Latest Updates
-
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್!
ಪಾಕ ಪ್ರವೀಣರಾಗಲು ತಿಳಿದಿರಲಿ ಈ ಉಪಾಯಗಳು

ಅಡುಗೆಗೆ ಕೆಲ ಸಲಹೆಗಳು:
1. ಅಕ್ಕಿ ಮತ್ತು ಉದ್ದಿನ ಬೇಳೆಯನ್ನು ನೀರಿನಲ್ಲಿ ನೆನೆ ಹಾಕಿ ನಂತರ ತೊಳೆದು ಅರೆಯುವುದಕ್ಕಿಂತ, ಚೆನ್ನಾಗಿ ತೊಳೆದು ನಂತರ ನೀರಿನಲ್ಲಿ ನೆನೆ ಹಾಕಿದರೆ ರುಬ್ಬುವಾಗ ಅದೇ ನೀರನ್ನು ಬಳಸಬಹುದು. ಏಕೆಂದರೆ ಅಕ್ಕಿ, ಕಾಳುಗಳನ್ನು ನೆನೆ ಹಾಕಿದ ನೀರನಲ್ಲಿ ವಿಟಮಿನ್ ಗಳಿರುತ್ತವೆ. ತೊಳೆಯದಿದ್ದರೆ ಆ ನೀರು ಬಿಸಾಡುವುದರಿಂದ ವಿಟಮಿನ್ ಗಳು ನಷ್ಟವಾಗುತ್ತದೆ.
2. ಅಡುಗೆಯಲ್ಲಿ ಉಪ್ಪು ಜಾಸ್ತಿಯಾಗಿದ್ದರೆ ಆಲುಗೆಡ್ಡೆ ಅಥವಾ ಟೊಮೆಟೊ ಕತ್ತರಿಸಿ ಆ ಅಡುಗೆಗೆ ಹಾಕಿದರೆ ಅಥವಾ ಒಂದು ಚಮಚ ಸಕ್ಕರೆ ಸೇರಿಸಿದರೆ ಉಪ್ಪು ಕಡಿಮೆಯಾಗುತ್ತದೆ.
3. ವಡೆ ಮಾಡುವಾಗ ಹಿಟ್ಟು ನೀರಾಗಿದ್ದರೆ ಎಣ್ಣೆಯಲ್ಲಿ ಹಾಕುವಾಗ ಸಿಡಿಯುತ್ತದೆ. ಆದ್ದರಿಂದ ಈ ರೀತಿ ಉಂಟಾದಾಗ ಸ್ವಲ್ಪ ತುಪ್ಪ ಸೇರಿಸಿದರೆ ಸಿಡಿಯುವುದಿಲ್ಲ.
4. ಮಾಂಸಾಹಾರ ಮಾಡುವಾಗ ಮಾಂಸ ಸ್ವಲ್ಪ ಬೆಂದ ಮೇಲೆ ಉಪ್ಪು ಹಾಕಿ, ಅದರಲ್ಲೂ ಉಪ್ಪು ಸ್ವಲ್ಪ ಕಮ್ಮಿ ಹಾಕಬೇಕು. ಬೆಂದ ನಂತರ ಉಪ್ಪು ನೋಡಿ ಬೇಕಿದ್ದರೆ ಸ್ವಲ್ಪ ಸೇರಿಸಬೇಕು.
5. ಗಟ್ಟಿಯಾದ ಗ್ರೇವಿ ಅಥವಾ ಸೂಪ್ ಸ್ವಲ್ಪ ಗಟ್ಟಿಯಾಗಿ ಮಾಡುವುದಾದರೆ ಸ್ವಲ್ಪ ಜೋಳದ ಹಿಟ್ಟು ಸೇರಿಸಬೇಕು. ಇದನ್ನು ಹಾಗೇ ಹಾಕುವುದಕ್ಕಿಂತ ಸ್ವಲ್ಪ ನೀರು ಹಾಕಿ ಮಿಶ್ರ ಮಾಡಿ ನಂತರ ಹಾಕುವುದು ಒಳ್ಳೆಯದು.
6. ಪಾಸ್ತಾ ತಯಾರಿಸುವಾಗ ಬೇಯಿಸುವ ನೀರಿಗೆ ಉಪ್ಪು ಹಾಕಿದರೆ ಒಳ್ಳೆಯದು. ಈ ರೀತಿ ಮಾಡಿದರೆ ಮಾತ್ರ ಪಾಸ್ತಾಕ್ಕೆ ಸ್ವಲ್ಪ ಉಪ್ಪು ಹಿಡಿಯುತ್ತದೆ. ನೀರು ಕುದಿ ಬಂದ ನಂತರ ಉಪ್ಪು ಸೇರಿಸಬೇಕು. ಮೊದಲೇ ಸೇರಿಸಿದರೆ ನೀರು ಕುದಿ ಬರಲು ತುಂಬಾ ಸಮಯ ತೆಗೆದುಕೊಳ್ಳುತ್ತದೆ.
7. ಅನ್ನ ಬೆಂದ ನಂತರ ಬಿಡಿಬೊಡಯಾಗಿ ಇರಬೇಕೆಂದರೆ ಅಕ್ಕಿಯನ್ನು ತೊಳೆದು 10 ನಿಮಿಷ ನೀರಿನಲ್ಲಿ ನೆನೆಹಾಕ ಬೇಕು. ನಂತರ ಬೇಯಿಸಬೇಕು. ಅನ್ನ ಬೇಯಿಸುವಾಗ ಒಂದು ಚಮಚ ಎಣ್ಣೆ ಹಾಕಿದರೆ ಅನ್ನ ಒಂದಕ್ಕೊಂದು ಅಂಟುವುದಿಲ್ಲ.
8. ಕರಿದ ತಿಂಡಿಗಳನ್ನು ತಯಾರಿಸುವಾಗ ಎಣ್ಣೆ ತುಂಬಾ ನೊರೆ ಬಂದು ಬಾಣಲೆಯಿಂದ ಹೊರಚೆಲ್ಲದಂತೆ ತಡೆಯಲು ಎಣ್ಣೆ ಕುದಿಯುವಾಗ ಸ್ವಲ್ಪ ಹುಣಸೆ ಹಣ್ಣು ಹಾಕಿದರೆ ಸಾಕು.
9. ಮೃದುವಾದ ಇಡ್ಲಿ ಬೇಕೆಂದರೆ ಕಲೆಸಿಟ್ಟ ಹಿಟ್ಟನ್ನು ಪಾತ್ರೆಗೆ ಹಾಕಿ ಬೇಯಿಸುವ ಮೊದಲು ಮತ್ತೊಮ್ಮೆ ಕದಡಬಾರದು. ಏಕೆಂದರೆ ಇಡ್ಲಿ ಹಿಟ್ಟನ್ನು ಕಲೆಸಿ 8-10 ಗಂಟೆ ಇಟ್ಟಾಗ ಹಿಟ್ಟಿನಲ್ಲಿ ಗುಳ್ಳೆಗಳಲ್ಲಿ ಗಾಳಿ ಸೇರಿಕೊಂಡಿರುತ್ತದೆ. ಆದ್ದರಿಂದ ಹಿಟ್ಟನ್ನು ಕದಡದೆ ಪಾತ್ರೆಗೆ ಹಾಕಿ ಬೇಯಿಸಿದರೆ ಹಿಟ್ಟು ಮೃದುವಾಗುತ್ತದೆ.
10. ಈರುಳ್ಳಿ ಕತ್ತರಿಸುವಾಗ ಕಣ್ಣಿನಲ್ಲಿ ನೀರು ಬರದಿರಲು ಈರುಳ್ಳಿಯನ್ನು ನೀರಿನಲ್ಲಿ ಹಾಕಿ ಅಥವಾ ಫ್ರಿಜ್ ನಲ್ಲಿಟ್ಟು ಕತ್ತರಿಸಬೇಕು.



Click it and Unblock the Notifications