Latest Updates
-
ದೆಹಲಿ ನೀರಿನ ಬಿಕ್ಕಟ್ಟು: ಮನೆಯಲ್ಲಿ ನೀರು ಉಳಿಸಿ, ಗಿಡಗಳನ್ನು ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಡೈರಿ ಉತ್ಪನ್ನಗಳ ಸ್ಮಾರ್ಟ್ ಆಯ್ಕೆ: ವಿಶ್ವ ಹಾಲು ದಿನದ ವಿಶೇಷ ಸಲಹೆಗಳು -
ಬೆಂಗಳೂರು ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಿ, ಸ್ಟೈಲಿಶ್ ಆಗಿ ಕಾಣಲು ಈ ವೈರಲ್ ಟಿಪ್ಸ್ ಮಿಸ್ ಮಾಡ್ಬೇಡಿ! -
ವಿಶ್ವ ಸೈಕಲ್ ದಿನ: ಫಿಟ್ನೆಸ್ ಕಾಯ್ದುಕೊಳ್ಳಲು ಮತ್ತು ಸುರಕ್ಷಿತ ಸೈಕ್ಲಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್ -
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ!
ಅಕ್ಕಿಗೆ ಹುಳ ಆಗದಂತೆ ಏನು ಮಾಡಬೇಕು?

* ಭಾರತಿ ಎಚ್ಎಸ್, ಬೆಂಗಳೂರು
1) ಅಕ್ಕಿ ಡಬ್ಬದ ಒಳಗೆ ಹರಳೆಣ್ಣೆಯನ್ನು ಸವರಿ ಅಕ್ಕಿ ಹಾಕಿಟ್ಟರೆ ಹುಳ ಬರುವುದಿಲ್ಲ.
2) ಅಕ್ಕಿ ಡಬ್ಬದಲ್ಲಿ ಈರುಳ್ಳಿ ಅಥವಾ ಬೇವಿನ ಎಲೆ ಅಥವಾ ಅರಿಶಿಣ ಕೊಂಬುಗಳನ್ನು ಇಟ್ಟರೂ ಹುಳ ಆಗುವುದಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಹಸಿ ಕೈಯಿಂದ ಅಕ್ಕಿ ಮುಟ್ಟಬಾರದು.
3) ಸೊಪ್ಪನ್ನು ಬೇಯಿಸುವಾಗ ಮುಚ್ಚಳ ಮುಚ್ಚಬೇಡಿ. ಮುಚ್ಚಿದಾಗ ಅದರ ಬಣ್ಣ ಬದಲಾಗುತ್ತದೆ.
4) ಸ್ವಲ್ಪ ಎಣ್ಣೆಯನ್ನು ಹಚ್ಚಿಕೊಂಡು ತರಕಾರಿಗಳನ್ನು ಹೆಚ್ಚಿದಾಗ ಕೈ ಕಪ್ಪಾಗುವುದಿಲ್ಲ.
5) ತರಕಾರಿ ಹೆಚ್ಚಿ ಕೈ ಕಪ್ಪಾಗಿದ್ದರೆ ನಿಂಬೆ ಹಣ್ಣಿನ ಸಿಪ್ಪೆಯಿಂದ ಕೈಯನ್ನು ಉಜ್ಜಿ ಕೈ ಸ್ವಚ್ಚವಾಗಿ ಮೃದುವಾಗುವುದು.
6) ಬೆಂಡೆಕಾಯಿ ಪಲ್ಯ ಲೋಳೆಯಾಗದಿರಲು ಸ್ವಲ್ಪಎಣ್ಣೆ ಹಾಕಿ ಹುರಿದ ಬಳಿಕ ಹುಣಸೆ ರಸವನ್ನು ಹಾಕಿದಲ್ಲಿ ಪಲ್ಯ ಅಥವಾ ಸಾರು ಲೋಳೆಯಾಗುವುದಿಲ್ಲ.
7) ಪಲ್ಯಕ್ಕೆ ಆಲುಗಡ್ಡೆ ಬೇಯಿಸುವಾಗ ಸ್ವಲ್ಪ ಉಪ್ಪು ಹಾಕಿದರೆ ಸಿಪ್ಪೆ ಸಲೀಸಾಗಿ ಸುಲಿದು ಬರುತ್ತದೆ.
8) ತರಕಾರಿ ಬಾಡಿದ ಹಾಗಿದ್ದರೆ ನೀರಿಗೆ ನಿಂಬೆರಸ ಹಾಕಿ ಅದರಲ್ಲಿ ತರಕಾರಿಗಳನ್ನು 1/2 ಗಂಟೆ ಮುಳುಗಿಸಿಡಿ. ಮತ್ತೆ ಹೊಸದರಂತೆ ಹಾಗುತ್ತದೆ.
9) ಸಲಾಡ್ ಗಳನ್ನು ಮಾಡುವಾಗ ಈರುಳ್ಳಿ, ಸೌತೆಕಾಯಿ, ಟೊಮೆಟೊ ಅಥವಾ ಇತರೇ ತರಕಾರಿಗಳನ್ನು ಹೆಚ್ಚಿ ಫ್ರಿಡ್ಜ್ ನಲ್ಲಿ 1/2 ಗಂಟೆ ಇಟ್ಟು ಉಪಯೋಗಿಸಿದರೆ ರುಚಿ ಹೆಚ್ಚುತದೆ.
10) ಟೀ ಮಾಡುವಾಗ ಸ್ವಲ್ಪ ಏಲಕ್ಕಿ ಪುಡಿ ಹಾಕಿದರೆ ಘಮ್ಮನೆಯ ಚಹಾ ಮತ್ತಷ್ಟು ರುಚಿ ಪಡೆಯುತ್ತದೆ. ಏಲ್ಲಕ್ಕಿ ಉಪಯೋಗಿಸಿದ ಮೇಲೆ ಸಿಪ್ಪೆಯನ್ನು ಬಿಸಾಡುವ ಬದಲು ಟೀ ಡಬ್ಬದಲ್ಲಿ ಹಾಕಿಡಿ.
11) ಸಾರಿನಲ್ಲಿ ಉಪ್ಪು ಜಾಸ್ತಿಯಾದರೆ ಆಲುಗಡ್ಡೆಯ ಚೂರುಗಳನ್ನು ಹಾಕಿ ಬೇಯಿಸಿ. 1/2 ಗಂಟೆಯಾದ ಮೇಲೆ ಮೆಲ್ಲಗೆ ತೆಗೆಯಿರಿ.
12) ಸಾರಿಗೆ ಖಾರ ಜಾಸ್ತಿಯಾದರೆ ಟೊಮೆಟೊ ಹಣ್ಣನ್ನು ಹಾಕಿ ಬೇಯಿಸಿ.
13) ಮಜ್ಜಿಗೆ ತುಂಬಾ ಹುಳಿಯಾದರೆ ಜಾಸ್ತಿ ನೀರು ಹಾಕಿ ಒಂದೆರಡು ಗಂಟೆಗಳ ಕಾಲ ಇಡಿ. ಆಮೇಲೆ ಮೇಲಿನ ತಿಳಿ ನೀರನ್ನು ಚೆಲ್ಲಿದಾಗ ಹುಳಿ ಮಾಯವಾಗಿರುತ್ತದೆ.
14) ದೋಸೆ ಮಾಡುವಾಗ ದೋಸೆ ಕಾವಲಿಗೆ ಕಚ್ಚುತ್ತಿದ್ದರೆ ಒಂದು ಈರುಳ್ಳಿಯನ್ನು 1/2 ಮಾಡಿ ಕಾವಲಿಗೆ ತಿಕ್ಕಿ ದೋಸೆ ಹುಯ್ಯಿರಿ.
15) ತರಕಾರಿ ಬೇಯಿಸುವಾಗ ಸ್ಟೀಲ್ ಪಾತ್ರೆಯಲ್ಲಿ ಬೇಯಿಸಬೇಕು. ಅಲ್ಯುಮಿನಿಯಂದಾದರೆ ತರಕಾರಿ ಕಪ್ಪಾಗುವುದು.



Click it and Unblock the Notifications