Latest Updates
-
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ!
ಮಳೆಗಾಲದಲ್ಲಿ ಜೀರ್ಣಶಕ್ತಿ ವರ್ಧಿಸುವ ಆಹಾರ

ವೈರಲ್ ಜ್ವರ, ಮಲೇರಿಯಾ, ಕಾಲರಾ, ಡೆಂಗ್ಯೂ, ಚಿಕೂನ್ ಗುನ್ಯಾದಂಥ ರೋಗಗಳು ರೋಗ ನಿರೋಧಕ ಶಕ್ತಿ ಕಡಿಮೆ ಇರುವವರನ್ನು ಹಣ್ಣುಗಾಯಿ ನೀರುಗಾಯಿ ಮಾಡಿಬಿಡುತ್ತವೆ. ಇದೆಲ್ಲದಕ್ಕೂ ನೀರೇ ಮೂಲ ಕಾರಣ ಎಂಬುದನ್ನು ಗಮನದಲ್ಲಿಡಬೇಕು.
ಮನೆ ಸುತ್ತಮುತ್ತ ಎಲ್ಲೂ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಿದರೆ ಅರ್ಧಕ್ಕರ್ಧ ರೋಗಗಳು ನಮ್ಮ ಮುಂದೆ ಸುಳಿಯುವುದಿಲ್ಲ. ಕುಡಿಯುವ ನೀರಿನ ಬಗ್ಗೆಯೂ ಹೆಚ್ಚಿನ ನಿಗಾ ವಹಿಸಬೇಕು. ಶುದ್ಧ ನೀರು ಎಲ್ಲ ರೋಗಗಳಿಗೂ ರಾಮಬಾಣ. ನಿರ್ಮಲ ನೀರು ದೇಹದಲ್ಲಿನ ವಿಷಕಾರಕಗಳನ್ನು ಹೊರಹಾಕುತ್ತವೆ.
ಬೇಸಿಗೆಯಲ್ಲಿ ಡಿಹೈಡ್ರೈಶನ್ ನಿಂದಾಗಿ ಜೀರ್ಣಕ್ರಿಯೆ ಕುಂಠಿತವಾಗಿರುತ್ತದೆ. ಮಳೆಗಾಲದ ವಾತಾವರಣ ಮತ್ತು ರೋಗಗಳು ಈ ಜೀರ್ಣಶಕ್ತಿಯನ್ನು ಮತ್ತಷ್ಟು ಕುಂಠಿತವಾಗಿಸುತ್ತವೆ. ಆದ್ದರಿಂದ ಜೀರ್ಣಶಕ್ತಿಯನ್ನು ವರ್ಧಿಸುವ ಆಹಾರ, ಪಾನೀಯಗಳತ್ತ ಗಮನ ಹರಿಸೋಣ.
ಆರೋಗ್ಯಕರ ಆಹಾರ
* ಕಾಯ್ದಾರಿನ ನೀರಿನಲ್ಲಿ ಒಂದು ಚಮಚ ಜೇನು ಸೇರಿಸಿ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ.
* ತಣ್ಣಗಿನ ಆಹಾರ ತಿನ್ನುವುದನ್ನು ಕಡಿಮೆಮಾಡಿ.
* ತಿಂಡಿ ತಿನಿಸಿನಲ್ಲಿ ಹಸಿ ಶುಂಠಿ ಹೆಚ್ಚು ಇರಲಿ.
* ಅಕ್ಕಿ, ಗೋಧಿಯಿಂದ ತಯಾರಿಸಿದ ಆಹಾರ ಹೆಚ್ಚಿರಲಿ.
* ತರಕಾರಿ ಸೂಪ್ ಅಥವಾ ಕ್ಯಾರಟ್ ಜ್ಯೂಸ್ ಕುಡಿಯುತ್ತಿರಿ.
* ಹೊರಗಿನ ತಿಂಡಿಯನ್ನು ತಿನ್ನಲೇಬೇಡಿ.
* ಕರಿದ ತಿಂಡಿ ತಿನ್ನಬೇಕೆನ್ನಿಸಿದರೆ ಮನೇಲೇ ತಯಾರಿಸಿ.
* ಪಲ್ಯ ತಯಾರಿಸುವ ಮುನ್ನ ತರಕಾರಿಯನ್ನು ಚೆನ್ನಾಗಿ ತೊಳೆಯಿರಿ.
* ಶುದ್ಧ ನೀರನ್ನು ಚೆನ್ನಾಗಿ ಕುಡಿಯಿರಿ. ಇದು ಡಿಹೈಡ್ರೇಶನ್ ಆಗದಂತೆ ನೋಡಿಕೊಳ್ಳುತ್ತದೆ.
ಮತ್ತಷ್ಟು ಆರೋಗ್ಯ ಸಲಹೆ
* ಯಾರನ್ನೇ ಭೇಟಿಯಾದ ನಂತರ ಸೋಪಿನಲ್ಲಿ ಕೈ ತೊಳೆಯಿರಿ.
* ದೇಹವನ್ನು ಬೆಚ್ಚಗಿಟ್ಟುಕೊಳ್ಳಿ.
* ತಲೆಗೂದಲು ಒದ್ದೆಯಾದಾಗ ಎಸಿ ಕೋಣೆ ಪ್ರವೇಶಿಸಬೇಡಿ.
* ಪಾದ ಒಡೆದಿದ್ದರೆ ನಿಯಮಿತವಾಗಿ ಅರಿಷಿಣ ಮತ್ತು ಬೇವಿನ ಪುಡಿಯ ಪೇಸ್ಟ್ ಹಚ್ಚಿರಿ.
* ಎಲ್ಲಕ್ಕಿಂತ ಹೆಚ್ಚಾಗಿ ಪ್ರತಿದಿನ ವ್ಯಾಯಾಮ ಮಾಡುವುದನ್ನು ಮರೆಯಬೇಡಿ.



Click it and Unblock the Notifications