Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಅಕ್ಕಿಗೆ ಹುಳ ಆಗದಂತೆ ಏನು ಮಾಡಬೇಕು?

* ಭಾರತಿ ಎಚ್ಎಸ್, ಬೆಂಗಳೂರು
1) ಅಕ್ಕಿ ಡಬ್ಬದ ಒಳಗೆ ಹರಳೆಣ್ಣೆಯನ್ನು ಸವರಿ ಅಕ್ಕಿ ಹಾಕಿಟ್ಟರೆ ಹುಳ ಬರುವುದಿಲ್ಲ.
2) ಅಕ್ಕಿ ಡಬ್ಬದಲ್ಲಿ ಈರುಳ್ಳಿ ಅಥವಾ ಬೇವಿನ ಎಲೆ ಅಥವಾ ಅರಿಶಿಣ ಕೊಂಬುಗಳನ್ನು ಇಟ್ಟರೂ ಹುಳ ಆಗುವುದಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಹಸಿ ಕೈಯಿಂದ ಅಕ್ಕಿ ಮುಟ್ಟಬಾರದು.
3) ಸೊಪ್ಪನ್ನು ಬೇಯಿಸುವಾಗ ಮುಚ್ಚಳ ಮುಚ್ಚಬೇಡಿ. ಮುಚ್ಚಿದಾಗ ಅದರ ಬಣ್ಣ ಬದಲಾಗುತ್ತದೆ.
4) ಸ್ವಲ್ಪ ಎಣ್ಣೆಯನ್ನು ಹಚ್ಚಿಕೊಂಡು ತರಕಾರಿಗಳನ್ನು ಹೆಚ್ಚಿದಾಗ ಕೈ ಕಪ್ಪಾಗುವುದಿಲ್ಲ.
5) ತರಕಾರಿ ಹೆಚ್ಚಿ ಕೈ ಕಪ್ಪಾಗಿದ್ದರೆ ನಿಂಬೆ ಹಣ್ಣಿನ ಸಿಪ್ಪೆಯಿಂದ ಕೈಯನ್ನು ಉಜ್ಜಿ ಕೈ ಸ್ವಚ್ಚವಾಗಿ ಮೃದುವಾಗುವುದು.
6) ಬೆಂಡೆಕಾಯಿ ಪಲ್ಯ ಲೋಳೆಯಾಗದಿರಲು ಸ್ವಲ್ಪಎಣ್ಣೆ ಹಾಕಿ ಹುರಿದ ಬಳಿಕ ಹುಣಸೆ ರಸವನ್ನು ಹಾಕಿದಲ್ಲಿ ಪಲ್ಯ ಅಥವಾ ಸಾರು ಲೋಳೆಯಾಗುವುದಿಲ್ಲ.
7) ಪಲ್ಯಕ್ಕೆ ಆಲುಗಡ್ಡೆ ಬೇಯಿಸುವಾಗ ಸ್ವಲ್ಪ ಉಪ್ಪು ಹಾಕಿದರೆ ಸಿಪ್ಪೆ ಸಲೀಸಾಗಿ ಸುಲಿದು ಬರುತ್ತದೆ.
8) ತರಕಾರಿ ಬಾಡಿದ ಹಾಗಿದ್ದರೆ ನೀರಿಗೆ ನಿಂಬೆರಸ ಹಾಕಿ ಅದರಲ್ಲಿ ತರಕಾರಿಗಳನ್ನು 1/2 ಗಂಟೆ ಮುಳುಗಿಸಿಡಿ. ಮತ್ತೆ ಹೊಸದರಂತೆ ಹಾಗುತ್ತದೆ.
9) ಸಲಾಡ್ ಗಳನ್ನು ಮಾಡುವಾಗ ಈರುಳ್ಳಿ, ಸೌತೆಕಾಯಿ, ಟೊಮೆಟೊ ಅಥವಾ ಇತರೇ ತರಕಾರಿಗಳನ್ನು ಹೆಚ್ಚಿ ಫ್ರಿಡ್ಜ್ ನಲ್ಲಿ 1/2 ಗಂಟೆ ಇಟ್ಟು ಉಪಯೋಗಿಸಿದರೆ ರುಚಿ ಹೆಚ್ಚುತದೆ.
10) ಟೀ ಮಾಡುವಾಗ ಸ್ವಲ್ಪ ಏಲಕ್ಕಿ ಪುಡಿ ಹಾಕಿದರೆ ಘಮ್ಮನೆಯ ಚಹಾ ಮತ್ತಷ್ಟು ರುಚಿ ಪಡೆಯುತ್ತದೆ. ಏಲ್ಲಕ್ಕಿ ಉಪಯೋಗಿಸಿದ ಮೇಲೆ ಸಿಪ್ಪೆಯನ್ನು ಬಿಸಾಡುವ ಬದಲು ಟೀ ಡಬ್ಬದಲ್ಲಿ ಹಾಕಿಡಿ.
11) ಸಾರಿನಲ್ಲಿ ಉಪ್ಪು ಜಾಸ್ತಿಯಾದರೆ ಆಲುಗಡ್ಡೆಯ ಚೂರುಗಳನ್ನು ಹಾಕಿ ಬೇಯಿಸಿ. 1/2 ಗಂಟೆಯಾದ ಮೇಲೆ ಮೆಲ್ಲಗೆ ತೆಗೆಯಿರಿ.
12) ಸಾರಿಗೆ ಖಾರ ಜಾಸ್ತಿಯಾದರೆ ಟೊಮೆಟೊ ಹಣ್ಣನ್ನು ಹಾಕಿ ಬೇಯಿಸಿ.
13) ಮಜ್ಜಿಗೆ ತುಂಬಾ ಹುಳಿಯಾದರೆ ಜಾಸ್ತಿ ನೀರು ಹಾಕಿ ಒಂದೆರಡು ಗಂಟೆಗಳ ಕಾಲ ಇಡಿ. ಆಮೇಲೆ ಮೇಲಿನ ತಿಳಿ ನೀರನ್ನು ಚೆಲ್ಲಿದಾಗ ಹುಳಿ ಮಾಯವಾಗಿರುತ್ತದೆ.
14) ದೋಸೆ ಮಾಡುವಾಗ ದೋಸೆ ಕಾವಲಿಗೆ ಕಚ್ಚುತ್ತಿದ್ದರೆ ಒಂದು ಈರುಳ್ಳಿಯನ್ನು 1/2 ಮಾಡಿ ಕಾವಲಿಗೆ ತಿಕ್ಕಿ ದೋಸೆ ಹುಯ್ಯಿರಿ.
15) ತರಕಾರಿ ಬೇಯಿಸುವಾಗ ಸ್ಟೀಲ್ ಪಾತ್ರೆಯಲ್ಲಿ ಬೇಯಿಸಬೇಕು. ಅಲ್ಯುಮಿನಿಯಂದಾದರೆ ತರಕಾರಿ ಕಪ್ಪಾಗುವುದು.



Click it and Unblock the Notifications