Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಅಕ್ಕಿಗೆ ಹುಳ ಆಗದಂತೆ ಏನು ಮಾಡಬೇಕು?

* ಭಾರತಿ ಎಚ್ಎಸ್, ಬೆಂಗಳೂರು
1) ಅಕ್ಕಿ ಡಬ್ಬದ ಒಳಗೆ ಹರಳೆಣ್ಣೆಯನ್ನು ಸವರಿ ಅಕ್ಕಿ ಹಾಕಿಟ್ಟರೆ ಹುಳ ಬರುವುದಿಲ್ಲ.
2) ಅಕ್ಕಿ ಡಬ್ಬದಲ್ಲಿ ಈರುಳ್ಳಿ ಅಥವಾ ಬೇವಿನ ಎಲೆ ಅಥವಾ ಅರಿಶಿಣ ಕೊಂಬುಗಳನ್ನು ಇಟ್ಟರೂ ಹುಳ ಆಗುವುದಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಹಸಿ ಕೈಯಿಂದ ಅಕ್ಕಿ ಮುಟ್ಟಬಾರದು.
3) ಸೊಪ್ಪನ್ನು ಬೇಯಿಸುವಾಗ ಮುಚ್ಚಳ ಮುಚ್ಚಬೇಡಿ. ಮುಚ್ಚಿದಾಗ ಅದರ ಬಣ್ಣ ಬದಲಾಗುತ್ತದೆ.
4) ಸ್ವಲ್ಪ ಎಣ್ಣೆಯನ್ನು ಹಚ್ಚಿಕೊಂಡು ತರಕಾರಿಗಳನ್ನು ಹೆಚ್ಚಿದಾಗ ಕೈ ಕಪ್ಪಾಗುವುದಿಲ್ಲ.
5) ತರಕಾರಿ ಹೆಚ್ಚಿ ಕೈ ಕಪ್ಪಾಗಿದ್ದರೆ ನಿಂಬೆ ಹಣ್ಣಿನ ಸಿಪ್ಪೆಯಿಂದ ಕೈಯನ್ನು ಉಜ್ಜಿ ಕೈ ಸ್ವಚ್ಚವಾಗಿ ಮೃದುವಾಗುವುದು.
6) ಬೆಂಡೆಕಾಯಿ ಪಲ್ಯ ಲೋಳೆಯಾಗದಿರಲು ಸ್ವಲ್ಪಎಣ್ಣೆ ಹಾಕಿ ಹುರಿದ ಬಳಿಕ ಹುಣಸೆ ರಸವನ್ನು ಹಾಕಿದಲ್ಲಿ ಪಲ್ಯ ಅಥವಾ ಸಾರು ಲೋಳೆಯಾಗುವುದಿಲ್ಲ.
7) ಪಲ್ಯಕ್ಕೆ ಆಲುಗಡ್ಡೆ ಬೇಯಿಸುವಾಗ ಸ್ವಲ್ಪ ಉಪ್ಪು ಹಾಕಿದರೆ ಸಿಪ್ಪೆ ಸಲೀಸಾಗಿ ಸುಲಿದು ಬರುತ್ತದೆ.
8) ತರಕಾರಿ ಬಾಡಿದ ಹಾಗಿದ್ದರೆ ನೀರಿಗೆ ನಿಂಬೆರಸ ಹಾಕಿ ಅದರಲ್ಲಿ ತರಕಾರಿಗಳನ್ನು 1/2 ಗಂಟೆ ಮುಳುಗಿಸಿಡಿ. ಮತ್ತೆ ಹೊಸದರಂತೆ ಹಾಗುತ್ತದೆ.
9) ಸಲಾಡ್ ಗಳನ್ನು ಮಾಡುವಾಗ ಈರುಳ್ಳಿ, ಸೌತೆಕಾಯಿ, ಟೊಮೆಟೊ ಅಥವಾ ಇತರೇ ತರಕಾರಿಗಳನ್ನು ಹೆಚ್ಚಿ ಫ್ರಿಡ್ಜ್ ನಲ್ಲಿ 1/2 ಗಂಟೆ ಇಟ್ಟು ಉಪಯೋಗಿಸಿದರೆ ರುಚಿ ಹೆಚ್ಚುತದೆ.
10) ಟೀ ಮಾಡುವಾಗ ಸ್ವಲ್ಪ ಏಲಕ್ಕಿ ಪುಡಿ ಹಾಕಿದರೆ ಘಮ್ಮನೆಯ ಚಹಾ ಮತ್ತಷ್ಟು ರುಚಿ ಪಡೆಯುತ್ತದೆ. ಏಲ್ಲಕ್ಕಿ ಉಪಯೋಗಿಸಿದ ಮೇಲೆ ಸಿಪ್ಪೆಯನ್ನು ಬಿಸಾಡುವ ಬದಲು ಟೀ ಡಬ್ಬದಲ್ಲಿ ಹಾಕಿಡಿ.
11) ಸಾರಿನಲ್ಲಿ ಉಪ್ಪು ಜಾಸ್ತಿಯಾದರೆ ಆಲುಗಡ್ಡೆಯ ಚೂರುಗಳನ್ನು ಹಾಕಿ ಬೇಯಿಸಿ. 1/2 ಗಂಟೆಯಾದ ಮೇಲೆ ಮೆಲ್ಲಗೆ ತೆಗೆಯಿರಿ.
12) ಸಾರಿಗೆ ಖಾರ ಜಾಸ್ತಿಯಾದರೆ ಟೊಮೆಟೊ ಹಣ್ಣನ್ನು ಹಾಕಿ ಬೇಯಿಸಿ.
13) ಮಜ್ಜಿಗೆ ತುಂಬಾ ಹುಳಿಯಾದರೆ ಜಾಸ್ತಿ ನೀರು ಹಾಕಿ ಒಂದೆರಡು ಗಂಟೆಗಳ ಕಾಲ ಇಡಿ. ಆಮೇಲೆ ಮೇಲಿನ ತಿಳಿ ನೀರನ್ನು ಚೆಲ್ಲಿದಾಗ ಹುಳಿ ಮಾಯವಾಗಿರುತ್ತದೆ.
14) ದೋಸೆ ಮಾಡುವಾಗ ದೋಸೆ ಕಾವಲಿಗೆ ಕಚ್ಚುತ್ತಿದ್ದರೆ ಒಂದು ಈರುಳ್ಳಿಯನ್ನು 1/2 ಮಾಡಿ ಕಾವಲಿಗೆ ತಿಕ್ಕಿ ದೋಸೆ ಹುಯ್ಯಿರಿ.
15) ತರಕಾರಿ ಬೇಯಿಸುವಾಗ ಸ್ಟೀಲ್ ಪಾತ್ರೆಯಲ್ಲಿ ಬೇಯಿಸಬೇಕು. ಅಲ್ಯುಮಿನಿಯಂದಾದರೆ ತರಕಾರಿ ಕಪ್ಪಾಗುವುದು.



Click it and Unblock the Notifications