Latest Updates
-
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ -
ಬಿಸಿಲ ಬೇಗೆಯಿಂದ ಪಾರಾಗಲು ಮನೆಯನ್ನು ತಂಪಾಗಿರಿಸುವ ಅದ್ಭುತ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಪಾನೀಯಗಳೇ ಮದ್ದು! -
ಬಿಸಿಲ ಬೇಗೆಯಿಂದ ಪಾರಾಗಲು ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ -
ಬಿಸಿಲ ಬೇಗೆಯಿಂದ ಪಾರಾಗಲು ನಿಮ್ಮ ವ್ಯಾಯಾಮದ ಸಮಯ ಬದಲಾಯಿಸಿ
ಇದೀಗ ತಾನೆ ಮದುವೆಯಾದ ಹುಡುಗಿಗೆ

* ಹುರುಳಿಕಾಯಿ, ಗೋರಿಕಾಯಿಗಳನ್ನು ಮಾರುಕಟ್ಟೆಯಿಂದ ತಂದ ಕೂಡಲೇ ನಾರು ಬಿಡಿಸಿಟ್ಟರೆ ಕಾಯಿ ಬಲಿಯದು.
* ಹುರುಳಿಕಾಯಿ ಹಾಗೂ ಗೋರಿಕಾಯಿಗಳನ್ನು ಹುರಿಯುವಾಗ ಒಂದು ಚಿಟಿಕೆ ಉಪ್ಪು ಅಥವಾ ಸಕ್ಕರೆ ಹಾಕಿದರೆ ಅದರ ಹಸಿರು ಬಣ್ಣ ಹಾಗೆಯೇ ಉಳಿಯುವುದು.
* ತಾಜಾ ಹಸಿ ಮೆಣಸಿನಕಾಯಿಯ ತೊಟ್ಟು ಬಿಡಿಸಿಟ್ಟರೆ ಅದು ಬೇಗ ಹಣ್ಣಾಗುವುದಿಲ್ಲ.
* ಮಸಾಲೆ ತಯಾರಿಸುವಾಗ ರುಬ್ಬುವ ಖಾರಕ್ಕೆ ಒಂದೆರಡು ಹಸಿ ಟೊಮೇಟೊ ಹಾಕಿ. ಇದರಿಂದ ಸಾರು ಒಳ್ಳೆಯ ಬಣ್ಣ ಪಡೆಯುವುದಲ್ಲದೆ ರುಚಿ ಹೆಚ್ಚುವುದು.
* ಹಸಿ ಮೆಣಸಿನಕಾಯಿ ಖಾರಕ್ಕೆ ಉಪ್ಪಿನ ಜತೆ ಸ್ವಲ್ಪ ನಿಂಬೆರಸವನ್ನೂ ಹಾಕಿ ತಿರುವಿದರೆ ಬಹಳ ದಿನಗಳವರೆಗೂ ತಿನ್ನಲು ಬಳಸಬಹುದು.
* ಹುರುಳಿಕಾಯಿ, ಗೋರಿಕಾಯಿ, ಕ್ಯಾರೆಟ್ಗಳು ಬಾಡಿದ್ದರೆ ಸ್ವಲ್ಪ ಹೊತ್ತು ಉಪ್ಪು ನೀರಿನಲ್ಲಿ ಹಾಕಿಡಿ. ಮತ್ತೆ ಮೊದಲಿನ ತಾಜಾತನ ಮರಳುವುದು.
* ಕೈಗೆ ಸ್ವಲ್ಪ ಕೊಬ್ಬರಿ ಎಣ್ಣೆ ಸವರಿಕೊಂಡು ಬೀಟ್ರೂಟ್ ಹೆಚ್ಚಿದರೆ ಕೈ ಕೆಂಪಾಗದು.
* ಪರಂಗಿ ಹಣ್ಣು ಅಥವಾ ಕಾಯಿ ಹೆಚ್ಚುವಾಗ ಮೊದಲು ಸಿಪ್ಪೆ ತೆಗೆದು ಅನಂತರ ತೊಟ್ಟು ಹಾಗೂ ತುದಿ ತೆಗೆಯಿರಿ. ಇದರಿಂದ ಹಾಲು ಜಿನುಗಿ ಜಾರುವುದು ತಪ್ಪುತ್ತದೆ.
* ಪುದೀನಾ ಚಟ್ನಿ ರುಬ್ಬುವಾಗ ಸ್ವಲ್ಪ ನಿಂಬೆರಸ ಹಾಕಿದರೆ ಚಟ್ನಿಯ ಬಣ್ಣ ಹಸಿರಾಗಿಯೇ ಇರುವುದು.
* ಅಕ್ಕಿರೊಟ್ಟಿ ಮಾಡಲು ಹಿಟ್ಟನ್ನು ಬೇಯಿಸುವಾಗ ಒಂದು ಟೇಬಲ್ ಚಮಚ ಚಿರೋಟಿ ರವೆ ಹಾಕಿದರೆ ರೊಟ್ಟಿಯ ಅಂಚು ಸೀಳುವುದಿಲ್ಲ.



Click it and Unblock the Notifications











