Latest Updates
-
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ -
ಬಿಸಿಲ ಬೇಗೆಯಿಂದ ಪಾರಾಗಲು ಮನೆಯನ್ನು ತಂಪಾಗಿರಿಸುವ ಅದ್ಭುತ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಪಾನೀಯಗಳೇ ಮದ್ದು! -
ಬಿಸಿಲ ಬೇಗೆಯಿಂದ ಪಾರಾಗಲು ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ
ಅಡಿಗಡಿಗೆ ಉಪಯೋಗಕ್ಕೆ ಬರುವ ಸಲಹೆಗಳು

* ಮೆಣಸಿನಕಾಯಿ ಹೆಚ್ಚಿದ ಅಥವಾ ತುಂಡರಿಸಿದ ನಂತರ ಕೈಗೆ ಯಾವುದೇ ಎಣ್ಣೆ ಹಚ್ಚಿಕೊಂಡು ಪೇಪರ್ನಿಂದ ಒರೆಸಿ ಸಾಬೂನಿನಿಂದ ತೊಳೆದರೆ ಕೈಲಿ ಖಾರ ಉಳಿಯುವುದಿಲ್ಲ.
* ಈರುಳ್ಳಿ ಹೆಚ್ಚುವಾಗ ಕಣ್ಣಲ್ಲಿ ನೀರು ಸುರಿಯುತ್ತದೆಯಲ್ಲವೇ?? ಕನ್ನಡಕ ಧರಿಸಿ ಹೆಚ್ಚಿ. ಕಣ್ಣಲ್ಲಿ ನೀರು ಬರುವುದಿಲ್ಲ.
* ಟೀ ಮಾಡುವಾಗ ಕಿತ್ತಳೆ ಸಿಪ್ಪೆ, ಹಸಿ ಶುಂಠಿ, ತುಳಸಿ, ಹೀಗೆ ಒಂದೊಂದುಸಲ ಒಂದೊಂದನ್ನು ಹಾಕಿ ಟೀ ಮಾಡಿದರೆ ಬಹಳ ರುಚಿ ಕೊಡುತ್ತೆ. ಆರೋಗ್ಯಕ್ಕೂ ಒಳ್ಳೆಯದು.
* ಅಡಿಗೆ ಮನೆಯ ಸಿಂಕ್ ಹತ್ತಿರ ಒಂದು ಹಳೆಯ ಟೂತ್ ಬ್ರಷ್ ಇಡಿ, ನಕಾಸೆ ಇರುವ ಪಾತ್ರೆ ತಿಕ್ಕಲು ಉಪಯೋಗವಾಗುತ್ತೆ.
* ಮನೆ ಗುಡಿಸುವ ಪೊರಕೆ, ಬಾತ್ರೂಂ ತೊಳೆಯುವ ಪೊರೆಕೆಗೆ ದಾರದ ಕುಣಿಕೆ ಹಾಕಿ ಬಾಗಿಲ ಹಿಂದೆ/ಮೂಲೆಯಲ್ಲಿ ನೇತುಹಾಕಿ, ಪೊರಕೆ ಕಡ್ಡಿ ಹಾಳಾಗುವುದಿಲ್ಲ.
* ಬಾಳೆ ಹಣ್ಣಿನ ರಸಾಯನ ಮಾಡುವಾಗ ಒಂದು ಅರ್ಧ ಚಮಚ ಒಳ್ಳೆ ತುಪ್ಪ ಹಾಕಿದರೆ ಬಾಳೆಹಣ್ಣು ಕಪ್ಪಾಗುವುದಿಲ್ಲ, ರುಚಿಯು ಹೆಚ್ಚುತ್ತದೆ.
* ಒಂದುಪಾವು ಗೋಧಿ ಹಿಟ್ಟಿಗೆ ಸ್ವಲ್ಪ ಉಪ್ಪು ಮತ್ತು ಒಂದೆರಡು ಬ್ರೆಡ್ಡಿನ ಬಿಳಿಭಾಗದ ಪುಡಿ (ಮಿಕ್ಸಿಯಲ್ಲಿ ಮಾಡಿ) ಹಾಕಿ ಕಲೆಸಿದರೆ ಚಪಾತಿ ತುಂಬಾ ಮೃದುವಾಗಿ ಆಗುತ್ತದೆ.
* ನಿಮ್ಮ ಮನೆಯಲ್ಲಿ ಮೂರು ನಾಲ್ಕು ಬೇಡವಾದ ಗ್ಯಾಸ್ ಲೈಟರ್ಗಳಿದ್ದರೆ ಅವುಗಳನ್ನು ಆಗಾಗ್ಗೆ ಬದಲಾಯಿಸುತ್ತಾ ಉಪಯೋಗಿಸಿದರೆ, ಎಲ್ಲಾ ಲೈಟರ್ಗಳೂ ಚೆನ್ನಾಗಿ ಕೆಲಸ ಮಾಡುತ್ತವೆ.
* ಕಬ್ಬಿಣದ ಬಾಣಲೆ, ರೊಟ್ಟಿ ತವ ಉಪಯೋಗಿಸಿ ತೊಳೆದ ನಂತರ ಒರೆಸಿ ಸ್ವಲ್ಪ ಅಡಿಗೆ ಎಣ್ಣೆ ಹಚ್ಚಿಡಿ, ಮತ್ತೊಮ್ಮೆ ಉಪಯೋಗಿಸುವಾಗ ಮೇಲಿಂದ ತೊಳೆದು (ಉಜ್ಜದೆ) ಉಪಯೋಗಿಸಿ. ಚಿಟಿಕೆ ಉಪ್ಪು ಹಾಕಿ ತವ ಮೇಲೆ ಉಜ್ಜಿದರೆ ರೊಟ್ಟಿ ಅಥವಾ ದೋಸೆ ಸಲೀಸಾಗಿ ಎದ್ದು ಬರುತ್ತದೆ.



Click it and Unblock the Notifications











