ್ನು ಚೆನ್ನಾಗಿ ಕುಡಿಯಿರಿ. ಇದು ಡಿಹೈಡ್ರೇಶನ್ ಆಗದಂತೆ ನೋಡಿಕೊಳ್ಳುತ್ತದೆ.
ಮತ್ತಷ್ಟು ಆರೋಗ್ಯ ಸಲಹೆ
* ಯಾರನ್ನೇ ಭೇಟಿಯಾದ ನಂತರ ಸೋಪಿನಲ್ಲಿ ಕೈ ತೊಳೆಯಿರಿ.
* ದೇಹವನ್ನು ಬೆಚ್ಚಗಿಟ್ಟುಕೊಳ್ಳಿ.
* ತಲೆಗೂದಲು ಒದ್ದೆಯಾದಾಗ ಎಸಿ ಕೋಣೆ ಪ್ರವೇಶಿಸಬೇಡಿ.
* ಪಾದ ಒಡೆದಿದ್ದರೆ ನಿಯಮಿತವಾಗಿ ಅರಿಷಿಣ ಮತ್ತು ಬೇವಿನ ಪುಡಿಯ ಪೇಸ್ಟ್ ಹಚ್ಚಿರಿ.
* ಎಲ್ಲಕ್ಕಿಂತ ಹೆಚ್ಚಾಗಿ ಪ್ರತಿದಿನ ವ್ಯಾಯಾಮ ಮಾಡುವುದನ್ನು ಮರೆಯಬೇಡಿ.



Click it and Unblock the Notifications