Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದೈನಂದಿನ ತರಕಾರಿ ಬಳಸುವ ಒಳಗುಟ್ಟುಗಳು

* ಸುಶೀಲಾ ಗೋಪಾಲ್, ಬೆಂಗಳೂರು
ತರಕಾರಿ ಹಾಗೂ ಆಹಾರ ಸಾಮಗ್ರಿಗಳನ್ನು ಬಳಸುವ ಸುಲಭ ವಿಧಾನಗಳನ್ನು ಮಹಿಳೆಯರು ತಿಳಿದುಕೊಂಡರೆ ಸಮಯವನ್ನು ಉಳಿಸಿಕೊಂಡು ಇನ್ನಿತರೇ ಕಾರ್ಯದಲ್ಲಿ ತೊಡಗಿಸಿಕೊಳ್ಳಬಹುದು. ಅಂಥ ಕೆಲವು ಸುಲಭ ಉಪಾಯಗಳು ನಿಮಗೆ ಗೊತ್ತಾ ?
* ಸೀಮೆ ಬದನೆಕಾಯಿಯನ್ನು ಎರಡು ಭಾಗವಾಗಿ ಹೆಚ್ಚಿ, ಒಂದಕ್ಕೊಂದು ಉಜ್ಜಿ, ನೀರಿಗೆ ಹಾಕಿ ತೆಗೆದು ಉಪಯೋಗಿಸಿ. ಇದರಿಂದ ನಿಮ್ಮ ಕೈ ಅಂಟಾಗುವುದನ್ನು ತಡೆಯಬಹುದು.
* ಬೆಣ್ಣೆ ಕಾಯಿಸಿ ಇಳಿಸುವ ಮುನ್ನ ತೊಟ್ಟು ತೆಗೆದ ಒಂದೆರಡು ವೀಳ್ಯದೆಲೆಯನ್ನು ಅದರಲ್ಲಿ ಹಾಕಿ ತೆಗೆದರೆ ತುಪ್ಪ ಸುವಾಸನೆಯುಕ್ತವಾಗುವುದು.
* ದೊಣ್ಣೆ ಮೆಣಸಿನಕಾಯಿಯನ್ನು ಮಧ್ಯದಲ್ಲಿ ಕತ್ತರಿಸಿ, ಒಳಭಾಗವನ್ನು ಚಾಕುವಿನಿಂದ ಹೆರೆದು ಕೊಡವಿದರೆ ಬೀಜಗಳೆಲ್ಲ ಉದುರುತ್ತವೆ. ತಿನ್ನುವಾಗ ಹಲ್ಲಿನ ಮಧ್ಯೆ ಬೀಜ ಸಿಕ್ಕಿಕೊಂಡು ತೊಂದರೆಯಾಗದು.
* ಬದನೆಕಾಯಿ ಹೆಚ್ಚಿ ಕೂಡಲೇ ಉಪ್ಪು ನೀರಿಗೆ ಹಾಕಿದರೆ ಹೋಳುಗಳು ಕಪ್ಪಾಗುವುದಿಲ್ಲ.
* ಈರುಳ್ಳಿ ತುದಿಗಳನ್ನು ಕತ್ತರಿಸಿ, ಎರಡು ಭಾಗ ಮಾಡಿ ಒಂದು ಗಂಟೆ ನೀರಿನಲ್ಲಿ ಹಾಕಿಟ್ಟರೆ ಸಿಪ್ಪೆ ಸುಲಿಯುವುದು ಸುಲಭ. ಕಣ್ಣೂ ಉರಿಯುವುದಿಲ್ಲ.
* ಅನ್ನ ಮಾಡುವಾಗ ಅದಕ್ಕೆ ಒಂದು ಚಮಚ ಎಣ್ಣೆ ಅಥವಾ ಸ್ವಲ್ಪ ನಿಂಬೆರಸ ಹಾಕಿದರೆ, ಅನ್ನ ಉದುರುದುರಾಗುತ್ತದೆ.
* ಒಗ್ಗರಣೆ ಹಾಕುವ ಮೊದಲು ಕಡಲೆಕಾಯಿ ಬೀಜವನ್ನು ಮೊದಲು ಹುರಿದು ತೆಗೆದಿಡಿ. ನಂತರ ಸಾಸಿವೆ, ಕರಿಬೇವು ಇತ್ಯಾದಿಗಳನ್ನು ಹುರಿದು ಕಡಲೆಕಾಯಿ ಬೀಜ ಸೇರಿಸಿದರೆ ಹಸಿ ವಾಸನೆ ಇಲ್ಲದೆ ರುಚಿಯಾಗಿರುವುದು.
* ಹಾಗಲಕಾಯಿಯನ್ನು ಚಿಕ್ಕದಾಗಿ ಹೆಚ್ಚಿ ಅರಿಷಿಣ, ಉಪ್ಪು ಬೆರೆಸಿದ ನೀರಿನಲ್ಲಿ ಹಾಕಿ. ಸ್ವಲ್ಪ ಹೊತ್ತಿನ ನಂತರ ನೀರನ್ನು ಹಿಂಡಿ ತೆಗೆದರೆ ಕಹಿ ಅಂಶ ಇರುವುದಿಲ್ಲ.
* ಚಟ್ನಿ, ಗೊಜ್ಜಿಗೆ ಬಳಸುವ ಹುಣಸೆ ಹಣ್ಣನ್ನು ಮೊದಲು ಸ್ವಲ್ಪ ಹೊತ್ತು ನೀರಿನಲ್ಲಿ ನೆನೆಸಿಡಿ. ರುಬ್ಬಲು ಸುಲಭವಾಗುವುದು.
* ಕರಿಬೇವನ್ನು ಬೇಳೆಯ ಜತೆಯಲ್ಲೇ ಬೇಯಲು ಇಟ್ಟರೆ ಅದರ ಸಾರವೆಲ್ಲ ಸಾರಿಗೆ ಸೇರಿಕೊಳ್ಳುವುದಲ್ಲದೆ ಸುವಾಸನೆಯೂ ಹೆಚ್ಚುವುದು.
* ಹುರುಳಿಕಾಯಿ, ಗೋರಿಕಾಯಿಗಳನ್ನು ಮಾರುಕಟ್ಟೆಯಿಂದ ತಂದ ಕೂಡಲೇ ನಾರು ಬಿಡಿಸಿಟ್ಟರೆ ಕಾಯಿ ಬಲಿಯದು.
* ಹುರುಳಿಕಾಯಿ ಹಾಗೂ ಗೋರಿಕಾಯಿಗಳನ್ನು ಹುರಿಯುವಾಗ ಒಂದು ಚಿಟಿಕೆ ಉಪ್ಪು ಅಥವಾ ಸಕ್ಕರೆ ಹಾಕಿದರೆ ಅದರ ಹಸಿರು ಬಣ್ಣ ಹಾಗೆಯೇ ಉಳಿಯುವುದು.
* ತಾಜಾ ಹಸಿ ಮೆಣಸಿನಕಾಯಿಯ ತೊಟ್ಟು ಬಿಡಿಸಿಟ್ಟರೆ ಅದು ಬೇಗ ಹಣ್ಣಾಗುವುದಿಲ್ಲ.
* ಮಸಾಲೆ ತಯಾರಿಸುವಾಗ ರುಬ್ಬುವ ಖಾರಕ್ಕೆ ಒಂದೆರಡು ಹಸಿ ಟೊಮೇಟೊ ಹಾಕಿ. ಇದರಿಂದ ಸಾರು ಒಳ್ಳೆಯ ಬಣ್ಣ ಪಡೆಯುವುದಲ್ಲದೆ ರುಚಿ ಹೆಚ್ಚುವುದು.
* ಹಸಿ ಮೆಣಸಿನಕಾಯಿ ಖಾರಕ್ಕೆ ಉಪ್ಪಿನ ಜತೆ ಸ್ವಲ್ಪ ನಿಂಬೆರಸವನ್ನೂ ಹಾಕಿ ತಿರುವಿದರೆ ಬಹಳ ದಿನಗಳವರೆಗೂ ತಿನ್ನಲು ಬಳಸಬಹುದು.
* ಹುರುಳಿಕಾಯಿ, ಗೋರಿಕಾಯಿ, ಕ್ಯಾರೆಟ್ಗಳು ಬಾಡಿದ್ದರೆ ಸ್ವಲ್ಪ ಹೊತ್ತು ಉಪ್ಪು ನೀರಿನಲ್ಲಿ ಹಾಕಿಡಿ. ಮತ್ತೆ ಮೊದಲಿನ ತಾಜಾತನ ಮರಳುವುದು.
* ಕೈಗೆ ಸ್ವಲ್ಪ ಕೊಬ್ಬರಿ ಎಣ್ಣೆ ಸವರಿಕೊಂಡು ಬೀಟ್ರೂಟ್ ಹೆಚ್ಚಿದರೆ ಕೈ ಕೆಂಪಾಗದು.
* ಪರಂಗಿ ಹಣ್ಣು ಅಥವಾ ಕಾಯಿ ಹೆಚ್ಚುವಾಗ ಮೊದಲು ಸಿಪ್ಪೆ ತೆಗೆದು ಅನಂತರ ತೊಟ್ಟು ಹಾಗೂ ತುದಿ ತೆಗೆಯಿರಿ. ಇದರಿಂದ ಹಾಲು ಜಿನುಗಿ ಜಾರುವುದು ತಪ್ಪುತ್ತದೆ.
* ಪುದೀನಾ ಚಟ್ನಿ ರುಬ್ಬುವಾಗ ಸ್ವಲ್ಪ ನಿಂಬೆರಸ ಹಾಕಿದರೆ ಚಟ್ನಿಯ ಬಣ್ಣ ಹಸಿರಾಗಿಯೇ ಇರುವುದು.
* ಅಕ್ಕಿರೊಟ್ಟಿ ಮಾಡಲು ಹಿಟ್ಟನ್ನು ಬೇಯಿಸುವಾಗ ಒಂದು ಟೇಬಲ್ ಚಮಚ ಚಿರೋಟಿ ರವೆ ಹಾಕಿದರೆ ರೊಟ್ಟಿಯ ಅಂಚು ಸೀಳುವುದಿಲ್ಲ.



Click it and Unblock the Notifications