Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ತರಕಾರಿ ಹೆಚ್ಚುವಾಗ ತರತರ ಉಪಾಯ!

* ಸೀಮೆ ಬದನೆಕಾಯಿಯನ್ನು ಎರಡು ಭಾಗವಾಗಿ ಹೆಚ್ಚಿ, ಒಂದಕ್ಕೊಂದು ಉಜ್ಜಿ, ನೀರಿಗೆ ಹಾಕಿ ತೆಗೆದು ಉಪಯೋಗಿಸಿ. ಇದರಿಂದ ನಿಮ್ಮ ಕೈ ಅಂಟಾಗುವುದನ್ನು ತಡೆಯಬಹುದು.
* ಬೆಣ್ಣೆ ಕಾಯಿಸಿ ಇಳಿಸುವ ಮುನ್ನ ತೊಟ್ಟು ತೆಗೆದ ಒಂದೆರಡು ವೀಳ್ಯದೆಲೆಯನ್ನು ಅದರಲ್ಲಿ ಹಾಕಿ ತೆಗೆದರೆ ತುಪ್ಪ ಸುವಾಸನೆಯುಕ್ತವಾಗುವುದು.
* ದೊಣ್ಣೆ ಮೆಣಸಿನಕಾಯಿಯನ್ನು ಮಧ್ಯದಲ್ಲಿ ಕತ್ತರಿಸಿ, ಒಳಭಾಗವನ್ನು ಚಾಕುವಿನಿಂದ ಹೆರೆದು ಕೊಡವಿದರೆ ಬೀಜಗಳೆಲ್ಲ ಉದುರುತ್ತವೆ. ತಿನ್ನುವಾಗ ಹಲ್ಲಿನ ಮಧ್ಯೆ ಬೀಜ ಸಿಕ್ಕಿಕೊಂಡು ತೊಂದರೆಯಾಗದು.
* ಬದನೆಕಾಯಿ ಹೆಚ್ಚಿ ಕೂಡಲೇ ಉಪ್ಪು ನೀರಿಗೆ ಹಾಕಿದರೆ ಹೋಳುಗಳು ಕಪ್ಪಾಗುವುದಿಲ್ಲ.
* ಈರುಳ್ಳಿ ತುದಿಗಳನ್ನು ಕತ್ತರಿಸಿ, ಎರಡು ಭಾಗ ಮಾಡಿ ಒಂದು ಗಂಟೆ ನೀರಿನಲ್ಲಿ ಹಾಕಿಟ್ಟರೆ ಸಿಪ್ಪೆ ಸುಲಿಯುವುದು ಸುಲಭ. ಕಣ್ಣೂ ಉರಿಯುವುದಿಲ್ಲ.
* ಅನ್ನ ಮಾಡುವಾಗ ಅದಕ್ಕೆ ಒಂದು ಚಮಚ ಎಣ್ಣೆ ಅಥವಾ ಸ್ವಲ್ಪ ನಿಂಬೆರಸ ಹಾಕಿದರೆ, ಅನ್ನ ಉದುರುದುರಾಗುತ್ತದೆ.
* ಒಗ್ಗರಣೆ ಹಾಕುವ ಮೊದಲು ಕಡಲೆಕಾಯಿ ಬೀಜವನ್ನು ಮೊದಲು ಹುರಿದು ತೆಗೆದಿಡಿ. ನಂತರ ಸಾಸಿವೆ, ಕರಿಬೇವು ಇತ್ಯಾದಿಗಳನ್ನು ಹುರಿದು ಕಡಲೆಕಾಯಿ ಬೀಜ ಸೇರಿಸಿದರೆ ಹಸಿ ವಾಸನೆ ಇಲ್ಲದೆ ರುಚಿಯಾಗಿರುವುದು.
* ಹಾಗಲಕಾಯಿಯನ್ನು ಚಿಕ್ಕದಾಗಿ ಹೆಚ್ಚಿ ಅರಿಷಿಣ, ಉಪ್ಪು ಬೆರೆಸಿದ ನೀರಿನಲ್ಲಿ ಹಾಕಿ. ಸ್ವಲ್ಪ ಹೊತ್ತಿನ ನಂತರ ನೀರನ್ನು ಹಿಂಡಿ ತೆಗೆದರೆ ಕಹಿ ಅಂಶ ಇರುವುದಿಲ್ಲ.
* ಚಟ್ನಿ, ಗೊಜ್ಜಿಗೆ ಬಳಸುವ ಹುಣಸೆ ಹಣ್ಣನ್ನು ಮೊದಲು ಸ್ವಲ್ಪ ಹೊತ್ತು ನೀರಿನಲ್ಲಿ ನೆನೆಸಿಡಿ. ರುಬ್ಬಲು ಸುಲಭವಾಗುವುದು.
* ಕರಿಬೇವನ್ನು ಬೇಳೆಯ ಜತೆಯಲ್ಲೇ ಬೇಯಲು ಇಟ್ಟರೆ ಅದರ ಸಾರವೆಲ್ಲ ಸಾರಿಗೆ ಸೇರಿಕೊಳ್ಳುವುದಲ್ಲದೆ ಸುವಾಸನೆಯೂ ಹೆಚ್ಚುವುದು.
* ಹುರುಳಿಕಾಯಿ, ಗೋರಿಕಾಯಿಗಳನ್ನು ಮಾರುಕಟ್ಟೆಯಿಂದ ತಂದ ಕೂಡಲೇ ನಾರು ಬಿಡಿಸಿಟ್ಟರೆ ಕಾಯಿ ಬಲಿಯದು.
* ಹುರುಳಿಕಾಯಿ ಹಾಗೂ ಗೋರಿಕಾಯಿಗಳನ್ನು ಹುರಿಯುವಾಗ ಒಂದು ಚಿಟಿಕೆ ಉಪ್ಪು ಅಥವಾ ಸಕ್ಕರೆ ಹಾಕಿದರೆ ಅದರ ಹಸಿರು ಬಣ್ಣ ಹಾಗೆಯೇ ಉಳಿಯುವುದು.
* ತಾಜಾ ಹಸಿ ಮೆಣಸಿನಕಾಯಿಯ ತೊಟ್ಟು ಬಿಡಿಸಿಟ್ಟರೆ ಅದು ಬೇಗ ಹಣ್ಣಾಗುವುದಿಲ್ಲ.
* ಮಸಾಲೆ ತಯಾರಿಸುವಾಗ ರುಬ್ಬುವ ಖಾರಕ್ಕೆ ಒಂದೆರಡು ಹಸಿ ಟೊಮೇಟೊ ಹಾಕಿ. ಇದರಿಂದ ಸಾರು ಒಳ್ಳೆಯ ಬಣ್ಣ ಪಡೆಯುವುದಲ್ಲದೆ ರುಚಿ ಹೆಚ್ಚುವುದು.
* ಹಸಿ ಮೆಣಸಿನಕಾಯಿ ಖಾರಕ್ಕೆ ಉಪ್ಪಿನ ಜತೆ ಸ್ವಲ್ಪ ನಿಂಬೆರಸವನ್ನೂ ಹಾಕಿ ತಿರುವಿದರೆ ಬಹಳ ದಿನಗಳವರೆಗೂ ತಿನ್ನಲು ಬಳಸಬಹುದು.
* ಹುರುಳಿಕಾಯಿ, ಗೋರಿಕಾಯಿ, ಕ್ಯಾರೆಟ್ಗಳು ಬಾಡಿದ್ದರೆ ಸ್ವಲ್ಪ ಹೊತ್ತು ಉಪ್ಪು ನೀರಿನಲ್ಲಿ ಹಾಕಿಡಿ. ಮತ್ತೆ ಮೊದಲಿನ ತಾಜಾತನ ಮರಳುವುದು.
* ಕೈಗೆ ಸ್ವಲ್ಪ ಕೊಬ್ಬರಿ ಎಣ್ಣೆ ಸವರಿಕೊಂಡು ಬೀಟ್ರೂಟ್ ಹೆಚ್ಚಿದರೆ ಕೈ ಕೆಂಪಾಗದು.
* ಪರಂಗಿ ಹಣ್ಣು ಅಥವಾ ಕಾಯಿ ಹೆಚ್ಚುವಾಗ ಮೊದಲು ಸಿಪ್ಪೆ ತೆಗೆದು ಅನಂತರ ತೊಟ್ಟು ಹಾಗೂ ತುದಿ ತೆಗೆಯಿರಿ. ಇದರಿಂದ ಹಾಲು ಜಿನುಗಿ ಜಾರುವುದು ತಪ್ಪುತ್ತದೆ.
* ಪುದೀನಾ ಚಟ್ನಿ ರುಬ್ಬುವಾಗ ಸ್ವಲ್ಪ ನಿಂಬೆರಸ ಹಾಕಿದರೆ ಚಟ್ನಿಯ ಬಣ್ಣ ಹಸಿರಾಗಿಯೇ ಇರುವುದು.
* ಅಕ್ಕಿರೊಟ್ಟಿ ಮಾಡಲು ಹಿಟ್ಟನ್ನು ಬೇಯಿಸುವಾಗ ಒಂದು ಟೇಬಲ್ ಚಮಚ ಚಿರೋಟಿ ರವೆ ಹಾಕಿದರೆ ರೊಟ್ಟಿಯ ಅಂಚು ಸೀಳುವುದಿಲ್ಲ.



Click it and Unblock the Notifications