Just In
Don't Miss
- News Toilet Photo Viral: ಕಡಿಮೆ ಖರ್ಚಿನಲ್ಲಿ 'ಲೀಕೆಜ್ ಟ್ಯಾಂಕರ್'ನಿಂದ ಟಾಯ್ಲೆಟ್ ನಿರ್ಮಾಣ: ನೀವೂ ಟ್ರೈ ಮಾಡಿ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Movies ರಾಜಕೀಯ ಆಯಾಮ ಬೇಡ, ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್ ; #JusticeForNeha ಎಂದ ರಿಷಬ್ ಶೆಟ್ಟಿ..!
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತರಕಾರಿ ಹೆಚ್ಚುವಾಗ ತರತರ ಉಪಾಯ!
* ಸೀಮೆ ಬದನೆಕಾಯಿಯನ್ನು ಎರಡು ಭಾಗವಾಗಿ ಹೆಚ್ಚಿ, ಒಂದಕ್ಕೊಂದು ಉಜ್ಜಿ, ನೀರಿಗೆ ಹಾಕಿ ತೆಗೆದು ಉಪಯೋಗಿಸಿ. ಇದರಿಂದ ನಿಮ್ಮ ಕೈ ಅಂಟಾಗುವುದನ್ನು ತಡೆಯಬಹುದು.
* ಬೆಣ್ಣೆ ಕಾಯಿಸಿ ಇಳಿಸುವ ಮುನ್ನ ತೊಟ್ಟು ತೆಗೆದ ಒಂದೆರಡು ವೀಳ್ಯದೆಲೆಯನ್ನು ಅದರಲ್ಲಿ ಹಾಕಿ ತೆಗೆದರೆ ತುಪ್ಪ ಸುವಾಸನೆಯುಕ್ತವಾಗುವುದು.
* ದೊಣ್ಣೆ ಮೆಣಸಿನಕಾಯಿಯನ್ನು ಮಧ್ಯದಲ್ಲಿ ಕತ್ತರಿಸಿ, ಒಳಭಾಗವನ್ನು ಚಾಕುವಿನಿಂದ ಹೆರೆದು ಕೊಡವಿದರೆ ಬೀಜಗಳೆಲ್ಲ ಉದುರುತ್ತವೆ. ತಿನ್ನುವಾಗ ಹಲ್ಲಿನ ಮಧ್ಯೆ ಬೀಜ ಸಿಕ್ಕಿಕೊಂಡು ತೊಂದರೆಯಾಗದು.
* ಬದನೆಕಾಯಿ ಹೆಚ್ಚಿ ಕೂಡಲೇ ಉಪ್ಪು ನೀರಿಗೆ ಹಾಕಿದರೆ ಹೋಳುಗಳು ಕಪ್ಪಾಗುವುದಿಲ್ಲ.
* ಈರುಳ್ಳಿ ತುದಿಗಳನ್ನು ಕತ್ತರಿಸಿ, ಎರಡು ಭಾಗ ಮಾಡಿ ಒಂದು ಗಂಟೆ ನೀರಿನಲ್ಲಿ ಹಾಕಿಟ್ಟರೆ ಸಿಪ್ಪೆ ಸುಲಿಯುವುದು ಸುಲಭ. ಕಣ್ಣೂ ಉರಿಯುವುದಿಲ್ಲ.
* ಅನ್ನ ಮಾಡುವಾಗ ಅದಕ್ಕೆ ಒಂದು ಚಮಚ ಎಣ್ಣೆ ಅಥವಾ ಸ್ವಲ್ಪ ನಿಂಬೆರಸ ಹಾಕಿದರೆ, ಅನ್ನ ಉದುರುದುರಾಗುತ್ತದೆ.
* ಒಗ್ಗರಣೆ ಹಾಕುವ ಮೊದಲು ಕಡಲೆಕಾಯಿ ಬೀಜವನ್ನು ಮೊದಲು ಹುರಿದು ತೆಗೆದಿಡಿ. ನಂತರ ಸಾಸಿವೆ, ಕರಿಬೇವು ಇತ್ಯಾದಿಗಳನ್ನು ಹುರಿದು ಕಡಲೆಕಾಯಿ ಬೀಜ ಸೇರಿಸಿದರೆ ಹಸಿ ವಾಸನೆ ಇಲ್ಲದೆ ರುಚಿಯಾಗಿರುವುದು.
* ಹಾಗಲಕಾಯಿಯನ್ನು ಚಿಕ್ಕದಾಗಿ ಹೆಚ್ಚಿ ಅರಿಷಿಣ, ಉಪ್ಪು ಬೆರೆಸಿದ ನೀರಿನಲ್ಲಿ ಹಾಕಿ. ಸ್ವಲ್ಪ ಹೊತ್ತಿನ ನಂತರ ನೀರನ್ನು ಹಿಂಡಿ ತೆಗೆದರೆ ಕಹಿ ಅಂಶ ಇರುವುದಿಲ್ಲ.
* ಚಟ್ನಿ, ಗೊಜ್ಜಿಗೆ ಬಳಸುವ ಹುಣಸೆ ಹಣ್ಣನ್ನು ಮೊದಲು ಸ್ವಲ್ಪ ಹೊತ್ತು ನೀರಿನಲ್ಲಿ ನೆನೆಸಿಡಿ. ರುಬ್ಬಲು ಸುಲಭವಾಗುವುದು.
* ಕರಿಬೇವನ್ನು ಬೇಳೆಯ ಜತೆಯಲ್ಲೇ ಬೇಯಲು ಇಟ್ಟರೆ ಅದರ ಸಾರವೆಲ್ಲ ಸಾರಿಗೆ ಸೇರಿಕೊಳ್ಳುವುದಲ್ಲದೆ ಸುವಾಸನೆಯೂ ಹೆಚ್ಚುವುದು.
* ಹುರುಳಿಕಾಯಿ, ಗೋರಿಕಾಯಿಗಳನ್ನು ಮಾರುಕಟ್ಟೆಯಿಂದ ತಂದ ಕೂಡಲೇ ನಾರು ಬಿಡಿಸಿಟ್ಟರೆ ಕಾಯಿ ಬಲಿಯದು.
* ಹುರುಳಿಕಾಯಿ ಹಾಗೂ ಗೋರಿಕಾಯಿಗಳನ್ನು ಹುರಿಯುವಾಗ ಒಂದು ಚಿಟಿಕೆ ಉಪ್ಪು ಅಥವಾ ಸಕ್ಕರೆ ಹಾಕಿದರೆ ಅದರ ಹಸಿರು ಬಣ್ಣ ಹಾಗೆಯೇ ಉಳಿಯುವುದು.
* ತಾಜಾ ಹಸಿ ಮೆಣಸಿನಕಾಯಿಯ ತೊಟ್ಟು ಬಿಡಿಸಿಟ್ಟರೆ ಅದು ಬೇಗ ಹಣ್ಣಾಗುವುದಿಲ್ಲ.
* ಮಸಾಲೆ ತಯಾರಿಸುವಾಗ ರುಬ್ಬುವ ಖಾರಕ್ಕೆ ಒಂದೆರಡು ಹಸಿ ಟೊಮೇಟೊ ಹಾಕಿ. ಇದರಿಂದ ಸಾರು ಒಳ್ಳೆಯ ಬಣ್ಣ ಪಡೆಯುವುದಲ್ಲದೆ ರುಚಿ ಹೆಚ್ಚುವುದು.
* ಹಸಿ ಮೆಣಸಿನಕಾಯಿ ಖಾರಕ್ಕೆ ಉಪ್ಪಿನ ಜತೆ ಸ್ವಲ್ಪ ನಿಂಬೆರಸವನ್ನೂ ಹಾಕಿ ತಿರುವಿದರೆ ಬಹಳ ದಿನಗಳವರೆಗೂ ತಿನ್ನಲು ಬಳಸಬಹುದು.
* ಹುರುಳಿಕಾಯಿ, ಗೋರಿಕಾಯಿ, ಕ್ಯಾರೆಟ್ಗಳು ಬಾಡಿದ್ದರೆ ಸ್ವಲ್ಪ ಹೊತ್ತು ಉಪ್ಪು ನೀರಿನಲ್ಲಿ ಹಾಕಿಡಿ. ಮತ್ತೆ ಮೊದಲಿನ ತಾಜಾತನ ಮರಳುವುದು.
* ಕೈಗೆ ಸ್ವಲ್ಪ ಕೊಬ್ಬರಿ ಎಣ್ಣೆ ಸವರಿಕೊಂಡು ಬೀಟ್ರೂಟ್ ಹೆಚ್ಚಿದರೆ ಕೈ ಕೆಂಪಾಗದು.
* ಪರಂಗಿ ಹಣ್ಣು ಅಥವಾ ಕಾಯಿ ಹೆಚ್ಚುವಾಗ ಮೊದಲು ಸಿಪ್ಪೆ ತೆಗೆದು ಅನಂತರ ತೊಟ್ಟು ಹಾಗೂ ತುದಿ ತೆಗೆಯಿರಿ. ಇದರಿಂದ ಹಾಲು ಜಿನುಗಿ ಜಾರುವುದು ತಪ್ಪುತ್ತದೆ.
* ಪುದೀನಾ ಚಟ್ನಿ ರುಬ್ಬುವಾಗ ಸ್ವಲ್ಪ ನಿಂಬೆರಸ ಹಾಕಿದರೆ ಚಟ್ನಿಯ ಬಣ್ಣ ಹಸಿರಾಗಿಯೇ ಇರುವುದು.
*
ಅಕ್ಕಿರೊಟ್ಟಿ
ಮಾಡಲು
ಹಿಟ್ಟನ್ನು
ಬೇಯಿಸುವಾಗ
ಒಂದು
ಟೇಬಲ್
ಚಮಚ
ಚಿರೋಟಿ
ರವೆ
ಹಾಕಿದರೆ
ರೊಟ್ಟಿಯ
ಅಂಚು
ಸೀಳುವುದಿಲ್ಲ.