Latest Updates
-
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ
ಕೆಮ್ಮು, ಶೀತ ಶಮನ ಮಾಡುವ ತುಳಸಿ ಕಷಾಯ ರೆಸಿಪಿ
ಮಳೆಗಾಲದಲ್ಲಿ ಶೀತ, ಗಂಟಲು ಕೆರೆತ, ಕೆಮ್ಮು ಈ ರೀತಿಯ ಸಮಸ್ಯೆಗಳು ಕಂಡು ಬರುವುದು ಸಹಜ. ಇಂಥ ಸಮಸ್ಯೆ ಕಂಡು ಬಂದರೆ ಅದಕ್ಕೆ ಕಷಾಯ ಮಾಡಿ ಕುಡಿದರೆ ಆರಾಮ ಅನಿಸುವುದು. ಅಲ್ಲದೆ ಈ ರೀತಿಯ ಕಷಾಯ ಎರಡು ವರ್ಷದ ಮೇಲಿನ ಮಕ್ಕಳಿಗೂ ಮಾಡಿ ಕೊಡಬಹುದು. ಇನ್ನು ಕೆಮ್ಮು, ಶೀತ ಏನೂ ಇಲ್ಲದಿದ್ದರೂ ವಾರಕ್ಕೆ ಒಂದೆರಡು ಬಾರಿ ಈ ರೀತಿ ಕಷಾಯ ಮಾಡಿ ಕುಡಿದರೆ ದೇಹ ಬೆಚ್ಚಗೆ ಇರುತ್ತದೆ.

ಕಷಾಯವನ್ನು ಹಲವು ಬಗೆಯಲ್ಲಿ ಮಾಡಬಹುದು, ಇಲ್ಲಿ ತುಳಸಿ ಹಾಕಿ ಮಾಡುವ ಕಷಾಯ ರೆಸಿಪಿ ನೀಡಿದ್ದೇವೆ ನೋಡಿ.
Recipe By: Reena TK
Recipe Type: Drinks
Serves: 2
-
ಬೇಕಾಗುವ ಸಾಮಗ್ರಿ
2 ಕಪ್ ನೀರು
1 ತುಳಸಿ
1/2 ಚಮಚ ಕಾಳು ಮೆಣಸಿನ ಪುಡಿ
1 ಚಮಚ ಕಲ್ಲು ಸಕ್ಕರೆ (1 ತುಂಡು)
-
ಮಾಡುವುದು ಹೇಗೆ?
* ಈ ಕಷಾಯ ಮಾಡಲು ಬೇಕಾಗಿರುವ ಎಲ್ಲಾ ಸಾಮಗ್ರಿ ರೆಡಿಯಾಗಿ ಇಟ್ಟುಕೊಳ್ಳಿ.
*ಈಗ ಪಾತ್ರೆಗೆ ತುಳಸಿ ಎಲೆ ಹಾಕಿ ಕುದಿಸಿ.
* ತುಳಸಿ ಹಾಕಿದಾಗ ನೀರಿನ ಬಣ್ಣ ಬದಲಾದಾಗ ಅದಕ್ಕೆ ಶುಂಠಿ ಪುಡಿ (ಜಜ್ಜಿದ ಶುಂಠಿ), ಕಾಳು ಮೆಣಸಿನ ಪುಡಿ, ಕಲ್ಲು ಸಕಕ್ರೆ ಹಾಕಿ ಚೆನ್ನಾಗಿ ಕುದಿಸಿ.
* ನಂತರ ಸೋಸಿ ಬಿಸಿ ಬಿಸಿ ಕಷಾಯ ಕುಡಿಯಿರಿ.
ದಿನದಲ್ಲಿ ಮೂರು ಬಾರಿ ಈ ಕಷಾಯ ಕುಡಿದರೆ ಗಂಟಲು ಕೆರೆತ, ಕೆಮ್ಮು, ಶೀತ ಇವು ಕಡಿಮೆಯಾಗಿ ಆರಾಮ ಅನಿಸುವುದು.
- ನೀವು ಬೇಕಿದ್ದರೆ ಈ ಕಷಾಯಕ್ಕೆ ಕಲ್ಲು ಸಕ್ಕರೆ ಬದಲಿಗೆ ಸ್ವಲ್ಪ ಜೇನು ಸೇರಿಸಿಯೂ ಕುಡಿಯಬಹುದು.



Click it and Unblock the Notifications