Latest Updates
-
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ?
ತರಕಾರಿ ಹೆಚ್ಚುವಾಗ ತರತರ ಉಪಾಯ!

* ಸೀಮೆ ಬದನೆಕಾಯಿಯನ್ನು ಎರಡು ಭಾಗವಾಗಿ ಹೆಚ್ಚಿ, ಒಂದಕ್ಕೊಂದು ಉಜ್ಜಿ, ನೀರಿಗೆ ಹಾಕಿ ತೆಗೆದು ಉಪಯೋಗಿಸಿ. ಇದರಿಂದ ನಿಮ್ಮ ಕೈ ಅಂಟಾಗುವುದನ್ನು ತಡೆಯಬಹುದು.
* ಬೆಣ್ಣೆ ಕಾಯಿಸಿ ಇಳಿಸುವ ಮುನ್ನ ತೊಟ್ಟು ತೆಗೆದ ಒಂದೆರಡು ವೀಳ್ಯದೆಲೆಯನ್ನು ಅದರಲ್ಲಿ ಹಾಕಿ ತೆಗೆದರೆ ತುಪ್ಪ ಸುವಾಸನೆಯುಕ್ತವಾಗುವುದು.
* ದೊಣ್ಣೆ ಮೆಣಸಿನಕಾಯಿಯನ್ನು ಮಧ್ಯದಲ್ಲಿ ಕತ್ತರಿಸಿ, ಒಳಭಾಗವನ್ನು ಚಾಕುವಿನಿಂದ ಹೆರೆದು ಕೊಡವಿದರೆ ಬೀಜಗಳೆಲ್ಲ ಉದುರುತ್ತವೆ. ತಿನ್ನುವಾಗ ಹಲ್ಲಿನ ಮಧ್ಯೆ ಬೀಜ ಸಿಕ್ಕಿಕೊಂಡು ತೊಂದರೆಯಾಗದು.
* ಬದನೆಕಾಯಿ ಹೆಚ್ಚಿ ಕೂಡಲೇ ಉಪ್ಪು ನೀರಿಗೆ ಹಾಕಿದರೆ ಹೋಳುಗಳು ಕಪ್ಪಾಗುವುದಿಲ್ಲ.
* ಈರುಳ್ಳಿ ತುದಿಗಳನ್ನು ಕತ್ತರಿಸಿ, ಎರಡು ಭಾಗ ಮಾಡಿ ಒಂದು ಗಂಟೆ ನೀರಿನಲ್ಲಿ ಹಾಕಿಟ್ಟರೆ ಸಿಪ್ಪೆ ಸುಲಿಯುವುದು ಸುಲಭ. ಕಣ್ಣೂ ಉರಿಯುವುದಿಲ್ಲ.
* ಅನ್ನ ಮಾಡುವಾಗ ಅದಕ್ಕೆ ಒಂದು ಚಮಚ ಎಣ್ಣೆ ಅಥವಾ ಸ್ವಲ್ಪ ನಿಂಬೆರಸ ಹಾಕಿದರೆ, ಅನ್ನ ಉದುರುದುರಾಗುತ್ತದೆ.
* ಒಗ್ಗರಣೆ ಹಾಕುವ ಮೊದಲು ಕಡಲೆಕಾಯಿ ಬೀಜವನ್ನು ಮೊದಲು ಹುರಿದು ತೆಗೆದಿಡಿ. ನಂತರ ಸಾಸಿವೆ, ಕರಿಬೇವು ಇತ್ಯಾದಿಗಳನ್ನು ಹುರಿದು ಕಡಲೆಕಾಯಿ ಬೀಜ ಸೇರಿಸಿದರೆ ಹಸಿ ವಾಸನೆ ಇಲ್ಲದೆ ರುಚಿಯಾಗಿರುವುದು.
* ಹಾಗಲಕಾಯಿಯನ್ನು ಚಿಕ್ಕದಾಗಿ ಹೆಚ್ಚಿ ಅರಿಷಿಣ, ಉಪ್ಪು ಬೆರೆಸಿದ ನೀರಿನಲ್ಲಿ ಹಾಕಿ. ಸ್ವಲ್ಪ ಹೊತ್ತಿನ ನಂತರ ನೀರನ್ನು ಹಿಂಡಿ ತೆಗೆದರೆ ಕಹಿ ಅಂಶ ಇರುವುದಿಲ್ಲ.
* ಚಟ್ನಿ, ಗೊಜ್ಜಿಗೆ ಬಳಸುವ ಹುಣಸೆ ಹಣ್ಣನ್ನು ಮೊದಲು ಸ್ವಲ್ಪ ಹೊತ್ತು ನೀರಿನಲ್ಲಿ ನೆನೆಸಿಡಿ. ರುಬ್ಬಲು ಸುಲಭವಾಗುವುದು.
* ಕರಿಬೇವನ್ನು ಬೇಳೆಯ ಜತೆಯಲ್ಲೇ ಬೇಯಲು ಇಟ್ಟರೆ ಅದರ ಸಾರವೆಲ್ಲ ಸಾರಿಗೆ ಸೇರಿಕೊಳ್ಳುವುದಲ್ಲದೆ ಸುವಾಸನೆಯೂ ಹೆಚ್ಚುವುದು.
* ಹುರುಳಿಕಾಯಿ, ಗೋರಿಕಾಯಿಗಳನ್ನು ಮಾರುಕಟ್ಟೆಯಿಂದ ತಂದ ಕೂಡಲೇ ನಾರು ಬಿಡಿಸಿಟ್ಟರೆ ಕಾಯಿ ಬಲಿಯದು.
* ಹುರುಳಿಕಾಯಿ ಹಾಗೂ ಗೋರಿಕಾಯಿಗಳನ್ನು ಹುರಿಯುವಾಗ ಒಂದು ಚಿಟಿಕೆ ಉಪ್ಪು ಅಥವಾ ಸಕ್ಕರೆ ಹಾಕಿದರೆ ಅದರ ಹಸಿರು ಬಣ್ಣ ಹಾಗೆಯೇ ಉಳಿಯುವುದು.
* ತಾಜಾ ಹಸಿ ಮೆಣಸಿನಕಾಯಿಯ ತೊಟ್ಟು ಬಿಡಿಸಿಟ್ಟರೆ ಅದು ಬೇಗ ಹಣ್ಣಾಗುವುದಿಲ್ಲ.
* ಮಸಾಲೆ ತಯಾರಿಸುವಾಗ ರುಬ್ಬುವ ಖಾರಕ್ಕೆ ಒಂದೆರಡು ಹಸಿ ಟೊಮೇಟೊ ಹಾಕಿ. ಇದರಿಂದ ಸಾರು ಒಳ್ಳೆಯ ಬಣ್ಣ ಪಡೆಯುವುದಲ್ಲದೆ ರುಚಿ ಹೆಚ್ಚುವುದು.
* ಹಸಿ ಮೆಣಸಿನಕಾಯಿ ಖಾರಕ್ಕೆ ಉಪ್ಪಿನ ಜತೆ ಸ್ವಲ್ಪ ನಿಂಬೆರಸವನ್ನೂ ಹಾಕಿ ತಿರುವಿದರೆ ಬಹಳ ದಿನಗಳವರೆಗೂ ತಿನ್ನಲು ಬಳಸಬಹುದು.
* ಹುರುಳಿಕಾಯಿ, ಗೋರಿಕಾಯಿ, ಕ್ಯಾರೆಟ್ಗಳು ಬಾಡಿದ್ದರೆ ಸ್ವಲ್ಪ ಹೊತ್ತು ಉಪ್ಪು ನೀರಿನಲ್ಲಿ ಹಾಕಿಡಿ. ಮತ್ತೆ ಮೊದಲಿನ ತಾಜಾತನ ಮರಳುವುದು.
* ಕೈಗೆ ಸ್ವಲ್ಪ ಕೊಬ್ಬರಿ ಎಣ್ಣೆ ಸವರಿಕೊಂಡು ಬೀಟ್ರೂಟ್ ಹೆಚ್ಚಿದರೆ ಕೈ ಕೆಂಪಾಗದು.
* ಪರಂಗಿ ಹಣ್ಣು ಅಥವಾ ಕಾಯಿ ಹೆಚ್ಚುವಾಗ ಮೊದಲು ಸಿಪ್ಪೆ ತೆಗೆದು ಅನಂತರ ತೊಟ್ಟು ಹಾಗೂ ತುದಿ ತೆಗೆಯಿರಿ. ಇದರಿಂದ ಹಾಲು ಜಿನುಗಿ ಜಾರುವುದು ತಪ್ಪುತ್ತದೆ.
* ಪುದೀನಾ ಚಟ್ನಿ ರುಬ್ಬುವಾಗ ಸ್ವಲ್ಪ ನಿಂಬೆರಸ ಹಾಕಿದರೆ ಚಟ್ನಿಯ ಬಣ್ಣ ಹಸಿರಾಗಿಯೇ ಇರುವುದು.
* ಅಕ್ಕಿರೊಟ್ಟಿ ಮಾಡಲು ಹಿಟ್ಟನ್ನು ಬೇಯಿಸುವಾಗ ಒಂದು ಟೇಬಲ್ ಚಮಚ ಚಿರೋಟಿ ರವೆ ಹಾಕಿದರೆ ರೊಟ್ಟಿಯ ಅಂಚು ಸೀಳುವುದಿಲ್ಲ.



Click it and Unblock the Notifications