Latest Updates
-
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ -
ಬಿಸಿಲ ಬೇಗೆಯಿಂದ ಪಾರಾಗಲು ಮನೆಯನ್ನು ತಂಪಾಗಿರಿಸುವ ಅದ್ಭುತ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಪಾನೀಯಗಳೇ ಮದ್ದು! -
ಬಿಸಿಲ ಬೇಗೆಯಿಂದ ಪಾರಾಗಲು ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ -
ಬಿಸಿಲ ಬೇಗೆಯಿಂದ ಪಾರಾಗಲು ನಿಮ್ಮ ವ್ಯಾಯಾಮದ ಸಮಯ ಬದಲಾಯಿಸಿ
ಕೆಮ್ಮು, ಶೀತ ಶಮನ ಮಾಡುವ ತುಳಸಿ ಕಷಾಯ ರೆಸಿಪಿ
ಮಳೆಗಾಲದಲ್ಲಿ ಶೀತ, ಗಂಟಲು ಕೆರೆತ, ಕೆಮ್ಮು ಈ ರೀತಿಯ ಸಮಸ್ಯೆಗಳು ಕಂಡು ಬರುವುದು ಸಹಜ. ಇಂಥ ಸಮಸ್ಯೆ ಕಂಡು ಬಂದರೆ ಅದಕ್ಕೆ ಕಷಾಯ ಮಾಡಿ ಕುಡಿದರೆ ಆರಾಮ ಅನಿಸುವುದು. ಅಲ್ಲದೆ ಈ ರೀತಿಯ ಕಷಾಯ ಎರಡು ವರ್ಷದ ಮೇಲಿನ ಮಕ್ಕಳಿಗೂ ಮಾಡಿ ಕೊಡಬಹುದು. ಇನ್ನು ಕೆಮ್ಮು, ಶೀತ ಏನೂ ಇಲ್ಲದಿದ್ದರೂ ವಾರಕ್ಕೆ ಒಂದೆರಡು ಬಾರಿ ಈ ರೀತಿ ಕಷಾಯ ಮಾಡಿ ಕುಡಿದರೆ ದೇಹ ಬೆಚ್ಚಗೆ ಇರುತ್ತದೆ.

ಕಷಾಯವನ್ನು ಹಲವು ಬಗೆಯಲ್ಲಿ ಮಾಡಬಹುದು, ಇಲ್ಲಿ ತುಳಸಿ ಹಾಕಿ ಮಾಡುವ ಕಷಾಯ ರೆಸಿಪಿ ನೀಡಿದ್ದೇವೆ ನೋಡಿ.
Recipe By: Reena TK
Recipe Type: Drinks
Serves: 2
-
ಬೇಕಾಗುವ ಸಾಮಗ್ರಿ
2 ಕಪ್ ನೀರು
1 ತುಳಸಿ
1/2 ಚಮಚ ಕಾಳು ಮೆಣಸಿನ ಪುಡಿ
1 ಚಮಚ ಕಲ್ಲು ಸಕ್ಕರೆ (1 ತುಂಡು)
-
ಮಾಡುವುದು ಹೇಗೆ?
* ಈ ಕಷಾಯ ಮಾಡಲು ಬೇಕಾಗಿರುವ ಎಲ್ಲಾ ಸಾಮಗ್ರಿ ರೆಡಿಯಾಗಿ ಇಟ್ಟುಕೊಳ್ಳಿ.
*ಈಗ ಪಾತ್ರೆಗೆ ತುಳಸಿ ಎಲೆ ಹಾಕಿ ಕುದಿಸಿ.
* ತುಳಸಿ ಹಾಕಿದಾಗ ನೀರಿನ ಬಣ್ಣ ಬದಲಾದಾಗ ಅದಕ್ಕೆ ಶುಂಠಿ ಪುಡಿ (ಜಜ್ಜಿದ ಶುಂಠಿ), ಕಾಳು ಮೆಣಸಿನ ಪುಡಿ, ಕಲ್ಲು ಸಕಕ್ರೆ ಹಾಕಿ ಚೆನ್ನಾಗಿ ಕುದಿಸಿ.
* ನಂತರ ಸೋಸಿ ಬಿಸಿ ಬಿಸಿ ಕಷಾಯ ಕುಡಿಯಿರಿ.
ದಿನದಲ್ಲಿ ಮೂರು ಬಾರಿ ಈ ಕಷಾಯ ಕುಡಿದರೆ ಗಂಟಲು ಕೆರೆತ, ಕೆಮ್ಮು, ಶೀತ ಇವು ಕಡಿಮೆಯಾಗಿ ಆರಾಮ ಅನಿಸುವುದು.
- ನೀವು ಬೇಕಿದ್ದರೆ ಈ ಕಷಾಯಕ್ಕೆ ಕಲ್ಲು ಸಕ್ಕರೆ ಬದಲಿಗೆ ಸ್ವಲ್ಪ ಜೇನು ಸೇರಿಸಿಯೂ ಕುಡಿಯಬಹುದು.



Click it and Unblock the Notifications