Latest Updates
-
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು ತಪ್ಪಿದ್ದಲ್ಲ!
ಅಡಿಗಡಿಗೆ ಉಪಯೋಗಕ್ಕೆ ಬರುವ ಸಲಹೆಗಳು

* ಮೆಣಸಿನಕಾಯಿ ಹೆಚ್ಚಿದ ಅಥವಾ ತುಂಡರಿಸಿದ ನಂತರ ಕೈಗೆ ಯಾವುದೇ ಎಣ್ಣೆ ಹಚ್ಚಿಕೊಂಡು ಪೇಪರ್ನಿಂದ ಒರೆಸಿ ಸಾಬೂನಿನಿಂದ ತೊಳೆದರೆ ಕೈಲಿ ಖಾರ ಉಳಿಯುವುದಿಲ್ಲ.
* ಈರುಳ್ಳಿ ಹೆಚ್ಚುವಾಗ ಕಣ್ಣಲ್ಲಿ ನೀರು ಸುರಿಯುತ್ತದೆಯಲ್ಲವೇ?? ಕನ್ನಡಕ ಧರಿಸಿ ಹೆಚ್ಚಿ. ಕಣ್ಣಲ್ಲಿ ನೀರು ಬರುವುದಿಲ್ಲ.
* ಟೀ ಮಾಡುವಾಗ ಕಿತ್ತಳೆ ಸಿಪ್ಪೆ, ಹಸಿ ಶುಂಠಿ, ತುಳಸಿ, ಹೀಗೆ ಒಂದೊಂದುಸಲ ಒಂದೊಂದನ್ನು ಹಾಕಿ ಟೀ ಮಾಡಿದರೆ ಬಹಳ ರುಚಿ ಕೊಡುತ್ತೆ. ಆರೋಗ್ಯಕ್ಕೂ ಒಳ್ಳೆಯದು.
* ಅಡಿಗೆ ಮನೆಯ ಸಿಂಕ್ ಹತ್ತಿರ ಒಂದು ಹಳೆಯ ಟೂತ್ ಬ್ರಷ್ ಇಡಿ, ನಕಾಸೆ ಇರುವ ಪಾತ್ರೆ ತಿಕ್ಕಲು ಉಪಯೋಗವಾಗುತ್ತೆ.
* ಮನೆ ಗುಡಿಸುವ ಪೊರಕೆ, ಬಾತ್ರೂಂ ತೊಳೆಯುವ ಪೊರೆಕೆಗೆ ದಾರದ ಕುಣಿಕೆ ಹಾಕಿ ಬಾಗಿಲ ಹಿಂದೆ/ಮೂಲೆಯಲ್ಲಿ ನೇತುಹಾಕಿ, ಪೊರಕೆ ಕಡ್ಡಿ ಹಾಳಾಗುವುದಿಲ್ಲ.
* ಬಾಳೆ ಹಣ್ಣಿನ ರಸಾಯನ ಮಾಡುವಾಗ ಒಂದು ಅರ್ಧ ಚಮಚ ಒಳ್ಳೆ ತುಪ್ಪ ಹಾಕಿದರೆ ಬಾಳೆಹಣ್ಣು ಕಪ್ಪಾಗುವುದಿಲ್ಲ, ರುಚಿಯು ಹೆಚ್ಚುತ್ತದೆ.
* ಒಂದುಪಾವು ಗೋಧಿ ಹಿಟ್ಟಿಗೆ ಸ್ವಲ್ಪ ಉಪ್ಪು ಮತ್ತು ಒಂದೆರಡು ಬ್ರೆಡ್ಡಿನ ಬಿಳಿಭಾಗದ ಪುಡಿ (ಮಿಕ್ಸಿಯಲ್ಲಿ ಮಾಡಿ) ಹಾಕಿ ಕಲೆಸಿದರೆ ಚಪಾತಿ ತುಂಬಾ ಮೃದುವಾಗಿ ಆಗುತ್ತದೆ.
* ನಿಮ್ಮ ಮನೆಯಲ್ಲಿ ಮೂರು ನಾಲ್ಕು ಬೇಡವಾದ ಗ್ಯಾಸ್ ಲೈಟರ್ಗಳಿದ್ದರೆ ಅವುಗಳನ್ನು ಆಗಾಗ್ಗೆ ಬದಲಾಯಿಸುತ್ತಾ ಉಪಯೋಗಿಸಿದರೆ, ಎಲ್ಲಾ ಲೈಟರ್ಗಳೂ ಚೆನ್ನಾಗಿ ಕೆಲಸ ಮಾಡುತ್ತವೆ.
* ಕಬ್ಬಿಣದ ಬಾಣಲೆ, ರೊಟ್ಟಿ ತವ ಉಪಯೋಗಿಸಿ ತೊಳೆದ ನಂತರ ಒರೆಸಿ ಸ್ವಲ್ಪ ಅಡಿಗೆ ಎಣ್ಣೆ ಹಚ್ಚಿಡಿ, ಮತ್ತೊಮ್ಮೆ ಉಪಯೋಗಿಸುವಾಗ ಮೇಲಿಂದ ತೊಳೆದು (ಉಜ್ಜದೆ) ಉಪಯೋಗಿಸಿ. ಚಿಟಿಕೆ ಉಪ್ಪು ಹಾಕಿ ತವ ಮೇಲೆ ಉಜ್ಜಿದರೆ ರೊಟ್ಟಿ ಅಥವಾ ದೋಸೆ ಸಲೀಸಾಗಿ ಎದ್ದು ಬರುತ್ತದೆ.



Click it and Unblock the Notifications