Latest Updates
-
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ!
ಮಳೆಗಾಲದಲ್ಲಿ ಜೀರ್ಣಶಕ್ತಿ ವರ್ಧಿಸುವ ಆಹಾರ

ವೈರಲ್ ಜ್ವರ, ಮಲೇರಿಯಾ, ಕಾಲರಾ, ಡೆಂಗ್ಯೂ, ಚಿಕೂನ್ ಗುನ್ಯಾದಂಥ ರೋಗಗಳು ರೋಗ ನಿರೋಧಕ ಶಕ್ತಿ ಕಡಿಮೆ ಇರುವವರನ್ನು ಹಣ್ಣುಗಾಯಿ ನೀರುಗಾಯಿ ಮಾಡಿಬಿಡುತ್ತವೆ. ಇದೆಲ್ಲದಕ್ಕೂ ನೀರೇ ಮೂಲ ಕಾರಣ ಎಂಬುದನ್ನು ಗಮನದಲ್ಲಿಡಬೇಕು.
ಮನೆ ಸುತ್ತಮುತ್ತ ಎಲ್ಲೂ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಿದರೆ ಅರ್ಧಕ್ಕರ್ಧ ರೋಗಗಳು ನಮ್ಮ ಮುಂದೆ ಸುಳಿಯುವುದಿಲ್ಲ. ಕುಡಿಯುವ ನೀರಿನ ಬಗ್ಗೆಯೂ ಹೆಚ್ಚಿನ ನಿಗಾ ವಹಿಸಬೇಕು. ಶುದ್ಧ ನೀರು ಎಲ್ಲ ರೋಗಗಳಿಗೂ ರಾಮಬಾಣ. ನಿರ್ಮಲ ನೀರು ದೇಹದಲ್ಲಿನ ವಿಷಕಾರಕಗಳನ್ನು ಹೊರಹಾಕುತ್ತವೆ.
ಬೇಸಿಗೆಯಲ್ಲಿ ಡಿಹೈಡ್ರೈಶನ್ ನಿಂದಾಗಿ ಜೀರ್ಣಕ್ರಿಯೆ ಕುಂಠಿತವಾಗಿರುತ್ತದೆ. ಮಳೆಗಾಲದ ವಾತಾವರಣ ಮತ್ತು ರೋಗಗಳು ಈ ಜೀರ್ಣಶಕ್ತಿಯನ್ನು ಮತ್ತಷ್ಟು ಕುಂಠಿತವಾಗಿಸುತ್ತವೆ. ಆದ್ದರಿಂದ ಜೀರ್ಣಶಕ್ತಿಯನ್ನು ವರ್ಧಿಸುವ ಆಹಾರ, ಪಾನೀಯಗಳತ್ತ ಗಮನ ಹರಿಸೋಣ.
ಆರೋಗ್ಯಕರ ಆಹಾರ
* ಕಾಯ್ದಾರಿನ ನೀರಿನಲ್ಲಿ ಒಂದು ಚಮಚ ಜೇನು ಸೇರಿಸಿ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ.
* ತಣ್ಣಗಿನ ಆಹಾರ ತಿನ್ನುವುದನ್ನು ಕಡಿಮೆಮಾಡಿ.
* ತಿಂಡಿ ತಿನಿಸಿನಲ್ಲಿ ಹಸಿ ಶುಂಠಿ ಹೆಚ್ಚು ಇರಲಿ.
* ಅಕ್ಕಿ, ಗೋಧಿಯಿಂದ ತಯಾರಿಸಿದ ಆಹಾರ ಹೆಚ್ಚಿರಲಿ.
* ತರಕಾರಿ ಸೂಪ್ ಅಥವಾ ಕ್ಯಾರಟ್ ಜ್ಯೂಸ್ ಕುಡಿಯುತ್ತಿರಿ.
* ಹೊರಗಿನ ತಿಂಡಿಯನ್ನು ತಿನ್ನಲೇಬೇಡಿ.
* ಕರಿದ ತಿಂಡಿ ತಿನ್ನಬೇಕೆನ್ನಿಸಿದರೆ ಮನೇಲೇ ತಯಾರಿಸಿ.
* ಪಲ್ಯ ತಯಾರಿಸುವ ಮುನ್ನ ತರಕಾರಿಯನ್ನು ಚೆನ್ನಾಗಿ ತೊಳೆಯಿರಿ.
* ಶುದ್ಧ ನೀರನ್ನು ಚೆನ್ನಾಗಿ ಕುಡಿಯಿರಿ. ಇದು ಡಿಹೈಡ್ರೇಶನ್ ಆಗದಂತೆ ನೋಡಿಕೊಳ್ಳುತ್ತದೆ.
ಮತ್ತಷ್ಟು ಆರೋಗ್ಯ ಸಲಹೆ
* ಯಾರನ್ನೇ ಭೇಟಿಯಾದ ನಂತರ ಸೋಪಿನಲ್ಲಿ ಕೈ ತೊಳೆಯಿರಿ.
* ದೇಹವನ್ನು ಬೆಚ್ಚಗಿಟ್ಟುಕೊಳ್ಳಿ.
* ತಲೆಗೂದಲು ಒದ್ದೆಯಾದಾಗ ಎಸಿ ಕೋಣೆ ಪ್ರವೇಶಿಸಬೇಡಿ.
* ಪಾದ ಒಡೆದಿದ್ದರೆ ನಿಯಮಿತವಾಗಿ ಅರಿಷಿಣ ಮತ್ತು ಬೇವಿನ ಪುಡಿಯ ಪೇಸ್ಟ್ ಹಚ್ಚಿರಿ.
* ಎಲ್ಲಕ್ಕಿಂತ ಹೆಚ್ಚಾಗಿ ಪ್ರತಿದಿನ ವ್ಯಾಯಾಮ ಮಾಡುವುದನ್ನು ಮರೆಯಬೇಡಿ.



Click it and Unblock the Notifications